ಪುಣೆ: ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆಗಳನ್ನು ಓದುವಂತೆ ಹೇಳಿದ್ದಕ್ಕಾಗಿ ಮತ್ತು ಬಾಲಕಿಯರ ಶೌಚಾಲಯದ ಹೊರ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಹಲವಾರು ಬಜರಂಗದಳ ಕಾರ್ಯಕರ್ತರು ಶಾಲೆಗೆ ಆಗಮಿಸಿ ಶಾಲಾ ಆವರಣದಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರು ಪ್ರಾಂಶುಪಾಲರಿಗೆ ಬೆಂಬಲವಾಗಿ ನಿಂತಿದ್ದಾರೆಂದು ತಿಳಿದು ಬಂದಿದೆ. ಘಟನೆ ಕುರಿತು ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ.
Discover more from Coastal Times Kannada
Subscribe to get the latest posts sent to your email.
Discussion about this post