• About us
  • Contact us
  • Disclaimer
Monday, November 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

Coastal Times by Coastal Times
January 7, 2022
in ತಾಜಾ ಸುದ್ದಿ, ರಾಷ್ಟ್ರೀಯ ಸುದ್ದಿ
ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
10
VIEWS
WhatsappTelegramShare on FacebookShare on Twitter

ನವದೆಹಲಿ: ಭಾರತದ ಆರ್ಥಿಕ ಬೆಳವಣಿಗೆ ದರವು (ಜಿಡಿಪಿ ಬೆಳವಣಿಗೆ ದರ) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 9.2ರಷ್ಟು ಆಗಲಿದ್ದು, ಕೋವಿಡ್‌ಗೂ ಮೊದಲಿನ ಮಟ್ಟವನ್ನು ಮೀರಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಎನ್‌ಎಸ್‌ಒ ಶುಕ್ರವಾರ ಬಿಡುಗಡೆ ಮಾಡಿದ ರಾಷ್ಟ್ರೀಯ ಆದಾಯದ ಮೊದಲ ಸುಧಾರಿತ ಅಂದಾಜಿನ ಪ್ರಕಾರ, ಎಲ್ಲಾ ಕ್ಷೇತ್ರಗಳಲ್ಲಿ ಬೆಳವಣಿಗೆ ಆಗಿದೆ.

ಕೃಷಿ, ಗಣಿಗಾರಿಕೆ ಮತ್ತು ತಯಾರಿಕಾ ವಲಯಗಳ ಬೆಳವಣಿಗೆಯಲ್ಲಿ ಸುಧಾರಣೆ ಕಂಡುಬಂದಿದೆ. ಇದರಿಂದಾಗಿ ಈ ಪ್ರಮಾಣದ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಅದು ತಿಳಿಸಿದೆ.

ಕೋವಿಡ್‌ ಸಾಂಕ್ರಾಮಿಕ ಮತ್ತು ಅದನ್ನು ನಿಯಂತ್ರಿಸಲು ಜಾರಿಗೊಳಿಸಿದ ಲಾಕ್‌ಡೌನ್‌ನಿಂದಾಗಿ 2020–21ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ (–)7.3ರಷ್ಟು ಕುಸಿತ ಕಂಡಿತ್ತು.

2021ರ ಮೇ 31ರಂದು ಬಿಡುಗಡೆ ಮಾಡಿದ್ದ ವರದಿಯಲ್ಲಿ ಜಿಡಿಪಿಯ ಗಾತ್ರವು 2020–21ರಲ್ಲಿ ₹ 135.13 ಲಕ್ಷ ಕೋಟಿಗಳಷ್ಟು ಆಗಲಿದೆ ಎಂದು ಎನ್‌ಎಸ್‌ಒ ಹೇಳಿತ್ತು. 2021–22ರಲ್ಲಿ  ಜಿಡಿಪಿ ಗಾತ್ರವು ₹ 147.54 ಲಕ್ಷ ಕೋಟಿಗಳಷ್ಟು ಆಗಲಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ಎನ್‌ಎಸ್‌ಒ ಅಂದಾಜಿನ ಪ್ರಕಾರ, 2021–22ರಲ್ಲಿ ಜಿಡಿಪಿ ಗಾತ್ರವು 2019–20ರಲ್ಲಿ ಇದ್ದಂತಹ ₹ 145.69 ಲಕ್ಷ ಕೋಟಿ ಗಾತ್ರವನ್ನು ಮೀರಲಿದೆ. ಜಿಡಿಪಿಯು ಶೇ 9.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಹೇಳಿದೆ. ಎನ್‌ಎಸ್‌ಒ ಅಂದಾಜು ಅದಕ್ಕಿಂತಲೂ ಕಡಿಮೆ ಇದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ತಯಾರಿಕಾ ವಲಯವು ಶೇ 12.5ರಷ್ಟು ಬೆಳವಣಿಗೆ ಕಾಣುವ ಅಂದಾಜು ಮಾಡಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 7.2ರಷ್ಟು ಇಳಿಕೆ ಕಂಡಿತ್ತು.

ಎನ್‌ಎಸ್‌ಒ ಅಂದಾಜಿನ ಪ್ರಕಾರ, ಗಣಿಗಾರಿಕೆ ಮತ್ತು ಕ್ವಾರಿ ಶೇ 12.5ರಷ್ಟು ಕಾಣಲಿದೆ. ಕೃಷಿ ವಲಯವು ಶೇ 3.9ರಷ್ಟು ಬೆಳವಣಿಗೆ ಕಾಣುವ ಅಂದಾಜು ಮಾಡಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 3.6ರಷ್ಟು ಬೆಳವಣಿಗೆ ಕಂಡಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ: ಕೊರಗಜ್ಜನಿಗೆ ಅವಮಾನ ಆರೋಪ- ಸಾಲೆತ್ತೂರಿನಲ್ಲಿರುವ ವಧುವಿನ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ

Next Post

ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
31
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
46
Next Post
ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

Discussion about this post

Recent News

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
26
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d