• About us
  • Contact us
  • Disclaimer
Monday, September 15, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು |ತುಳು ಲಿಪಿಯಲ್ಲಿ ಭಗವದ್ಗೀತೆ ರಚಿಸಿದ ಭರತನಾಟ್ಯ ಕಲಾವಿದೆ

Coastal Times by Coastal Times
August 7, 2023
in ಕರಾವಳಿ
ಮಂಗಳೂರು |ತುಳು ಲಿಪಿಯಲ್ಲಿ ಭಗವದ್ಗೀತೆ ರಚಿಸಿದ ಭರತನಾಟ್ಯ ಕಲಾವಿದೆ
24
VIEWS
WhatsappTelegramShare on FacebookShare on Twitter

ಪುತ್ತೂರು : ತುಳು ಭಾಷೆಗೆ ಲಿಪಿ ಇದೆ ಎನ್ನುವುದು ಸಾಕಷ್ಟು ಜನರಿಗೆ ಗೊತ್ತೇ ಇಲ್ಲ.ಆದರೆ ತುಳು ಭಾಷೆಗೂ ಲಿಪಿ ಇದೆ. ಅದಕ್ಕೂ ನೂರಾರು ವರ್ಷಗಳ ಇತಿಹಾಸ ವಿದೆ ಎನ್ನುವುದನ್ನು ತುಳು ಅಧ್ಯಯನಕಾರರು ಹಲವು ರೂಪದಲ್ಲಿ ರುಜುವಾತು ಪಡಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವತಿ ತುಳು ಭಾಷೆಯಲ್ಲೇ ಭಗವದ್ಗೀತೆ ಬರೆಯುವ ಮೂಲಕ ತುಳು ಭಾಷೆಗೆ ಹೊಸ ಕೊಡುಗೆ ನೀಡಿದ್ದಾರೆ.

ಪುತ್ತೂರಿನ ನರಿಮೊಗರಿನ ಕೊಡಂಕೇರಿ ನಿವಾಸಿ ಅಪರ್ಣಾ ಈ ನೂತನ ಪ್ರಯತ್ನವನ್ನು ಮಾಡಿದ ಸಾಧಕಿ. ಭರತನಾಟ್ಯ ಕಲಾವಿದೆಯೂ ಆಗಿರುವ ಅಪರ್ಣಾ ಈಗ ಭಗವದ್ಧೀತೆಯ 18 ಅಧ್ಯಾಯದ ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆದಿದ್ದು, ತುಳು ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ.

ಹಿಂದೂ ಧರ್ಮದ ಪರಮೋಚ್ಚ ಗ್ರಂಥವಾದ ‘ಭಗವದ್ಗೀತೆ’ಯನ್ನು ತುಳು ಲಿಪಿಯನ್ನು ಬಳಸಿ ಅನುವಾದಿಸಿ ಮೊದಲ ಪ್ರಯತ್ನದಲ್ಲೇ ಅಪರ್ಣಾ ಎಲ್ಲರ‌ ಮೆಚ್ಚುಗೆ ಗಳಿಸಿದ್ದಾರೆ. ಸರಳವಲ್ಲದ ತುಳು ಭಾಷೆಯಲ್ಲಿ ಭಗವದ್ಗೀತೆ ಬರೆಯುವ ಮೂಲಕ ತುಳು ಭಾಷಾ ಅಧ್ಯಯನಕಾರರಿಗೆ ಹೊಸ ಮೇಲ್ಪಂಕ್ತಿಯನ್ನು ಅಪರ್ಣಾ ಹಾಕಿದ್ದಾರೆ.

ಅಪರ್ಣಾ ಅವರ ಈ ಪುಸ್ತಕವನ್ನು ಇತ್ತೀಚಿಗೆ ಶ್ರೀಕ್ಷೇತ್ರ ನರಸಿಂಹ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳು, ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಮತ್ತು ಸುಬ್ರಹ್ಮಣ್ಯ ಮಠದ ವೇದವ್ಯಾಸ ಸಂಶೋಧನಾ ಕೇಂದ್ರದ ಆನಂದತೀರ್ಥ ಸಗ್ರಿ ಅವರ ಸಮ್ಮುಖದಲ್ಲಿ ಇತ್ತೀಚೆಗೆ ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೋವಿಡ್ ಸಮಯದಲ್ಲಿ ಮನೆಯಲ್ಲೇ ಇದ್ದ ಸಂದರ್ಭದಲ್ಲಿ ಅಪರ್ಣಾ ಕೊಡಂಕೇರಿ ತನ್ನ ಸಹೋದರ ಮುಕುಂದ ಅವರು ಕಲಿಸಿಕೊಟ್ಟ ತುಳು‌ ಲಿಪಿಯನ್ನು ಅಭ್ಯಾಸ ಮಾಡಿ ಬರೆಯಲು ಶುರು ಮಾಡಿದ್ದರು. ಹೀಗೆ ಬರೆಯುವ ಸಮಯದಲ್ಲಿ ಮಹಾಭಾರತದಲ್ಲಿ ಶ್ರೀ ಕೃಷ್ಣ ಭೋಧಿಸಿದ ಭಗವದ್ಗೀತೆಯನ್ನು ತುಳು ಭಾಷೆ ಮತ್ತು ಲಿಪಿಯಲ್ಲಿ ಏಕೆ ಬರೆಯಬಾರದು ಎನ್ನುವ ಮನಸ್ಸಲ್ಲಿ ಮೂಡಿತ್ತು.

