• About us
  • Contact us
  • Disclaimer
Monday, September 15, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ 14 ಉಗ್ರರ ಪ್ರವೇಶ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯ ಬಂಧನ

Coastal Times by Coastal Times
September 6, 2025
in ಕ್ರೈಮ್ ನ್ಯೂಸ್, ರಾಷ್ಟ್ರೀಯ ಸುದ್ದಿ
400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ 14 ಉಗ್ರರ ಪ್ರವೇಶ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯ ಬಂಧನ
50
VIEWS
WhatsappTelegramShare on FacebookShare on Twitter

ಮುಂಬೈ, ಮಹಾರಾಷ್ಟ್ರ: 14 ಭಯೋತ್ಪಾದಕರು 400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ ನಗರಕ್ಕೆ ಪ್ರವೇಶಿಸಿದ್ದಾರೆ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪರಾಧ ವಿಭಾಗವು ಆರೋಪಿ ಅಶ್ವಿನಿಕುಮಾರ್ ಸುಪ್ರಾ ಅವರನ್ನು ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 79ರಲ್ಲಿರುವ ಅವರ ನಿವಾಸದಿಂದ ಬಂಧಿಸಿದೆ. ಬೆದರಿಕೆ ಕರೆ ಮಾಡಿದ 24 ಗಂಟೆಯೊಳಗೆ ಆರೋಪಿ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮುಂಬೈ ಟ್ರಾಫಿಕ್​ ಪೊಲೀಸ್​ ಹೆಲ್ಪ್​ಲೈನ್​ಗೆ ಆರೋಪಿ ಈ ಬೆದರಿಕೆ ಸಂದೇಶವನ್ನು ಕಳುಹಿಸಿದ್ದ. ಸಂದೇಶದಲ್ಲಿ 14 ಮಾನವ ಬಾಂಬ್‌ಗಳನ್ನು ಇಟ್ಟುಕೊಂಡಿರುವ ಭಯೋತ್ಪಾದಕರು ಮತ್ತು 400 ಕೆಜಿ ಆರ್‌ಡಿಎಕ್ಸ್‌ನೊಂದಿಗೆ ನಗರಕ್ಕೆ ಪ್ರವೇಶಿಸಿದ್ದು, ನಗರವನ್ನು ಸ್ಫೋಟಿಸಲು 34 ವಾಹನಗಳಲ್ಲಿ ಬಾಂಬ್​ ಇರಿಸಿದ್ದಾರೆ ಎಂದು ಸಂದೇಶ ಕಳುಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಬೆದರಿಕೆ ಸಂದೇಶದ ಬೆನ್ನಲ್ಲೇ ನಗರ ಪೊಲೀಸರು ಎಚ್ಚರವಹಿಸಿದ್ದರು. ಗಣೇಶ ಹಬ್ಬದ 10ನೇ ದಿನ ಅನಂತ ಚತುರ್ದಶಿಯಂದು ಗಣೇಶ ವಿಸರ್ಜನೆ ನಿಮಿತ್ತ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲದೇ ಈ ಘಟನೆ ಕುರಿತು ವರ್ಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆದರಿಕೆ ಕರೆಯನ್ನು ಗಂಭೀರವಾಗಿ ಸ್ವೀಕರಿಸಿ ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾದರು. ಈ ಪ್ರಕರಣ ಕುರಿತು ಕ್ರೈಂ ಬ್ರಾಂಚ್​ ತನಿಖಗೆ ಕೈಗೆತ್ತಿಕೊಂಡಿತು. ವಾಟ್ಸ್​ಆ್ಯಪ್​ಗೆ ರವಾನೆಯಾದ ಸಂದೇಶದ ಫೋನ್​ ನಂಬರ್​ ಪತ್ತೆಗೆ ಕ್ರೈಂ ಬ್ರಾಂಚ್​ ಮುಂದಾಗಿತ್ತು. ಆದರ ಅದು ಗೌತಮ್​ ಬುದ್ದ ನಗರ್​ನಿಂದ ಬಂದಿರುವುದು ತಿಳಿದು ನೋಯ್ಡಾಗೆ ಪ್ರಯಾಣ ಬೆಳೆಸಿದ್ದು ಅಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ಸಂದೇಶ ಕಳುಹಿಸಲು ಬಳಸಲಾಗಿದೆ ಎನ್ನಲಾದ ಆತನ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಮುಂಬೈಗೆ ಕರೆ ತಂದ ಬಳಿಕ ಮರು ದಿನ ಕೋರ್ಟ್​ ಮುಂದೆ ಹಾಜರು ಪಡಿಸಲಾಯಿತು. ಪ್ರಾಥಮಿಕ ಮಾಹಿತಿಯಲ್ಲಿ ಆರೋಪಿ ಜ್ಯೋತಿಷಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ತಿಳಿದು ಬಂದಿದೆ. ಆರೋಪಿ ಈ ರೀತಿ ಬೆದರಿಕೆ ಕರೆ ಮಾಡಲು ಕಾರಣ ಏನು ಎಂಬ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆರೋಪಿ ಉದ್ದೇಶಗಳು, ಮಾನಸಿಕ ಸ್ಥಿತಿ ಮತ್ತು ಅವನಿಗೆ ಉಗ್ರಗಾಮಿ ಗುಂಪುಗಳೊಂದಿಗೆ ಯಾವುದೇ ಸಂಪರ್ಕವಿದೆಯೇ ಎಂಬ ಕುರಿತು ವಿವರವಾದ ತನಿಖೆ ಸಾಗುತ್ತಿದೆ. ಆತನ ಹೇಳಿಕೆಗಳ ಸತ್ಯಾಸತ್ಯತೆ ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್; ಪತ್ನಿಯ ಅಶ್ಲೀಲ ದೃಶ್ಯ ಚಿತ್ರೀಕರಣ, ಸ್ನೇಹಿತನನ್ನು ಕೊಲೆಗೈದು ಎಸ್ ಟಿಪಿ ಟ್ಯಾಂಕ್ ಗೆ ಹಾಕಿ ಕೃತ್ಯ, ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

Next Post

ಪಡುಬಿದ್ರೆ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರ ಬಂಧನ

Related Posts

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

September 13, 2025
91
ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ

September 13, 2025
4.4k
Next Post
ಪಡುಬಿದ್ರೆ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರ ಬಂಧನ

ಪಡುಬಿದ್ರೆ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರ ಬಂಧನ

Discussion about this post

Recent News

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
24
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d