ಬೆಂಗಳೂರು: ಉಡುಪಿಯ ಮಾಜಿ ಶಾಸಕ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ಗೆ ಪ್ರಮೋದ್ ಮಧ್ವರಾಜ್ ಇಂದು ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದೆ.
ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್, ಜೆಡಿಎಸ್ ಮಾಜಿ ಶಾಸಕ ಮಾಲೂರು ಮಂಜುನಾಥ ಗೌಡ ಬಿಜೆಪಿ ಸೇರಿದ್ದಾರೆ. ಮಾಜಿ ಐಆರ್ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನಿ ಗೌಡ, ಮಾಜಿ ಸಚಿವ ಎಸ್.ಟಿ ಜಯರಾಂ ಪುತ್ರ ಅಶೋಕ್ ಜಯರಾಮ್ ಕೇಸರಿ ಪಡೆಗೆ ಸೇರ್ಪಡೆಯಾಗಿದ್ದಾರೆ.
My Resignation to Congress Party pic.twitter.com/SIoVGYaMEN
— Pramod Madhwaraj (@PMadhwaraj) May 7, 2022
Discussion about this post