ಥೋಮಸ್ ಚೆರಿಯನ್ ನೀಲಿಯಾರ ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವೀಧರರು. ಕಳೆದ 25 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಸದಸ್ಯರು ಹಾಗೂ ಕೇರಳದ ಪ್ರಭಾರಿ ಆಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ.
ಥೋಮಸ್ (ಸುರೇಶ್) ನೀಲಿಯಾರ ಅವರು ಸರ್ವಜ್ಞನಗರ ಕ್ಷೇತ್ರದ ಬಿಜೆಪಿ ನಾಮಾಂಕಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ನೀಲಿಯಾರ ಮೂಲತಃ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದ ನಿವಾಸಿಯಾಗಿದ್ದು, ಸರ್ವಜ್ಞ ನಗರದ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು
ಕಣಕ್ಕಿಳಿಸಿದಲ್ಲಿ ಉತ್ತಮ ಫಲಿತಾಂಶ ಸಿಗುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲೂ ಇದು ಬಿಜೆಪಿಗೆ ನೆರವಾಗಬಹುದು ಎಂದು ಹೇಳಲಾಗಿದೆ.
ಸರ್ವಜ್ಞ ನಗರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆಯು ಅಧಿಕವಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post