• About us
  • Contact us
  • Disclaimer
Tuesday, April 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

Coastal Times by Coastal Times
April 7, 2026
in ಕರಾವಳಿ
ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!
38
VIEWS
WhatsappTelegramShare on FacebookShare on Twitter

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.

ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್‌ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.

ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್ ; ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್‌ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.

ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ  ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

Related Posts

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ
ಕರಾವಳಿ

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

April 7, 2026
9
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್
ಕರಾವಳಿ

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
13

Discussion about this post

Recent News

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

April 7, 2026
38
ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

April 7, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

April 7, 2026
ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

April 7, 2026
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

April 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d