• About us
  • Contact us
  • Disclaimer
Thursday, August 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

Coastal Times by Coastal Times
August 6, 2026
in ರಾಜ್ಯ
ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
8
VIEWS
WhatsappTelegramShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​​ಐಆರ್) ಪೂರ್ಣಗೊಳ್ಳಲು ಮೂರು ದಿನಗಳು ಮಾತ್ರ ಬಾಕಿಯಿದ್ದು, ಈವರೆಗೆ ಪ್ರಕ್ರಿಯೆಯಲ್ಲಿ ಭಾಗವಹಿಸದವರು ಆಗಸ್ಟ್ 8ರೊಳಗೆ ಗಣತಿ ನಮೂನೆ ಅರ್ಜಿ ಪಡೆದು ಬಿಎಲ್​ಎಗಳಿಗೆ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಬುಧವಾರ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಜೂನ್ 30ರಿಂದ ಆಗಸ್ಟ್​​ 8ರವರೆಗೆ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. 5.54 ಕೋಟಿ ಮತದಾರರಿಗೆ ನೀಡಲಾಗಿದ್ದ ಅರ್ಜಿ ನಮೂನೆ ಎಎಸ್‌ಡಿಡಿಒ (ಅನುಮಾನಾಸ್ಪದ/ಸ್ಥಳಾಂತರಗೊಂಡ/ಮೃತ/ದ್ವಿಪ್ರತಿ) ಒಳಗೊಂಡಂತೆ ನಾಳೆ(ಗುರುವಾರ)ಯೊಳಗೆ ಶೇಕಡ 100ರಷ್ಟು ಡಿಜಿಟಲಿಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 22,977 ಮತದಾರರು ಪಡೆದಿದ್ದ ಅರ್ಜಿ ವಾಪಸ್ ನೀಡಿಲ್ಲ. ಆಗಸ್ಟ್​ 8ರೊಳಗೆ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಾಧ್ಯಮಗೋಷ್ಟಿಯಲ್ಲಿ ಮನವಿ ಮಾಡಿದ್ದಾರೆ.

ಸಹಿಗೆ ನಿರಾಕರಿಸಿದ 4.88 ಲಕ್ಷ ಮತದಾರರು: ರಾಜ್ಯದಲ್ಲಿ 1.11 ಕೋಟಿ ಎಸ್​ಡಿಡಿಒ ಮತದಾರರು ಪತ್ತೆಯಾಗಿದ್ದಾರೆ. ಶಾಶ್ವತವಾಗಿ ಸ್ಥಳಾಂತರಗೊಂಡವರು 66.64 ಲಕ್ಷ, ಮೃತಪಟ್ಟವರು 16.30 ಲಕ್ಷ, ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವವರು 6.89 ಲಕ್ಷ ಹಾಗೂ ಸಹಿಗೆ ನಿರಾಕರಿಸಿದ ಮತದಾರರು 4.88 ಲಕ್ಷ ಜನರು ಇದ್ದಾರೆ. ಈ ಪೈಕಿ 49 ಲಕ್ಷ ಮಂದಿ ಬೆಂಗಳೂರಿನವರೇ ಆಗಿದ್ದಾರೆ. ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಬಿಎಲ್​ಒಗಳು, ಸೂಪರ್​ವೈಸರ್​​ಗಳ ಸಹಾಯದಿಂದ ನಿಗದಿತ ಅವಧಿಯೊಳಗೆ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲು ಸಹಕರಿಸಿದವರಿಗೆ ಚುನಾವಣಾಧಿಕಾರಿ ಧನ್ಯವಾದ ಅರ್ಪಿಸಿದ್ದಾರೆ.

ಬಿಎಲ್ಗಒಳು ಎಎಸ್‌ಡಿಡಿಒ ಮತದಾರರ ವಿವರವನ್ನು ರಾಜಕೀಯ ಪಕ್ಷಗಳ ಬೂತ್‌ ಮಟ್ಟದ ಏಜೆಂಟ್‌ಗಳಿಗೆ (ಬಿಎಲ್‌ಎ) ಈಗಾಗಲೇ ಕೊಟ್ಟಿದ್ದಾರೆ. ಎಎಸ್‌ಡಿಡಿಒ ಮತದಾರರ ಪಟ್ಟಿಯು ಬಿಎಲ್‌ಒಗಳ ಬಳಿ ಲಭ್ಯವಿದ್ದು, ಅರ್ಹ ಮತದಾರರಿಗೆ ಯಾವುದೇ ಗೊಂದಲವಿದ್ದರೆ ಈ ಪಟ್ಟಿ ಪರಿಶೀಲಿಸಬಹುದು. ಆಗಸ್ಟ್​​ 17ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಆ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟು ಹೋಗಿದ್ದರೆ ಫಾರ್ಮ್‌-6ರ ಜೊತೆ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಅಂತಿಮ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶವಿದೆ. ಹೆಸರು ಸೇರಿಸಲು ಹಾಗೂ ತಿದ್ದುಪಡಿ ಮಾಡಲು ಈವರೆಗೂ 12.20 ಲಕ್ಷ ಮತದಾರರು ಅರ್ಜಿ ಸಲ್ಲಿಸಿದ್ದಾರೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದರು.

ಸದ್ಯದ ಎಸ್​ಐಆರ್​ ಮಾಹಿತಿ: 

ಒಟ್ಟು ಮತದಾರರ ಸಂಖ್ಯೆ – 5,54,32,314
ಎಸ್​ಡಿಡಿಒ ಒಟ್ಟು ಮತದಾರರು – 1,11,04,705
ನಾಪತ್ತೆಯಾದವರು – 66,64,943
ಶಾಶ್ವತವಾಗಿ ಸ್ಥಳಾಂತರವಾದವರು – 66,64,943
ಮೃತಪಟ್ಟವರು – 16,30,872
ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವವರು – 6,89,904
ಗಣತಿ ನಮೂನೆಗೆ ಸಹಿ ಹಾಕದವರು – 4,88,974

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

Related Posts

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
9
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25

Discussion about this post

Recent News

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
8
ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

August 6, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

ಬೆಳ್ತಂಗಡಿ : ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

August 6, 2026
ಉಳ್ಳಾಲ; ಬಾಡಿಗೆ ಮನೆ ಇದೆಯೇ? ಹೇಳಿ ಮನೆಗೆ ಎಂಟ್ರಿ ಕೊಟ್ಟ ಖದೀಮರು ; ವೃದ್ಧೆಗೆ ಹಲ್ಲೆ ಮಾಡಿ 3 ಲಕ್ಷ ರೂ. ಚಿನ್ನ ದೋಚಿ ಪರಾರಿ

ಉಳ್ಳಾಲ; ಬಾಡಿಗೆ ಮನೆ ಇದೆಯೇ? ಹೇಳಿ ಮನೆಗೆ ಎಂಟ್ರಿ ಕೊಟ್ಟ ಖದೀಮರು ; ವೃದ್ಧೆಗೆ ಹಲ್ಲೆ ಮಾಡಿ 3 ಲಕ್ಷ ರೂ. ಚಿನ್ನ ದೋಚಿ ಪರಾರಿ

August 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d