• About us
  • Contact us
  • Disclaimer
Monday, June 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ; ಡಿ.10ರೊಳಗೆ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು – ಜಿಲ್ಲಾಧಿಕಾರಿ

Coastal Times by Coastal Times
November 6, 2024
in ಕರಾವಳಿ
ಮಂಗಳೂರು ; ಡಿ.10ರೊಳಗೆ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು – ಜಿಲ್ಲಾಧಿಕಾರಿ
41
VIEWS
WhatsappTelegramShare on FacebookShare on Twitter

ಮಂಗಳೂರು, ನ.6: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಯಾಣಿಕರ ಸುರಕ್ಷತೆ ಸಲುವಾಗಿ ಬಸ್‌ಗಳು ಸಂಚರಿಸುವ ವೇಳೆ ಬಾಗಿಲು ಹಾಕಿಕೊಳ್ಳುವುದು ಕಡ್ಡಾಯ. ಈ ಬಗ್ಗೆ ಹಲವು ಬಾರಿ ಸೂಚನೆ ನೀಡಿದರೂ ಪಾಲನೆಯಾಗುತ್ತಿಲ್ಲ. ಹೀಗಾಗಿ ತತ್‌ಕ್ಷಣದಿಂದಲೇ ಬಾಗಿಲು ಅಳವಡಿಸಲು ಎಲ್ಲ ಖಾಸಗಿ ಬಸ್‌ಗಳು ಕ್ರಮ ಕೈಗೊಳ್ಳಬೇಕು.

ಮಂಗಳೂರಿನಿಂದ ಸಂಚರಿಸುವ ನಗರ ಸಾರಿಗೆ ಹೊರತಾದ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು. ನಗರ ಸಾರಿಗೆ ಬಸ್‌ಗಳಿಗೆ ಡೋರ್‌ ಅಳವಡಿಕೆ ಕುರಿತಂತೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಉಳಿದಂತೆ ಎಲ್ಲ ಖಾಸಗಿ ಬಸ್‌ಗಳು ಡೋರ್‌ ಅಳವಡಿಕೆಯನು ಡಿ.10ರೊಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು.

ಮಂಗಳೂರಲ್ಲಿ ಸ್ಮಾರ್ಟ್‌ಸಿಟಿಯ ಕಮಾಂಡಿಂಗ್‌ ಕಂಟ್ರೋಲ್‌ ಕೇಂದ್ರ ಇದೆ. ಇದರ ಸುಪರ್ದಿಯಲ್ಲಿ ಖಾಸಗಿ ಬಸ್‌ಗಳು ಕೂಡ ಜಿಪಿಎಸ್‌ ಅಳವಡಿಸುವುದು ಕಡ್ಡಾಯವಾಗಿದೆ. ಜಿಪಿಎಸ್‌ ಅಳವಡಿಸಿ ಸ್ಮಾರ್ಟ್‌ಸಿಟಿ ಕಂಟ್ರೋಲ್‌ ರೂಂ ಜತೆ ಸಂಪರ್ಕ ಇರಿಸಬೇಕು. ಇದರಿಂದ ಬಸ್‌ಗಳು ಎಲ್ಲೆಲ್ಲಿ ಸಂಚರಿಸುತ್ತಿವೆ ಎಂಬ ಮಾಹಿತಿ ಸುಲಭದಲ್ಲಿ ಸಿಗುತ್ತದೆ. ಇದು ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಸಾಧ್ಯವಾಗಲಿದೆ. ಜತೆಗೆ ಪ್ಯಾನಿಕ್‌ ಬಟನ್‌ ಅಳವಡಿಕೆ ಆಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೆಎಸ್‌ಆರ್‌ಟಿಸಿಗೆ ಹೊಸ ರೂಟ್ ಪರ್ಮಿಟ್ ನೀಡುವುದಕ್ಕೆ ವಿರೋಧ: ಮಂಗಳೂರು-ಕಾರ್ಕಳ, ಬಜಪೆ-ತಲಪಾಡಿ ಸೇರಿ ದಂತೆ ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆ ನೀಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಖಾಸಗಿ ಬಸ್ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಖಾಸಗಿ ಬಸ್ ಮಾಲೀಕರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಬಳಿ 15 ದಿನಗಳ ಕಾಲಾವಕಾಶ ನೀಡುವಂತೆ ವಿನಂತಿಸಿದರು.

ಬಸ್ ಹಾಕಲು ಸಾರ್ವಜನಿಕರ ಬೇಡಿಕೆ ಇದೆ. ಸರ್ಕಾರದ ಶಕ್ತಿ ಯೋಜನೆಯನ್ನು ಈ ರೂಟ್‌ಗಳಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅವಕಾಶ ನೀಡಿ. ಮಾಧ್ಯಮಗಳಲ್ಲೂ ಸಾರ್ವಜನಿಕರು ಬಸ್‌ಗಾಗಿ ಮಾನವಿ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ವಿವಿಧ ಮಾರ್ಗಗಳಲ್ಲಿ ಈ ಹಿಂದೆ 56 ಸಿಂಗಲ್ ಟ್ರಿಪ್‌ಗಳಿಗೆ ಪರವಾನಿಗೆ ಕೇಳಿತ್ತು.

ನ್ಯಾಯಾಲಯದ ತಡೆಯಾಜ್ಞೆಯ ಕಾರಣದಿಂದಾಗಿ ಪರವಾನಿಗೆ ಸಿಕ್ಕಿಲ್ಲ. ಇದೀಗ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಏರಿಯಾ ಸ್ಕೀಂ ನಿಯಮದ ಪ್ರಕಾರ ಹಾಗೂ ಚಾಪ್ಟರ್ 5 ರಂತೆ ಹೊಸ ರೂಟ್ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿ ತಿಳಿಸಿದರು.

ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಉಪ ಆಯುಕ್ತ ದಿನೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಆನಂದ್, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಎನ್, ಸಾರಿಗೆ ಅಧಿಕಾರಿ ಶ್ರೀಧರ್ ಮಲ್ಲಾಡ್ ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

Next Post

ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ

Related Posts

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ
ಕರಾವಳಿ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
45
ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ
ಕರಾವಳಿ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

June 2, 2025
44
Next Post
ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ

Discussion about this post

Recent News

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
45
ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

June 2, 2025
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್, ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

June 2, 2025
ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​

June 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d