ಮಂಗಳೂರು, ಫೆ 06 : ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಜುವೆಲ್ಲರಿಯಲ್ಲಿ ರಾಘವೇಂದ್ರ ಆಚಾರ್ಯರು ಏಕಾಂಗಿಯಾಗಿದ್ದಾಗ ಆರೋಪಿಯು ಕೊಲೆಗೈದು ರಿಕ್ಷಾದಲ್ಲಿ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಆ ರಿಕ್ಷಾದ ನಂಬರ್ ಆಧರಿಸಿ ಪೊಲೀಸರು ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post