ತುಳು ಮಾತೃಭಾಷೆಯ ಜನಕ್ಕೆ ತುಳುವಲ್ಲಿ ಬರೆದರೆ, ಮಾತನಾಡಿದರೆ ಅದು ಹೃದಯಕ್ಕೆ ತೀರಾ ಹತ್ತಿರವಾಗಿರುತ್ತೆ ಎನ್ನುವ ಕಾರಣಕ್ಕೆ ಭಗವದ್ಗೀತೆಯ 18 ಅಧ್ಯಾಯದ ಶ್ಲೋಕದ ಸಾರ ಹಾಗು ತಾತ್ಪರ್ಯಗಳನ್ನು ತುಳು ಲಿಪಿ ಮತ್ತು ಕನ್ನಡ ಲಿಪಿಯನ್ನು ಬಳಸಿ ತುಳುವಲ್ಲಿ ಅಪರ್ಣಾ ಬರೆದಿದ್ದಾರೆ.

ಪುಸ್ತಕದ ಪ್ರತೀ ಪುಟದಲ್ಲಿ ಎಡ ಭಾಗದಲ್ಲಿ ಸಂಪೂರ್ಣ ತುಳು ಲಿಪಿಯನ್ನು ಬಳಸಿ ಶ್ಲೋಕ ಮತ್ತು ಸಾರವನ್ನು ಬರೆಯಲಾಗಿದ್ದು, ಬಲ ಭಾಗದಲ್ಲಿ ಕನ್ನಡ ಲಿಪಿ ಬಳಸಿ ತುಳುವಿನಲ್ಲಿ ಶ್ಲೋಕದ ಅರ್ಧವನ್ನು ಬರೆಯಲಾಗಿದೆ. ತುಳು ಲಿಪಿಯಲ್ಲಿ ಭಗವದ್ಗೀತೆಯನ್ನು ಬರೆದಿರುವುದು ಇದೇ ಮೊದಲಾಗಿದ್ದು, ತುಳು ಭಾಷೆಯ ಬೆಳವಣಿಗೆಗೆ ಅಪರ್ಣಾ ಕೊಡಂಕೇರಿ ತನ್ನದೇ ಆದ ಕೊಡುಗೆಯನ್ನು ಈ ಸಾಧನೆಯ ಮೂಲಕ ನೀಡಿದ್ದಾರೆ.
ತಮ್ಮ ಸಾಧನೆಯ ಬಗ್ಗೆ ಮಾತನಾಡಿರುವ ಅಪರ್ಣಾ, ‘ತುಳು ಲಿಪಿ ಕಲಿಯಬೇಕೆಂಬ ಆಸೆ ಇತ್ತು. ತುಳು ಲಿಪಿಯಲ್ಲಿ ನೈಪುಣ್ಯತೆಯನ್ನು ಪಡೆದಿದ್ದ ಅಣ್ಣ, ಲಾಕ್‌ಡೌನ್‌ ವೇಳೆ ತುಳು ಲಿಪಿಯನ್ನು ಕಲಿಸಿದ್ದರು. ಮೊದಲು ಕಷ್ಟ ಅನಿಸಿದರೂ ಬಳಿಕ ತುಳು ಲಿಪಿ ಕಲಿಯೋದು, ಬರೆಯೋದು ಆಸಕ್ತಿಯ ವಿಚಾರವಾಯಿತು. ತುಳು ಲಿಪಿಯಲ್ಲಿ ಭಗವದ್ಗೀತೆ ಬರೆಯಬೇಕೆಂಬ ದೊಡ್ಡ ನಿರ್ಧಾರ ತೆಗೆದುಕೊಂಡ ಬಳಿಕ ಅದಕ್ಕಾಗಿ ಸಮಯ ಇರಿಸಿ ಇದೀಗ ಪುಸ್ತಕ ಬಿಡುಗಡೆಯಾಗಿದೆ. ಖುಷಿಯಾಗಿದೆ’ ಎಂದು ಅಪರ್ಣಾ ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ

Next Post

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನ

Related Posts

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು
ಕರಾವಳಿ

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
48
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ
ಕರಾವಳಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
54
Next Post
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನ

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
10
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
48
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d