ಉಳ್ಳಾಲ, ಡಿ.5 : ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆಂಟಿ ಡ್ರಗ್ ತಂಡವು ಭರ್ಜರಿ ಕಾರ್ಯಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದೆ.
ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಬ್ಬರು ಬಿಳಿ ಸ್ವಿಫ್ಟ್ ಕಾರಿನಲ್ಲಿ ನಿಷೇಧಿತ 132 ಗ್ರಾಂ ಮೆತಂಫಿಟಮೈನ್ ಮತ್ತು 250 ಎಲ್ಎಸ್ಡಿ ಸ್ಟ್ಯಾಂಪ್ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ನಿರ್ದೇಶನದಂತೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂತೋಷ್ ನಗರ ಎಂಬಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಲ್ಲಿದ್ದ 3,70,050 ರೂಪಾಯಿ ನಗದು, ಸ್ವಿಫ್ಟ್ ಕಾರು, ಮಾದಕ ವಸ್ತುಗಳು ಮತ್ತು ಮಾರಕಾಯುಧಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎಸಿಪಿ ಧನ್ಯಾ ಎನ್. ನಾಯಕ್ ಅವರ ನೇತೃತ್ವದಲ್ಲಿ ಪಿಎಸ್ಐ ಪುನೀತ್ ಗಾಂವ್ಕರ್, ಉಳ್ಳಾಲ ಠಾಣೆ ಪಿಎಸ್ಐ ಸಂತೋಷ್ ಕುಮಾರ್ ಡಿ, ಸಿಬ್ಬಂದಿ ಸಾಜು ನಾಯರ್, ಮಹೇಶ್, ಶಿವಕುಮಾರ್, ಅಕ್ಬರ್ ಯಡ್ರಾಮಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post