• About us
  • Contact us
  • Disclaimer
Tuesday, July 8, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

Coastal Times by Coastal Times
June 6, 2025
in ರಾಜ್ಯ
ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
29
VIEWS
WhatsappTelegramShare on FacebookShare on Twitter

ಬೆಂಗಳೂರು: ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತವಾಗಿ 11 ಮಂದಿ ಸಾವು ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿದ್ದ ಆರ್​​ಸಿಬಿ ಹಾಗೂ ಡಿಎನ್ಎ ಸಂಸ್ಥೆಯ ನಾಲ್ವರನ್ನು ಜೂನ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ‌.

ನಗರದ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಬಂಧಿತ ಆರೋಪಿಗಳಾದ ಆರ್​​ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಸಿಬ್ಬಂದಿ ಸುಮಂತ್, ಡಿಎನ್ಎ ಸಂಸ್ಥೆಯ ಕಿರಣ್, ಸುನೀಲ್ ಮ್ಯಾಥ್ಯೂ ಅವರನ್ನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಜೂನ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ‌.

ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮೇರೆಗೆ ಇಂದು ಬೆಳ್ಳಂಬೆಳ್ಳಗೆ ನಾಲ್ವರು ಆರೋಪಿಗಳನ್ನ ಬಂಧಿಸಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ವಿಕ್ಟರಿ ಪರೇಡ್ ಬಗ್ಗೆ ಆರ್​​ಸಿಬಿ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು ಯಾರು ? ಅದನ್ನ ಪೋಸ್ಟ್ ಮಾಡಲು ಹೇಳಿದ್ದು ಯಾರು ? ಪೊಲೀಸರ ಅನುಮತಿ ಇಲ್ಲದಿರುವ ವಿಚಾರ ನಿಮಗೆ ತಿಳಿದಿತ್ತೆ ಎಂಬುದು ಸೇರಿದಂತೆ ಇನ್ನಿತರ ಪ್ರಶ್ನೆಗಳನ್ನ ಆರೋಪಿ ನಿಖಿಲ್ ಸೋಸಲೆ ಅವರನ್ನ ಕೇಳಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೂ ಮುನ್ನ ತಮ್ಮ ಬಂಧನ ಪ್ರಶ್ನಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​​ಸಿಬಿ) ಫ್ರಾಂಚೈಸಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತ್ತು.

ಇಂದು ಬೆಳಗ್ಗೆ ಬಂಧಿಸಿದ್ದ ಪೊಲೀಸರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಘಟನೆಯಲ್ಲಿ ಅರ್ಜಿದಾರ ನಿಖಿಲ್ ಸೋಸಲೆ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನಸುಕಿನ ನಾಲ್ಕು ಗಂಟೆಯ ಸಂದರ್ಭದಲ್ಲಿ ಬಂಧಿಸಲಾಗಿತ್ತು. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಬಂಧನ ಮಾಡಲಾಗಿದೆ. ಘಟನೆ ನಡೆದಿರುವುದಕ್ಕೆ ಕಾರಣವೇನು ಎಂಬುದಕ್ಕೆ ತನಿಖೆಗೆ ಆದೇಶ ನೀಡಿದ್ದು, ಘಟನೆಗೆ ಕಾರಣ ಏನು ಎಂಬುದನ್ನು ಈವರೆಗೂ ಪತ್ತೆ ಹಚ್ಚಿಲ್ಲ. ಇದರ ನಡುವೆ ಅರ್ಜಿದಾರರನ್ನು ಬಂಧಿಸಿರುವುದು ಅಕ್ರಮ ಮತ್ತು ಕಾನೂನು ಬಾಹಿರವಾಗಿದ್ದು ನೈಸರ್ಗಿಕ ನ್ಯಾಯ ತತ್ವಕ್ಕೆ ತದ್ವಿರುದ್ಧವಾಗಿವೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೋಸಲೆ ತನ್ನ ಅರ್ಜಿಯಲ್ಲಿ ಕೋರಿದ್ದರು.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿ, 56 ಜನ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಿರ್ಮಾಣ ಹಂತದ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡದಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

Next Post

ಮಂಗಳೂರು : ಯೆಯ್ಯಾಡಿ ಬಾರ್ ನಲ್ಲಿ ಯುವಕನಿಗೆ ತಂಡದಿಂದ ಚೂರಿ ಇರಿತ – ಸ್ಥಿತಿ ಚಿಂತಾಜನಕ

Related Posts

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಯುಗ ಪ್ರವರ್ತಕ ಅವಳಿ ಯೋಜನೆಗಳ ಅನಾವರಣ: ಗಣ್ಯರ ಸಮ್ಮುಖದಲ್ಲಿ, ಪತ್ರಿಕಾ ಸಮಾವೇಶದಲ್ಲಿ ಘೋಷಣೆ
ರಾಜ್ಯ

ಸ್ಯಾಮಿಸ್ ಡ್ರೀಮ್‌ಲ್ಯಾಂಡ್‌ನಿಂದ ಯುಗ ಪ್ರವರ್ತಕ ಅವಳಿ ಯೋಜನೆಗಳ ಅನಾವರಣ: ಗಣ್ಯರ ಸಮ್ಮುಖದಲ್ಲಿ, ಪತ್ರಿಕಾ ಸಮಾವೇಶದಲ್ಲಿ ಘೋಷಣೆ

May 22, 2025
26
Next Post
ಮಂಗಳೂರು : ಯೆಯ್ಯಾಡಿ ಬಾರ್ ನಲ್ಲಿ ಯುವಕನಿಗೆ ತಂಡದಿಂದ ಚೂರಿ ಇರಿತ – ಸ್ಥಿತಿ ಚಿಂತಾಜನಕ

ಮಂಗಳೂರು : ಯೆಯ್ಯಾಡಿ ಬಾರ್ ನಲ್ಲಿ ಯುವಕನಿಗೆ ತಂಡದಿಂದ ಚೂರಿ ಇರಿತ - ಸ್ಥಿತಿ ಚಿಂತಾಜನಕ

Discussion about this post

Recent News

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
1
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d