• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ

Coastal Times by Coastal Times
April 7, 2023
in ಕರಾವಳಿ
ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ
146
VIEWS
WhatsappTelegramShare on FacebookShare on Twitter

ನೆಲ್ಯಾಡಿ : ಒಂದೇ ಊರಿನ, ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಒಂದೇ ದಿನ ಮೃತಪಟ್ಟಿದ್ದಾರೆ. ಅವರ ಸಾವಿಗೆ ಕಾರಣವೂ ಒಂದೇ. ಅವರಿಬ್ಬರೂ ಹೊಟ್ಟೆ ನೋವಿನಿಂದ ನರಳಿ ಕೊನೆಗೆ ಆಸ್ಪತ್ರೆಗೆ ಸೇರಿಸಲ್ಪಟ್ಟಿದ್ದರು. ಅಲ್ಲಿ ಒಂದೇ ದಿನ ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರೂ ಒಂದೇ ಮಾದರಿಯ ಉದ್ಯೋಗವನ್ನೇ ಮಾಡುತ್ತಿದ್ದರು. ಈ ಎಲ್ಲ ವಿಚಾರಗಳು ಸಾವಿನ ಜತೆ ಹಲವು ಅನುಮಾನಗಳನ್ನು ಹುಟ್ಟಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಮೃತಪಟ್ಟವರು. ಇವರಲ್ಲಿ ಲಾವಣ್ಯ ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ರಕ್ಷಿತಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಯುವತಿಯರಿಬ್ಬರು ಸೇವಾ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್‌ 4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದರು. ಇವರಿಬ್ಬರನ್ನು ಮೊದಲು ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ನಂತರದ ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಮತ್ತು ಲಾವಣ್ಯರನ್ನು ಅವರ ಮನೆಯವರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಮತ್ತು ಲಾವಣ್ಯ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರ ಮರಣಕ್ಕೆ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ. ಧರ್ಮಸ್ಥಳ ಪೊಲೀಸರು ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಒಂದೇ ದಿನ ಯುವತಿಯರಿಬ್ಬರು ಒಂದೇ ಕಾರಣಕ್ಕೆ ಸಾವಿನಪ್ಪಿರುವುದು  ಸಾರ್ವಜನಿಕ ವಲಯದಲ್ಲಿ  ಅನುಮಾನಕ್ಕೆ ಕಾರಣವಾಗಿದೆ. ಸೇವಿಸಿದ ಆಹಾರ ವಿಷ ಪೂರಿತವಾಗಿ ಅನಾರೋಗ್ಯಕ್ಕೆ ತುತ್ತಾದರೇ? ಅಥಾವ ಇನ್ಯಾವುದೋ ಕಾರಣಕ್ಕೆ ಇಬ್ಬರು ಆತ್ಮಹತ್ಯೆಯಂತಹ ಪ್ರಯತ್ನಕ್ಕೆ ಕೈ ಹಾಕಿದರೇ? ಎಂಬಂತಹ ಅನುಮಾನಗಳು ಸಾರ್ವಜನಿಕರಲ್ಲಿ ಮೂಡಿದ್ದು,  ಪೋಸ್ಟ್‌ ಮಾರ್ಟಮ್‌ ವರದಿಯ ಬಳಿಕ ಸಾವಿನ ನಿಖರ ಕಾರಣ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ

Next Post

ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ

ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
45
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d