• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌ ಟೋಲ್‌ ತೆರವು: 101 ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

Coastal Times by Coastal Times
July 6, 2024
in ಕರಾವಳಿ
ಸುರತ್ಕಲ್‌ ಟೋಲ್‌ ತೆರವು: 101 ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
44
VIEWS
WhatsappTelegramShare on FacebookShare on Twitter

ಮಂಗಳುರು: ಸುರತ್ಕಲ್‌ ಟೋಲ್‌ ಗೇಟ್‌ ವಿರುದ್ಧ ಏಳು ವರ್ಷ ಹೋರಾಟ ನಡೆಸಿ ತೆರವುಗೊಳಿಸುವಲ್ಲಿ ಶ್ರಮಿಸಿದ್ದ “ಟೋಲ್‌ಗೇಟ್‌ ವಿರೋಧಿ  ಹೋರಾಟ ಸಮಿತಿ, ಸುರತ್ಕಲ್‌’ನ 101 ಸದಸ್ಯರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

2022ರ ಅಕ್ಟೋಬರ್ 18ರಂದು ಪೊಲೀಸರ ಸರ್ಪಗಾವಲು ಭೇದಿಸಿ ಸಾವಿರಾರು ಪ್ರತಿಭಟನಾಕಾರರು ಟೋಲ್ ಗೇಟ್ ನುಗ್ಗಿದ್ದರು. ಟೋಲ್ ಸಂಗ್ರಹಕ್ಕಾಗಿ ಅಡ್ಡ ಇರಿಸಿದ್ದ ಕಂಬಗಳನ್ನು, ಟೋಲ್ ಬೂತ್ ಗಳನ್ನು ಒಡೆದು ಹಾಕಿದ್ದಲ್ಲದೆ, ಅದರ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಮುಖಂಡ ಮಿಥುನ್ ರೈ ಪೊಲೀಸರನ್ನು ಲೆಕ್ಕಿಸದೆ ಸ್ವತಃ ಟೋಲ್ ಬೂತ್ ಮೇಲೇರಿ ಕಪ್ಪು ಬಾವುಟ ಬೀಸಿದ್ದರು. ಮುನೀರ್ ಕಾಟಿಪಳ್ಳ, ಎಂಜಿ ಹೆಗ್ಡೆ, ಪ್ರತಿಭಾ ಕುಳಾಯಿ ಹೀಗೆ ಹತ್ತಾರು ಮುಖಂಡರ ನೇತೃತ್ವದಲ್ಲಿ ನೂರಾರು ಜನರು ಟೋಲ್ ಗೇಟ್ ವಿರುದ್ಧ ಬೀದಿಗಿಳಿದಿದ್ದರು.

ಅಂದಿನ ಪೊಲೀಸ್ ಕಮಿಷನರ್ ಶಶಿಕುಮಾರ್, 144 ಸೆಕ್ಷನ್ ಜಾರಿಗೊಳಿಸಿದ್ದರೂ ಅದನ್ನು ಲೆಕ್ಕಿಸದೆ ರಸ್ತೆ ತಡೆ ಮಾಡಿದ್ದರು. ಆನಂತರ, ಹೆಚ್ಚುವರಿ ಪೊಲೀಸರು ಬಂದು ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಲ್ಲದೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಆರೋಪಗಳನ್ನೊಡ್ಡಿ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಆನಂತರ, ಎರಡು ವಾರ ಕಾಲ ಸುರತ್ಕಲ್ ಟೋಲ್ ಗೇಟ್ ಬಳಿಯಲ್ಲೇ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷ ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಧರಣಿಯೂ ನಡೆದಿತ್ತು. ರಸ್ತೆ ತಡೆ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು 101 ಮಂದಿಯ ವಿರುದ್ಧ ಚಾರ್ಜ್ ಶೀಟ್ ಹಾಕಿದ್ದರು.

ಹೋರಾಟಗಾರರ ಮೇಲೆ ಹಿಂದಿನ ಬಿಜೆಪಿ ಸರಕಾರ ಮೊಕದ್ದಮೆ ಹೂಡಿತ್ತು. ನ್ಯಾಯಾಲಯದಿಂದ ಸಮನ್ಸ್‌ ಜಾರಿಯಾದ ಹಿನ್ನೆಲೆಯಲ್ಲಿ ಶನಿವಾರ ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು. ಮಾಜಿ ಕಾರ್ಪೊರೇಟರ್‌ ಪ್ರಜ್ವಲ್‌ ಕುಳಾಯಿ ತಮ್ಮ ಜಮೀನಿನ ದಾಖಲೆಯ ಮೂಲಕ ಜಾಮೀನು ಭದ್ರತೆ ಒದಗಿಸಿದರು. ಹಿರಿಯ ನ್ಯಾಯವಾದಿ ದಿನೇಶ್‌ ಹೆಗ್ಡೆ ಉಳೆಪಾಡಿ ನೇತೃತ್ವದಲ್ಲಿ ಚರಣ್‌ ಶೆಟ್ಟಿ ಪಂಜಿಮೊಗರು, ಅಶ್ವಿ‌ನಿ ಹೆಗ್ಡೆ, ನಿತಿನ್‌ ಕುತ್ತಾರ್‌, ಅನ್ನು ಮಲಿಕ್‌, ಮನೋಜ್‌ ವಾಮಂಜೂರು, ಹಸೈನಾರ್‌ ಗುರುಪುರ, ಶೆರ್ವಿನ್‌ ಸೊಲೊಮಾನ್‌ ಮೊದಲಾದ ಹೋರಾಟಗಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರು, ವಿವಿಧ ಸಮಾನ ಮನಸ್ಕ ಪಕ್ಷದವರು ಹೋರಾಟದಲ್ಲಿ ಭಾಗವಹಿಸಿದ್ದು, ಎಲ್ಲರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಹಿಂಪಡೆಯುವಂತೆ ಈಗಾಗಲೇ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಉಸ್ತುವಾರಿ ಸಚಿವ ಬಳಿಯೂ ಈ ವಿಚಾರದ ಕುರಿತು ಚರ್ಚಿಸಿದ್ದೇವೆ. ಪ್ರಕರಣದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಬೈಕಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಯುವಕ ಸಿಸಿಬಿ ಬಲೆಗೆ

Next Post

ಮಂಗಳೂರು ಸರ್ಕಿಟ್ ಹೌಸ್ – ಬಿಜೈ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ

Related Posts

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ
ಕರಾವಳಿ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ
ಕರಾವಳಿ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
Next Post
ಮಂಗಳೂರು ಸರ್ಕಿಟ್ ಹೌಸ್ – ಬಿಜೈ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ

ಮಂಗಳೂರು ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ

Discussion about this post

Recent News

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d