ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಳ್ಪ ಗ್ರಾಮದ ಮನೆಯೊಂದಕ್ಕೆ ಬಂದ ಅಪರಿಚಿತರು ಬಂದಿದ್ದು, ಕಳ್ಳರೆಂಬ ಶಂಕೆ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಬಂದಾಗ ಅಪರಿಚಿತರು ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಬಳ್ಪದ ಕುಂಜತ್ತಾಡಿ ಕೊಡಂಗುಳಿ ಸೋಮಪ್ಪ ಗೌಡ ಅವರ ಮನೆಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ನಾಯಿ ಬೊಗಳಿದ ಶಬ್ದ ಕೇಳಿ ಸೋಮಪ್ಪ ಗೌಡರ ಅತ್ತಿಗೆ ಸಾವಿತ್ರಿ ಬಂದು ನೋಡಿದಾಗ ಕೊಟ್ಟಿಗೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ನಿಂತಿದ್ದ. ವಿಚಾರಿಸಿದಾಗ ಯಾವುದೇ ಉತ್ತರ ನೀಡಲಿಲ್ಲ. ಕೂಡಲೇ ಮಹಿಳೆ ಮನೆಯಿಂದ ಕೋವಿ ಹಿಡಿದುಕೊಂಡು ಹೊರಗೆ ಬಂದರು. ಈ ವೇಳೆ ಹೊರಗೆ ಇಬ್ಬರು ಕಂಡುಬಂದರು. ಅವರು ಮಹಿಳೆಯ ಕೈಯಲ್ಲಿ ಕೋವಿ ಇರುವುದನ್ನು ಗಮನಿಸಿ ಪರಾರಿಯಾದರು. ಬಳಿಕ ಮಹಿಳೆ ಸ್ಥಳೀಯರಿಗೆ ತಿಳಿಸಿದ್ದು, ಎಲ್ಲರೂ ಸೇರಿ ಹುಡುಕಾಡಿದರೂ ಅವರ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸರಿಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post