• About us
  • Contact us
  • Disclaimer
Friday, November 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

Coastal Times by Coastal Times
October 6, 2023
in ಕ್ರೈಮ್ ನ್ಯೂಸ್
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ
108
VIEWS
WhatsappTelegramShare on FacebookShare on Twitter

ಮಂಗಳೂರು: ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಜ್ಜೋಡಿ ಬಿಕರ್ನಕಟ್ಟೆಯ ಬರ್ನಾಡ್‌ ರೋಶನ್‌ ಮಸ್ಕರೇನಸ್‌(41) ಬಂಧಿತ ಆರೋಪಿ. ಈತ ಮಂಗಳೂರು ನಗರದ ಕಂಕನಾಡಿ ಪಂಪ್‌ವೆಲ್‌ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್‌ ಕ್ರೌನ್‌ ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ “ಹೆಲ್ಪ್ ಲೈನ್ ಮಂಗಳೂರು’ ಎಂಬ ಹೆಸರಿನ ಸಂಸ್ಥೆಯಲ್ಲಿ ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಅಂಕ ಪ್ರಮಾಣಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಟ್ಟು ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ.

ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯಿಂದ ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್‌ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋ ಮೆಟ್ರಿಕ್ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ವೀರ ರಾಣಿ ಅಬ್ಬಕ್ಕ ಪ್ರತಿಮೆ ಎದುರು ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್

Next Post

ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!

Related Posts

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ
ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

November 20, 2025
42
300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
66
Next Post
ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!

ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!

Discussion about this post

Recent News

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
0
ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

November 21, 2025
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

November 21, 2025
ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

November 20, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d