• About us
  • Contact us
  • Disclaimer
Sunday, December 14, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ರಾತ್ರಿಯಾಗ್ತಿದ್ದಂತೆ ಶೆಟ್ರ ಮನೆಯೊಳಗೆ ಭೂತದ ರಂಪಾಟ ಬಟ್ಟೆಗೆ ಬೆಂಕಿ, ಪಾತ್ರೆಗಳು ಚೆಲ್ಲಾಪಿಲ್ಲಿ : ಎದೆ ಝಲ್ ಅನ್ನಿಸೋ ಸ್ಟೋರಿ ಇಲ್ಲಿದೆ

Coastal Times by Coastal Times
February 7, 2025
in ಕರಾವಳಿ
ಮಂಗಳೂರು: ರಾತ್ರಿಯಾಗ್ತಿದ್ದಂತೆ ಶೆಟ್ರ ಮನೆಯೊಳಗೆ ಭೂತದ ರಂಪಾಟ ಬಟ್ಟೆಗೆ ಬೆಂಕಿ, ಪಾತ್ರೆಗಳು ಚೆಲ್ಲಾಪಿಲ್ಲಿ : ಎದೆ ಝಲ್ ಅನ್ನಿಸೋ ಸ್ಟೋರಿ ಇಲ್ಲಿದೆ
273
VIEWS
WhatsappTelegramShare on FacebookShare on Twitter

ಮಂಗಳೂರು, ಫೆ 06: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ವಿಲಕ್ಷಣ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಕಳೆದ 18 ವರ್ಷಗಳಿಂದ ಉಮೇಶ್ ಶೆಟ್ಟಿ ಎಂಬವರು ತಮ್ಮ ಕುಟುಂಬದ ಜೊತೆ ನೆಲೆಸಿದ್ದಾರೆ. ಆದರೆ ಇವರು ಕಳೆದ ಮೂರು ತಿಂಗಳಿನಿಂದ ಪ್ರೇತ ಬಾಧೆಯಿಂದ ಸಂಪೂರ್ಣವಾಗಿ ಕಂಗಲಾಗಿ ಹೋಗಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಈ ಕುಟುಂಬ ಭಯದಿಂದಲೇ ಕಾಲ ಕಳೆಯುವಂತಾಗಿದೆ.

ಪತ್ನಿ, ಇಬ್ಬರು ಪುತ್ರಿಯರ ಜೊತೆ ನೆಲೆಸಿರುವ ಉಮೇಶ್ ಅವರಿಗೆ ಅಗೋಚರ ಶಕ್ತಿಯ ಬಾಧೆ ತಟ್ಟಿದೆಯಂತೆ. ಪ್ರತಿನಿತ್ಯ ರಾತ್ರಿ ಈ ಮನೆಯ ಕುಟುಂಬ ಸದಸ್ಯರು ವಿಚಿತ್ರ ಅನುಭವಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಮನೆಯೊಳಗೆ ಮಲಗಿದಾಗ ಯಾರೋ ಕುತ್ತಿಗೆ ಹಿಸುಕಿದಂತ ಅನುಭವ ಆಗುತ್ತಂತೆ. ಏಕಾಏಕಿ ಮನೆಯೊಳಗೆ ಇರುವ ಸ್ಟೀಲ್ ಲೋಟ, ಪಾತ್ರೆ ಪಗಡೆಗಳು ಚೆಲ್ಲಾಪಿಲ್ಲಿಯಾಗುತ್ತಂತೆ. ಮನೆ ಹೊರಗಿದ್ದ ಬಟ್ಟೆ ಒಳಗೆ ಬಂದು ಆ ಬಟ್ಟೆಗೆ ಬೆಂಕಿ ಹತ್ತಿಕೊಳ್ಳುತಂತೆ. ಕೇವಲ ಇಷ್ಟು ಮಾತ್ರವಲ್ಲದೇ ಉಮೇಶ್ ಶೆಟ್ಟಿ ಪುತ್ರಿ ಕಗ್ಗತ್ತಲ ರಾತ್ರಿಯಲ್ಲಿ ತಮ್ಮ ಮೊಬೈಲ್‌ನಲ್ಲಿ ತೆಗೆದಿರುವ ಫೋಟೋದಲ್ಲಿ ಪ್ರೇತಾತ್ಮದ ಭಾವಚಿತ್ರ ಸೆರೆಯಾಗಿದೆ. ಈ ಫೋಟೋದಲ್ಲಿ ಬಿಳಿಯ ಮುಖ ಹೊಂದಿರುವ ವ್ಯಕ್ತಿ ನಿಂತಂತೆ ಭಾಸವಾಗುತಿದ್ದು, ಈ ಎಲ್ಲಾ ಬೆಳವಣಿಗೆಗಳು ಉಮೇಶ್ ಶೆಟ್ಟಿ ಕುಟುಂಬವನ್ನು ಆತಂಕಕ್ಕೆ ದೂಡಿದೆ.

