ಮಂಗಳೂರಿನ ಬೈಕಂಪಾಡಿ ಮೀನಕಳಿಯ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯದ ಗಮನ ಸೆಳೆದಿದ್ದಾರೆ. ಬಡ ಕಾರ್ಮಿಕ ಕುಟುಂಬದಿಂದಲೇ ಬಂದಿರುವ ವಿದ್ಯಾರ್ಥಿಗಳು 14 ಮತ್ತು 17 ವರ್ಷ ವಯೋಮಾನದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ, ಕೊಣಾಜೆ ಇಲ್ಲಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯ 14 ಮತ್ತು 17 ವರ್ಷ ವಯೋಮಾನದ ವಿಭಾಗದಲ್ಲಿ ಕುಮಾರ ಲಕ್ಷ್ಮಪ್ಪ ತಳ್ಯಾಳ, ದೇವರಾಜ ಲಕ್ಷ್ಮಪ್ಪ ಗೊಂದೆಪನ್ನವರ್, ಅರುಣ ವಿಜಯಕುಮಾರ್, ರಾಜ ಲಕ್ಷ್ಮಣ ತಳ್ಯಾಳ, ಕೃಷ್ಣ ರಮೇಶ ಮಾದರ, ಸೃಜನ್ ಕುಮಾರ್, ಬಾಲರಾಜ ಮಾರುತಿ ಮಡ್ಡಿ ಮತ್ತು ಮಂಜುನಾಥ ಕಾಕಪ್ಪ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿ ಸ್ಪರ್ಧಿಗಳನ್ನು ಸೋಲಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ಧಾರೆ.
ವಿದ್ಯಾರ್ಥಿಗಳ ಸಾಧನೆಗೆ ಬೈಕಂಪಾಡಿ ಮೀನಕಳಿಯ ಸರ್ಕಾರಿ ಪ್ರೌಢಶಾಲೆಯ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದೆ. ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ(ರಿ)ಮಂಗಳೂರು ತಾಲೂಕು ಅಧ್ಯಕ್ಷ ರಾದ ಶ್ರೀ ರಾಘವೇಂದ್ರ ರಾವ್, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶಾಂತಲಾ ಹಾಗೂ ಸಹಶಿಕ್ಷಕರಾದ ಶ್ರೀ ವಸಂತ ಪಾಲನ್ ಅವರು ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post