• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

Coastal Times by Coastal Times
December 6, 2025
in ರಾಷ್ಟ್ರೀಯ ಸುದ್ದಿ
48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
30
VIEWS
WhatsappTelegramShare on FacebookShare on Twitter

ದೆಹಲಿ, ಡಿ.6: ಇಂಡಿಗೋ ವಿಮಾನ ಸಂಸ್ಥೆಯ ಎಡವಟ್ಟಿನಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಲಾಗಿದ್ದರು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇಂಡಿಗೋ ಏರ್​ಲೈನ್ಸ್ ವಿಮಾನಗಳ ಹಾರಾಟ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಬಾಕಿ ಹಣ ಪಾವತಿಸಿದ ಇಂಡಿಗೋ ಏರ್​ಲೈನ್ಸ್​​ಗೆ ಖಡಕ್​​ ಸಂದೇಶವನ್ನು ಕೇಂದ್ರ ವಿಮಾನಯಾನ ಸಚಿವಾಲಯವು ನೀಡಿದೆ. ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣವನ್ನು ಮರುಪಾವತಿಸುವಂತೆ ಸೂಚನೆ ನೀಡಿದೆ. ಒಂದು ವೇಳೆ ಮರುಪಾವತಿ ಮಾಡದಿದ್ದರೆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದರ ಜತೆಗೆ ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಟಿಕೆಟ್‌ ದರ ಹೆಚ್ಚಳ ಮಾಡಲಾಗಿದೆ. ಅದಕ್ಕಾಗಿ ಈ ಬಿಕ್ಕಟ್ಟು ಪರಿಹಾರ ಆಗುವವರೆಗೆ ವಿಮಾನಯಾನ ಸಚಿವಾಲಯ ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಏಕರೂಪ ದರ ನಿಗದಿ ಮಾಡಿದೆ.

ಕೇಂದ್ರ ವಿಮಾನಯಾನ ಸಚಿವಾಲಯವು ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಬೆಲೆಯೊಂದನ್ನು ನಿಗದಿ ಮಾಡಿದೆ. 500-1000 ಕಿ.ಮೀ.ವರೆಗೆ ಗರಿಷ್ಠ 12 ಸಾವಿರ ರೂಪಾಯಿ ದರ ಇರಬೇಕು. ಹಾಗೂ 1000-1500 ಕಿ.ಮೀ.ವರೆಗೆ ಗರಿಷ್ಠ 15 ಸಾವಿರ ರೂಪಾಯಿ ದರ ಇರಬೇಕು ಎಂದು ಹೇಳಿದೆ. ಈ ನಿಗದಿಪಡಿಸಿದ ಟಿಕೆಟ್‌ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚನೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.  ಇದರ ಜತೆಗೆ ಸಚಿವಾಲಯವು ಇಂಡಿಗೋ ಏರ್​ಲೈನ್ಸ್ ವಿಮಾನಗಳ ಹಾರಾಟ ರದ್ದಾಗಿರುವುದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ ಎಂದು ಇಂಡಿಗೋ ಏರ್​ಲೈನ್ಸ್ ಅಧಿಕಾರಿಗಳಿಗೆ ಸೂಚನೆಯನ್ನು ಕೂಡ ನೀಡಿದೆ. ಸಂಜೆ 6 ಗಂಟೆಗೆ ಸಚಿವಾಲಯಕ್ಕೆ ಬರುವಂತೆ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿತ್ತು.ಇದೀಗ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ವಿಮಾನಯಾನ ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಇನ್ನು ಕೆಲವೇ ಕ್ಷಣದಲ್ಲಿ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳ ಜತೆಗೆ ಸಭೆ ನಡೆಯಲಿದೆ.

ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಹಣ ವಾಪಸ್ ಮಾಡುವುದರ ಜತೆಗೆ ಲಗೇಜ್ ಹಾಗೂ  ವಸ್ತುಗಳನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ 48 ಗಂಟೆಯೊಳಗೆ ತಲುಪಿಸುವಂತೆ ಆದೇಶ ನೀಡಿದೆ. ಕಳೆದ ಐದು ದಿನಗಳಿಂದ ಇಂಡಿಗೋ ವಿಮಾನ ರದ್ದಾಗಿತ್ತು. ಹಾರಾಟ ರದ್ದಿನಿಂದ ಹಣ ನೀಡಿ ಟಿಕೆಟ್ ಖರೀದಿಸಿದ್ದ ಪ್ರಯಾಣಿಕರು ಪರದಾಡಿದ್ರು, ಹೀಗಾಗಿ ಬುಕ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡವರಿಗೆ ಹಣ ವಾಪಸ್ ಆಗಿರಲಿಲ್ಲ. ಇದೀಗ ಈ ಗೊಂದಲಕ್ಕೆ ಸರ್ಕಾರ ಹಸ್ತಕ್ಷೇಪ ಮಾಡಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ಹಣ ನೀಡುವಂತೆ. ಹಾಗೂ ಮರು ಬುಕ್ಕಿಂಗ್ ಮಾಡಿಕೊಳ್ಳುವವರಿಗೆ ಯಾವುದೇ ಶುಲ್ಕವಿಲ್ಲದೆ ಟಿಕೆಟ್ ಬುಕ್ ಮಾಡಿಕೊಡುವಂತೆ ಆದೇಶ ನೀಡಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
34
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
49

Discussion about this post

Recent News

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
30
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d