ಸಂಜೆಯಾಗುತ್ತಿದ್ದಂತೆ ಉಮೇಶ್ ಶೆಟ್ಟಿ ಮನೆಯಲ್ಲಿ ಈ ವಿಚಿತ್ರ ಘಟನೆಗಳು ನಡೆಯುತ್ತಿದೆ. ಆದರೆ ಈ ಭಾಗದಲ್ಲಿ ಇಪ್ಪತೈದ್ದಕ್ಕೂ ಹೆಚ್ಚು ಮನೆಗಳಿದ್ದರು ಸಹ ಉಮೇಶ್ ಶೆಟ್ಟಿ ಕುಟುಂಬವನ್ನು ಮಾತ್ರ ಈ ಪ್ರೇತಾತ್ಮ ಕಾಡುತ್ತಿದೆಯಂತೆ. ಈ ಪ್ರೇತಾತ್ಮದ ಬಾಧೆಯ ಬಗ್ಗೆ ಸ್ಥಳೀಯ ನಿವಾಸಿಗಳಿಗೂ ಅನುಭವಕ್ಕೆ ಬಂದಿದ್ದು, ರಾತ್ರಿ ವೇಳೆ ಪಾತ್ರೆ, ಪಗಡೆ ಬೀಳುವ ಸದ್ದು ಕೇಳಿಸುತ್ತದೆಯಂತೆ ನೆರೆಮನೆ ನಿವಾಸಿ ದೇವಕಿ ಎನ್ನುವವರು ಹೇಳಿದ್ದಾರೆ. ಉಮೇಶ್ ಶೆಟ್ಟಿ ಮಕ್ಕಳಿಗೆ ಮನೆಯೊಳಗೆ ಯಾರೋ ಓಡಾಡಿದ ಅನುಭವ ಆಗಿದೆಯಂತೆ. ಹೀಗಾಗಿ ರಾತ್ರಿಯಾಗುತ್ತಿದಂತೆ ಕುಟುಂಬ ಸದಸ್ಯರು ಹೊರಗಡೆಯೇ ಕಾಲ ಕಳೆಯುವಂತಾಗಿದೆ. ಈ ವಿಚಾರವನ್ನು ಉಮೇಶ್ ಶೆಟ್ಟಿ ಕುಟುಂಬವೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವುದರಿಂದ ಸಂಜೆಯಾಗುತ್ತಿದ್ದಂತೆ ಈ ಮನೆ ಸಮೀಪ ಕುತೂಹಲದಿಂದ ಸಾಕಷ್ಟು ಜನ ಒಟ್ಟು ಸೇರುತ್ತಿದ್ದಾರೆ.

ಉಮೇಶ್ ಶೆಟ್ಟಿ ಕುಟುಂಬ ಈ ಮನೆಯನ್ನು ಬಿಟ್ಟು ಹೋಗುವಂತೆ ಮಾಡಲು ಯಾರೋ ಮಾಟ ಮಂತ್ರದ ಮೂಲಕ ಈ ರೀತಿ ಮಾಡುತ್ತಿದ್ದಾರಂತೆ. ಆದರೆ ಈ ಮನೆಯಲ್ಲಿ ಆಗುತ್ತಿರುವ ಈ ಬೆಳವಣಿಗೆಗಳು ಸಾಕಷ್ಟು ಕುತೂಹಲ ಹಾಗೂ ಸಂಶಯಕ್ಕೆ ಕಾರಣವಾಗಿದ್ದು, ಕೆಲ ಸ್ಥಳೀಯರು ಇದು ಭ್ರಮೆ, ಇದೆಲ್ಲ ಕೇವಲ ಕಟ್ಟು ಕಥೆಯಷ್ಟೇ ಎಂದೇ ಹೇಳಿದ್ದಾರೆ. ಒಟ್ಟಿನಲ್ಲಿ ಪ್ರೇತ ಬಾಧೆಯ ದೃಶ್ಯ ಮೊಬೈಲ್ ಕ್ಯಾಮಾರದಲ್ಲಿ ಸೆರೆಯಾಗುವುದರ ಜೊತೆ, ಕುಟುಂಬ ಸದಸ್ಯರಿಗೆ, ಸ್ಥಳೀಯರಿಗೆ ಅನುಭವಕ್ಕೆ ಬಂದಿದೆ. ಈ ಬಗ್ಗೆ ಸಮಗ್ರವಾದ ಅಧ್ಯಯನ, ತನಿಖೆ ಆಗಬೇಕಾದ ಅವಶ್ಯಕತೆಯಿದ್ದು ಊರವರು, ಮನೆಯವರು ಒಟ್ಟು ಸೇರಿ ಈ ಗೊಂದಲಕ್ಕೆ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಬ್ರಹ್ಮಣ್ಯ: ಮನೆಗೆ ಬಂದ ಅಪರಿಚಿತರು ಮಹಿಳೆಯ ಕೈಯಲ್ಲಿ ಕೋವಿ ಕಂಡು ಓಡಿದರು!

Next Post

ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚನೆ: ಓರ್ವನ ಬಂಧನ

Related Posts

ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ
ಕರಾವಳಿ

ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ

December 14, 2025
86
ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ
ಕರಾವಳಿ

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

December 14, 2025
40
Next Post
ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚನೆ: ಓರ್ವನ ಬಂಧನ

ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚನೆ: ಓರ್ವನ ಬಂಧನ

Discussion about this post

Recent News

ಆಸ್ಟ್ರೇಲಿಯಾದ ಜನಪ್ರಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

ಆಸ್ಟ್ರೇಲಿಯಾದ ಜನಪ್ರಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

December 14, 2025
49
ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ

ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ

December 14, 2025
86
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಸ್ಟ್ರೇಲಿಯಾದ ಜನಪ್ರಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

ಆಸ್ಟ್ರೇಲಿಯಾದ ಜನಪ್ರಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

December 14, 2025
ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ

ಮಂಗಳೂರು ಪಡೀಲ್ ನೇಣು ಬಿಗಿದು ಯುವಕ ಆತ್ಮಹತ್ಯೆ

December 14, 2025
ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ- ಮಾಲಕನಿಗೆ 25 ಸಾವಿರ ರೂ. ದಂಡ

December 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d