• About us
  • Contact us
  • Disclaimer
Thursday, January 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಶಿಕ್ಷಕಿಯ ಪಿಂಚಣಿ ದಾಖಲೆಗೆ 5 ಲಕ್ಷ ಬೇಡಿಕೆ ; ಶಾಲೆ ಸಂಚಾಲಕಿ ಲೋಕಾಯುಕ್ತ ಬಲೆಗೆ

Coastal Times by Coastal Times
July 7, 2023
in ಕರಾವಳಿ
ಮಂಗಳೂರು: ಶಿಕ್ಷಕಿಯ ಪಿಂಚಣಿ ದಾಖಲೆಗೆ 5 ಲಕ್ಷ ಬೇಡಿಕೆ ; ಶಾಲೆ ಸಂಚಾಲಕಿ ಲೋಕಾಯುಕ್ತ ಬಲೆಗೆ
151
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 7: ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕಿಯೊಬ್ಬರಿಗೆ ಪಿಂಚಣಿ ಹಣ ಪಡೆಯಲು ಅಗತ್ಯ ದಾಖಲೆ ನೀಡಬೇಕಿದ್ದರೆ ಐದು ಲಕ್ಷ ರೂ. ನೀಡಬೇಕೆಂದು ಸತಾಯಿಸಿ ಲಂಚದ ಹಣಕ್ಕೆ ಕೈಯೊಡ್ಡಿದ ಶಾಲಾ ಸಂಚಾಲಕಿಯನ್ನು ರೆಡ್‌ ಹ್ಯಾಂಡ್‌ ಆಗಿಯೇ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಹೊರವಲುದ ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ರೆಡ್ ಹ್ಯಾಂಡ್ ಆಗಿ ಸೆರೆಯಾದವರಾಗಿದ್ದಾರೆ. ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ 31.07.2023 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ದಿನಾಂಕ 25.05.2023 ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಂಚಾಲಕರಾದ ಶ್ರೀಮತಿ ಜ್ಯೋತಿ.ಎನ್‌.ಪೂಜಾರಿರವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿ, ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂ.20,00,000/- (ಇಪ್ಪತ್ತು ಲಕ್ಷ) ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಶಿಕ್ಷಕಿ ಶೋಭಾರಾಣಿ ಮತ್ತೊಮ್ಮೆ ಸಂಚಾಲಕಿ ಜ್ಯೋತಿ ಅವರನ್ನು ಭೇಟಿ ಮಾಡಿ ಕೋರಿಕೆ ಸಲ್ಲಿಸಿದರೂ, ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡದೆ ರೂ.5 ಲಕ್ಷ ಕೊಡಲೇಬೇಕು ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬೇಸತ್ತ ಶಿಕ್ಷಕಿ ಮಂಗಳೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅಧಿಕಾರಿಗಳ ಸೂಚನೆಯಂತೆ ಇಂದು ಶಿಕ್ಷಕಿ ಶೋಭಾರಾಣಿ, 5 ಲಕ್ಷ ಮೊತ್ತವನ್ನು ಶಾಲಾ ಸಂಚಾಲಕಿಗೆ ನೀಡುತ್ತಿರುವಾಗಲೇ ಲೋಕಾಯುಕ್ತ ದಾಳಿ ನಡೆಸಿದೆ. ಆರೋಪಿ ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಲೋಕಾಯುಕ್ತ ಎಸ್ಪಿ ಸಿಎ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ಚೆಲುವರಾಜು, ಇನ್ಸ್ ಪೆಕ್ಟರ್ ವಿನಾಯಕ ಬಿಲ್ಲವ ಆರೋಪಿಯನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರೆಡ್ ಅಲರ್ಟ್ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ , ಸತತ ನಾಲ್ಕನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ

Next Post

ಗುಡ್ಡ ಕುಸಿತ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು‌ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Related Posts

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ
ಕರಾವಳಿ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
3
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ
ಕರಾವಳಿ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
20
Next Post
ಗುಡ್ಡ ಕುಸಿತ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು‌ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಗುಡ್ಡ ಕುಸಿತ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು‌ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
3
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d