• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಮೇಶ್ವರಂ ಕೆಫೆ ಸ್ಫೋಟ: ಆರೋಪಿ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

Coastal Times by Coastal Times
March 6, 2024
in ಕ್ರೈಮ್ ನ್ಯೂಸ್
ರಾಮೇಶ್ವರಂ ಕೆಫೆ ಸ್ಫೋಟ: ಆರೋಪಿ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ
111
VIEWS
WhatsappTelegramShare on FacebookShare on Twitter

ಬೆಂಗಳೂರು, (ಮಾರ್ಚ್ 06): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ ಎನ್‌ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ,  ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ.

ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನಎನ್‌ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆ(ಮಾರ್ಚ್ 05) ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದೆ. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ ಎನ್‌ಐಎ ಅಧಿಕಾರಿಗಳಿಗೆ ನೀಡಿದ್ದಾರೆ.

ಇನ್ನು  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್​ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭರ್ಜರಿ ಸಿಕ್ಸರ್ ಸಿಡಿಸಿ ಕಾರಿನ ಗಾಜು ಪುಡಿ ಪುಡಿ ಮಾಡಿದ ಎಲ್ಲಿಸ್ ಪೆರ್‍ರಿ

Next Post

ರೋಹನ್ ಸಿಟಿ ಸ್ಮಾರಕ ಮೈಲಿಗಲ್ಲು ಸಾಧಿಸಿದೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು ರೋಹನ್ ಕಾರ್ಪೊರೇಶನ್,

Related Posts

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !
ಕ್ರೈಮ್ ನ್ಯೂಸ್

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
31
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
75
Next Post
ರೋಹನ್ ಸಿಟಿ ಸ್ಮಾರಕ ಮೈಲಿಗಲ್ಲು ಸಾಧಿಸಿದೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು ರೋಹನ್ ಕಾರ್ಪೊರೇಶನ್,

ರೋಹನ್ ಸಿಟಿ ಸ್ಮಾರಕ ಮೈಲಿಗಲ್ಲು ಸಾಧಿಸಿದೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು ರೋಹನ್ ಕಾರ್ಪೊರೇಶನ್,

Discussion about this post

Recent News

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
31
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d