• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ.

Coastal Times by Coastal Times
December 6, 2025
in ಕ್ರೈಮ್ ನ್ಯೂಸ್
ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ.
11
VIEWS
WhatsappTelegramShare on FacebookShare on Twitter

ಮಂಗಳೂರು : ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ಕದ್ರಿ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ದಿನಾಂಕ: 04-12-2025 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಸಂಖ್ಯೆ KA19HC6946 ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿರುತ್ತದೆ.

1. ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.

2. ದಿನಾಂಕ: 27-09-2025 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.

3. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.

4. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.

5. ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ

6. ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ.
ಈ ಮೇಲಿನ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ ರೂ. 1,50,000/- ಮೌಲ್ಯದ 4 ದ್ವಿ ಚಕ್ರ ವಾಹನ ಮತ್ತು ರೂ. 3.5 ಲಕ್ಷ ಮೌಲ್ಯದ ಚಿನ್ನಾಭರಣ ಸಮೇತ ಒಟ್ಟು 6 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಆರೋಪಿಯನ್ನು ಮಾನ್ಯ n ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿರುತ್ತದೆ.

ಆರೋಪಿಯ ವಿವರ: ಆದಿತ್ ಗೋಪಾನ್ @ ಮುತ್ತು ಕೃಷ್ಣ, ಪ್ರಾಯ: 32, ತಂದೆ: ಗೋಪಾನ್ ನಾಯರ್ ವಾಸ: ವೆಲ್ಲಟ್ಟಿ ವೀಡು,ವಲಿಯರ್ತಲ, ತಿರುವನಂತಪುರಂ, ಕೇರಳ ರಾಜ್ಯದವನಾಗಿದ್ದು, ಈತನ ಮೇಲೆ ಈಗಾಗಲೇ ತಮಿಳುನಾಡು ರಾಜ್ಯದಲ್ಲಿ ಮನೆಗಳಿಗೆ ಹೊಂಚು ಹಾಕಿ 4 ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದ್ದು, ನಾಗರಕೋಯಿಲ್ ಜೈಲಿನಲ್ಲಿ ಸೆರೆವಾಸವನ್ನು ಅನುಭವಿಸಿ ಬಿಡುಗಡೆಗೊಂಡಿರುವ ಆಸಾಮಿಯಾಗಿರುತ್ತಾನೆ. ಈತನು ಅಂತರ್ ರಾಜ್ಯ ಕುಖ್ಯಾತ ಕಳ್ಳನಾಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ ರೈಲಿನಲ್ಲಿ ಭಾರತ ದೇಶದ ಎಲ್ಲಾ ಕಡೆ ಸುತ್ತಾಡಿಕೊಂಡು ರೈಲ್ವೇ ನಿಲ್ದಾಣದ ಬಳಿ ಆಸು ಪಾಸಿನಲ್ಲಿ ಇರುವ ದ್ವಿ ಚಕ್ರವಾಹನ ಕಳ್ಳತನ ಮಾಡಿ ಸುಲಿಗೆ ಮಾಡುತ್ತಿದ್ದನು. ನಂತರ ರೈಲಿನಲ್ಲಿ ವಿವಿಧ ಕಡೆ ಪ್ರಯಾಣ ಮಾಡಿ ತಲೆಮರೆಸಿಕೊಳ್ಳುತ್ತಿದ್ದನು. ಈತನ ಪತ್ತೆಗೆ ಪೊಲೀಸರ ವಿಶೇಷ ಪ್ರಯತ್ನದಿಂದ ಪ್ರಕರಣವು ಅತೀ ಶೀಘ್ರದಲ್ಲಿ ಪತ್ತೆಯಾಗಿರುತ್ತದೆ.

ಈ ಪ್ರಕರಣದ ಪತ್ತೆಯ ಬಗ್ಗೆ ಶ್ರೀ ಪ್ರತಾಪ್ ಸಿಂಗ್ ತೋರಟ್, ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನಿರ್ದೇಶನದಂತೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮಾನಾಭ ರವರ ನೇತೃತ್ವದಲ್ಲಿ ಪಿಎಸ್ಐಗಳಾದ ಮನೋಹರ್ ಪ್ರಸಾದ್, ಶ್ರೀಮತಿ ಜ್ಯೊತಿ ಮತ್ತು ಕದ್ರಿ ಅಪರಾಧ ಪತ್ತೆ ವಿಭಾಗದ ಎ.ಎಸ್.ಐ. ಚಂದ್ರಶೇಖರ್, ಹೆಚ್.ಸಿಗಳಾದ ಸಂತೋಷ್ ಡಿ.ಕೆ, ಸುರೇಶ್, ಪಿ.ಸಿಗಳಾದ ಸುನೀಲ್, ಮಣಿಕಂಠ, ವಿನ್ಸೆಂಟ್ ಕುರುವಿಲ್ಲಾ ಮತ್ತು ಮಪಿಸಿ ಜಕ್ಕವ್ವ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಈವರೆಗೆ ಒಟ್ಟು 72 ದ್ವಿ ಚಕ್ರ ವಾಹನಗಳು ಕಳವಾಗಿದ್ದು ಇದರ ಪೈಕಿ ಕಳವಾದ 57 ದ್ವಿ ಚಕ್ರವಾಹನಗಳನ್ನು ಪತ್ತೆ ಮಾಡಲಾಗಿದ್ದು, 15 ಚಕ್ರವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ. ಮಂಗಳೂರು ನಗರದಲ್ಲಿ ಒಟ್ಟು 79% ರಷ್ಟು ಕಳವಾದ ದ್ವಿ ಚಕ್ರವಾಹನಗನ್ನು ಪತ್ತೆ ಹಚ್ಚಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

Next Post

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

Related Posts

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
1
ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !
ಕ್ರೈಮ್ ನ್ಯೂಸ್

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
61
Next Post
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

Discussion about this post

Recent News

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
1
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d