• About us
  • Contact us
  • Disclaimer
Wednesday, January 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

Coastal Times by Coastal Times
February 7, 2024
in ರಾಜ್ಯ
ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ
80
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ 07: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಹುಕ್ಕಾ ನಿಷೇಧದ ಸುಳಿವು ನೀಡಿದ್ದ ಸಚಿವ : ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಿಂದಿನ ಸರ್ಕಾರಗಳು ಕ್ರಮಗಳನ್ನು ಕೈಗೊಂಡು ಕಾಲಕಾಲಕ್ಕೆ ಬದಲಾವಣೆಗಳನ್ನು ತರಲು ಪ್ರಯತ್ನಿಸಿದವು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲೂ ಹುಕ್ಕಾ ನಿಷೇಧ ಮತ್ತು ನಗರ ಪ್ರದೇಶಗಳಲ್ಲಿ ಧೂಮಪಾನ ನಿಷೇಧ ವಲಯಗಳನ್ನು ರಚಿಸುವ ಪ್ರಯತ್ನಗಳು ನಡೆದಿದ್ದವು. ಈ ಉಪಕ್ರಮಕ್ಕಾಗಿ ನಾವು ವಿಶ್ವಸಂಸ್ಥೆಯಿಂದ ಪ್ರಶಸ್ತಿಯನ್ನು ಸಹ ಪಡೆದಿದ್ದೇವೆ. ಇಂತಹ ಉತ್ಪನ್ನಗಳನ್ನು ನಿಷೇಧಿಸುವಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ದಿನೇಶ್ ಗುಂಡೂರಾವ್ ಇತ್ತೀಚೆಗೆ ಹೇಳಿದ್ದರು.

ಹುಕ್ಕಾ ಬಾರ್‌ಗಳು ವಿಶೇಷವಾಗಿ ಯುವಕ ಯುವತಿಯರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಈಗಿರುವ COPTA ಕ್ಕೆ ನಾವು ಕೆಲವು ತಿದ್ದುಪಡಿಗಳನ್ನು ಮಾಡಿದ್ದೇವೆ ಮತ್ತು ಸಾರ್ವಜನಿಕವಾಗಿ ಸಿಗರೇಟ್ ಮಾತ್ರವಲ್ಲದೆ ಇತರ ಎಲ್ಲಾ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಿದ್ದೇವೆ. ದಂಡದ ಮೊತ್ತ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ: ಚಿಕಿತ್ಸೆಗೆಂದು ದಾಖಲಾಗಿದ್ದ ಪುತ್ತೂರಿನ ಯುವಕ ಆಸ್ಪತ್ರೆಯ ಮಹಡಿಯಿಂದ ಜಿಗಿದು ಮೃತ್ಯು

Next Post

10 ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಚುಟುವಟಿಕೆ ಶುರು: ಕೂಂಬಿಂಗ್ ಕಾರ್ಯಾಚರಣೆ, ಹೈಅಲರ್ಟ್ ಘೋಷಣೆ

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
19
Next Post
10 ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಚುಟುವಟಿಕೆ ಶುರು: ಕೂಂಬಿಂಗ್ ಕಾರ್ಯಾಚರಣೆ, ಹೈಅಲರ್ಟ್ ಘೋಷಣೆ

10 ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಚುಟುವಟಿಕೆ ಶುರು: ಕೂಂಬಿಂಗ್ ಕಾರ್ಯಾಚರಣೆ, ಹೈಅಲರ್ಟ್ ಘೋಷಣೆ

Discussion about this post

Recent News

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

January 7, 2026
7
ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
110
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

January 7, 2026
ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

January 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d