• About us
  • Contact us
  • Disclaimer
Friday, November 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!

Coastal Times by Coastal Times
October 6, 2023
in ಕ್ರೈಮ್ ನ್ಯೂಸ್
ಉಳ್ಳಾಲ | ಶಿಕ್ಷಕಿ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು! ಇಷ್ಟು ಸಣ್ಣ ವಯಸ್ಸಲ್ಲಿ ಇಷ್ಟೊಂದು ಕ್ರಿಮಿನಲ್‌ ಐಡಿಯಾ!
871
VIEWS
WhatsappTelegramShare on FacebookShare on Twitter

ಉಳ್ಳಾಲ : ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ  ಕಡಿಮೆ ಅಂಕ ನೀಡಿದರೆಂಬ ದ್ವೇಷಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು  ಗಣಿತ ಶಿಕ್ಷಕಿಯ  ನೀರಿನ ಬಾಟಲಿಗೆ ಅವಧಿ ಮುಗಿದ ಮಾತ್ರೆ ಹಾಕಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಮಾತ್ರೆ ಬೆರೆತ ನೀರನ್ನು ಸೇವಿಸಿದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.

ಉಳ್ಳಾಲದ ಖಾಸಗಿ ಶಾಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ತುರ್ತು ಎಸ್ ಡಿಎಂಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ನಿರ್ಧರಿಸಿದೆ. ಶಾಲೆಯಲ್ಲಿ ನಡೆಯುವ ಘಟಕ ಪರೀಕ್ಷೆಯ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೇ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಅನ್ನುವ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು.

ಇದರ ಸೇಡು ತೀರಿಸುವ ಸಲುವಾಗಿ ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ಆರನೇ ತರಗತಿ ವಿದ್ಯಾರ್ಥಿನಿ ಶಿಕ್ಷಕಿಯ ನೀರಿನ ಬಾಟಲಿಗೆ ಮಾತ್ರೆ ಹಾಕಲು ಪ್ಲ್ಯಾನ್‌ ಮಾಡಿದ್ದಳು. ಅದರಂತೆ ಎಲ್ಲಿಂದಲೋ ಅವಧಿ ಮುಗಿದ ಮಾತ್ರೆಗಳನ್ನು ತಂದಿದ್ದಳು. ಸ್ಟಾಫ್ ರೂಮ್ ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಇಬ್ಬರೂ ವಿದ್ಯಾರ್ಥಿನಿಯರು ಸೇರಿ ಗಣಿತ ಶಿಕ್ಷಕಿಗೆ ಸೇರಿದ ವಾಟರ್ ಬಾಟಲಿಗೆ ತಾವು ತಂದ ಮಾತ್ರೆಗಳನ್ನು ಹಾಕಿದ್ದಾರೆ. ಇದೇ ಬಾಟಲಿಯ ನೀರನ್ನು ಗಣಿತ ಶಿಕ್ಷಕಿ ಜತೆ ಇನ್ನೋರ್ವ ಶಿಕ್ಷಕಿಯೂ ಕುಡಿದಿದ್ದಾರೆ.

ಸ್ವಲ್ಪ ಹೊತ್ತಿನಲ್ಲಿ ಶಿಕ್ಷಕಿಯೊಬ್ಬರಿಗೆ ಅಸ್ವಸ್ಥತೆ ಕಂಡುಬಂದಿದೆ. ಇನ್ನೋರ್ವ ಶಿಕ್ಷಕಿಗೆ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ.

ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ಕಾರುಬಾರು ಮಾಡುವ ವಿದ್ಯಾರ್ಥಿನಿಯ ನಡೆಗೆ ಇಡೀ ಶಾಲಾ ಆಡಳಿತ ಮಂಡಳಿ, ಹೆತ್ತವರು ನಿಬ್ಬೆರಗಾಗಿದ್ದಾರೆ‌. ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕ ಮತ್ತು ಸ್ಪರ್ಧಾತ್ಮಕ ರೀತಿ ನಡೆಸುತ್ತಿರುವುದು, ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್ ಗಳಂತೆ ಬಿಂಬಿಸುತ್ತಿರುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸುತ್ತಿದ್ದಾರೆ ಎಂಬ ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.

ಪ್ರಕರಣ ಕಾನೂನು ವ್ಯಾಪ್ತಿಗೆ ಬಂದರೆ ಮಾತ್ರ ಕಾನೂನಿನೊಂದಿಗೆ ಸಂಘರ್ಷ ಮೆರೆದ ಅಪ್ರಾಪ್ತ ವಿದ್ಯಾರ್ಥಿನಿಯರನ್ನ ಸಲಹಾ ಕೇಂದ್ರದಲ್ಲಿ ಸಮಾಲೋಚನೆ ನಡೆಸಲು ಸಾಧ್ಯ. ಸದ್ಯ ಪೊಲೀಸ್ ದೂರು ದಾಖಲಾಗಿಲ್ಲ. ಶಿಕ್ಷಣ ಇಲಾಖೆಯೂ ಪ್ರಕರಣವನ್ನು ಗಂಭೀರ ಪರಿಗಣಿಸಿ ವಿಚಾರಣೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

Next Post

ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

Related Posts

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ
ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

November 20, 2025
42
300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
66
Next Post
ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

ಮೂಡಬಿದ್ರೆ | ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ, ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ

Discussion about this post

Recent News

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
1
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

November 21, 2025
ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

November 21, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d