• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಒಂದೇ ಕುಟುಂಬದ ನಾಲ್ವರ ಹಂತಕ ವಾಮಂಜೂರಿನ ಪ್ರವೀಣ ಮತ್ತೆ ಟೈಲರ್ ! ಹಂತಕ ಪ್ರವೀಣ್‌ನಿಂದ ರಕ್ಷಣೆಗಾಗಿ ಕುಟುಂಬಸ್ಥರ ಮೊರೆ

Coastal Times by Coastal Times
February 6, 2024
in ಕ್ರೈಮ್ ನ್ಯೂಸ್
ಒಂದೇ ಕುಟುಂಬದ ನಾಲ್ವರ ಹಂತಕ ವಾಮಂಜೂರಿನ ಪ್ರವೀಣ ಮತ್ತೆ ಟೈಲರ್ ! ಹಂತಕ ಪ್ರವೀಣ್‌ನಿಂದ ರಕ್ಷಣೆಗಾಗಿ ಕುಟುಂಬಸ್ಥರ ಮೊರೆ
183
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.6: 1994ರಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದು ಜೀವಾವಧಿ ಶಿಕ್ಷೆಗೊಳಗಾಗಿದ್ದ ವಾಮಂಜೂರು ಪ್ರವೀಣ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಹಾಗೆಂದು, ತನ್ನ ಊರಿಗೆ ವಾಪಸಾಗಿಲ್ಲ. ಬದಲಿಗೆ, ಬೆಳಗಾವಿ ಜೈಲಿನ ಎದುರಲ್ಲೇ ತನ್ನ ಹಳೆ ವೃತ್ತಿಯನ್ನು ನೆಚ್ಚಿಕೊಂಡಿದ್ದು, ಟೈಲರಿಂಗ್ ಶಾಪ್ ಆರಂಭಿಸಿದ್ದಾನೆ.

ಒಂದೆಡೆ ತನ್ನ ಕುಟುಂಬಸ್ಥರಿಂದಲೇ ನಿರಾಕರಣೆ, ತಮ್ಮ ಮೇಲೆ ಸೇಡು ತೀರಿಸುತ್ತಾನೆಂಬ ಭಯದಲ್ಲಿ ಕುಟುಂಬಸ್ಥರು ಪ್ರವೀಣನನ್ನು ಜೈಲಿನಿಂದ ಬಿಡುಗಡೆ ಮಾಡಬಾರದೆಂದು ಬೇಡಿಕೆ ಇರಿಸಿದ್ದರು. ಆದರೆ ರಾಷ್ಟ್ರಪತಿಯವರಿಂದ ಕ್ಷಮಾದಾನ ದೊರೆತ ಬಳಿಕ ಜೈಲಿನಲ್ಲಿ ಇಟ್ಟುಕೊಳ್ಳುವಂತಿಲ್ಲ ಎಂಬ ತಾಂತ್ರಿಕ ಕಾರಣದಿಂದ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಆದರೆ ತನ್ನ ಮನೆಯವರು, ಹತ್ತಿರದ ಸಂಬಂಧಿಕರು ವಿರೋಧ ಮಾಡಿದ್ದರಿಂದ 60 ವರ್ಷದ ಪ್ರವೀಣ ಊರಿಗೆ ಮರಳಲು ಮುಂದಾಗಿಲ್ಲ. ಬದಲಿಗೆ, ತನ್ನದೇ ವೃತ್ತಿಯನ್ನು ಜೈಲಿನ ಮುಂಭಾಗದಲ್ಲೇ ಮುನ್ನಡೆಸಲು ಮುಂದಾಗಿದ್ದಾನೆ.

ಪ್ರವೀಣ್‌ನನ್ನು ಕಳೆದ ಮೇ ತಿಂಗಳಿನಲ್ಲಿ ಸನ್ನಡತೆಯ ಕಾರಣ ನೀಡಿ ಬಿಡುಗಡೆ ಮಾಡಿರುವ ಮಾಹಿತಿ ಬಂದಿತ್ತು. ಬಳಿಕ ನ.7ರಂದು ರಾತ್ರಿ ಆತ ತಮ್ಮನಿಗೆ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಹಾಗಾಗಿ ನಾವು ಜೀವಭಯದಿಂದ ಇದ್ದೇವೆ. ಪೊಲೀಸರು ಆತನ ಚಲನವಲನಗಳನ್ನು ನಿತ್ಯವೂ ಗಮನಿಸಬೇಕು. ದ.ಕ ಜಿಲ್ಲೆಗೆ ಬರದಂತೆ ಗಡೀಪಾರು ಮಾಡಬೇಕು ಎಂದು ಕುಟುಂಬಸ್ಥರು ಮಂಗ ಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನು ಪ್ರವೀಣ ಬಿಡುಗಡೆಯಾಗಲಿದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ 2022ರಲ್ಲಿ ಪೊಲೀಸ್‌ ಆಯುಕ್ತರು, ಗೃಹಸಚಿವರು, ರಾಜ್ಯಪಾಲರಿಗೆ ಮನವಿ ಮಾಡಿ ಬಿಡುಗಡೆ ಮಾಡದಂತೆ ಕೇಳಿಕೊಂಡಿದ್ದೆವು. ಆತನ ಪತ್ನಿಯೂ ಬಿಡುಗಡೆ ಮಾಡದಂತೆ ಮನವಿ ಮಾಡಿದ್ದಳು. ಆದರೆ ಪ್ರಯೋಜನ ವಾಗಲಿಲ್ಲ. ಆ ಬಳಿಕ ಬಿಡುಗಡೆಯ ಸುದ್ದಿ ತಿಳಿದ ಕೂಡಲೇ ಮತ್ತೂಮ್ಮೆ ರಕ್ಷಣೆಗಾಗಿ ಮನವಿ ಮಾಡಿದ್ದೆವು ಎಂದು ಹೇಳಿದರು.

ಪ್ರವೀಣ್‌ ತನ್ನ ತಮ್ಮನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾಗಲೂ ಪೊಲೀಸರಿಗೆ ತಿಳಿಸಿದ್ದೇವೆ. ಆದರೆ ಪೊಲೀಸರಿಂದ ಸ್ಪಂದನೆ ಸಿಕ್ಕಿಲ್ಲ. ಕುಟುಂಬಸ್ಥರ ಮನೆಗೆ ಪೊಲೀಸರು ಇದುವರೆಗೂ ಭೇಟಿ ನೀಡಿಲ್ಲ. ತನ್ನ ಸಂಬಂಧಿಕರನ್ನೇ ಕೊಲೆ ಮಾಡಿದ್ದ ಆತ ಯಾವುದೇ ಕೃತ್ಯ ಮಾಡಲು ಹಿಂಜರಿಯುವವನಲ್ಲ. ದ್ವೇಷ ಸಾಧಿಸುವ ಆತಂಕವೂ ಇದೆ. ಕುಟುಂಬದಲ್ಲಿ ಹಲವರು ಹಿರಿಯ ನಾಗರಿಕರಿದ್ದಾರೆ. ಹಾಗಾಗಿ ಪೊಲೀಸರು ನಮಗೆ ರಕ್ಷಣೆ ನೀಡ ಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿರುವ ಪ್ರವೀಣ್ ಕುಮಾರ್, ತನ್ನ ಕುಟುಂಬಸ್ಥರ ನಿರಾಕರಣೆಯಿಂದಾಗಿ ಬೆಳಗಾವಿ ಜೈಲಿನ ಉಳಿದುಕೊಂಡಿದ್ದ. ಜೈಲಿನಲ್ಲಿದ್ದಾಗ ಸಿಬಂದಿಯ ಬಟ್ಟೆ ಹೊಲಿದು ಕೊಡುತ್ತಿದ್ದ ಪ್ರವೀಣನಿಗೆ ಜೈಲಿನಲ್ಲಿ ಕೆಲಸ ಮಾಡಿದ್ದಕ್ಕಾಗಿ ಬಿಡುಗಡೆ ಸಂದರ್ಭದಲ್ಲಿ ಆರು ಲಕ್ಷ ರೂಪಾಯಿ ದುಡಿಮೆಯ ಹಣ ಸಿಕ್ಕಿತ್ತು. ಅದೇ ಹಣದಲ್ಲೀಗ ಜೈಲು ಎದುರಲ್ಲೇ ಟೈಲರಿಂಗ್ ಶಾಪ್ ಆರಂಭಿಸಿದ್ದಾನೆ. ಇದಲ್ಲದೆ, ಜೈಲಿನಲ್ಲಿದ್ದಾಗ ಸಿಬಂದಿಯ ಒಡನಾಟವನ್ನೂ ಗಳಿಸಿದ್ದ. ಈಗ ಜೈಲಿನ ಪಕ್ಕದಲ್ಲೇ ಟೈಲರಿಂಗ್ ಶಾಪ್ ಹಾಕಿದ್ದರಿಂದ ಸಿಬಂದಿಯ ಹೊಲಿಗೆಯೂ ಸಿಕ್ಕಿದ್ದು, ನಾಲ್ವರನ್ನು ಕೆಲಸಕ್ಕಿಟ್ಟು ಸ್ವಂತ ವಹಿವಾಟು ಆರಂಭಿಸಿದ್ದಾನೆ. ದಿನಕ್ಕೆ ಮೂರು ಸಾವಿರದಷ್ಟು ಕಮಾಯಿ ಆಗುತ್ತಿದ್ದು, ತಿಂಗಳಿಗೆ 90 ಸಾವಿರದಷ್ಟು ಆದಾಯ ಗಳಿಸುತ್ತಿದ್ದೇನೆ ಎಂದು ತಿಳಿಸಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಸಿಸಿಬಿ ಪೊಲೀಸರಿಂದ ಇಬ್ಬರು ಕೇರಳಿಗರ ಬಂಧನ

Next Post

ವಿಟ್ಲ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ

Related Posts

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ
ಕ್ರೈಮ್ ನ್ಯೂಸ್

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
303
Next Post
ವಿಟ್ಲ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ

ವಿಟ್ಲ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d