• About us
  • Contact us
  • Disclaimer
Monday, August 25, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಳನೀರು ಕುಡಿಯುದರಿಂದ ಮನುಷ್ಯನ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು

Coastal Times by Coastal Times
September 7, 2023
in ಆರೋಗ್ಯ
ಎಳನೀರು ಕುಡಿಯುದರಿಂದ ಮನುಷ್ಯನ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು
106
VIEWS
WhatsappTelegramShare on FacebookShare on Twitter

ಭಾರತದಲ್ಲಿ, ಡಿಸೆಂಬರ್‌ನಿಂದ ಮೇ ವರೆಗೆ ಬೇಸಿಗೆಯ ಸಮಯವಿದ್ದು, ಹೆಚ್ಚಿನ ಉಷ್ಣತೆಯಿಂದಾಗಿ ಅನೇಕ ಜನರು ಸಾಕಷ್ಟು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಾರತದ ಕೆಲವು ಭಾಗಗಳಲ್ಲಿ ತೆಂಗಿನ ನೀರನ್ನು (ಎಳನೀರು) ಬೇಸಿಗೆಯಲ್ಲಿ ಸೇವಿಸುವುದರಿಂದ ಅದು ಉಷ್ಣದಿಂದ ಸ್ವಲ್ಪ ಪರಿಹಾರ ನೀಡುತ್ತದೆ. ಏಳನೀರಿನ ಲಾಭಗಳನ್ನು ನೀವು ಹುಡುಕುತ್ತಿದ್ದರೆ, ಸರಿಯಾದ ಸ್ಥಳಕ್ಕೆ ಬಂದಿದ್ದೀರಿ. ಏಕೆಂದರೆ ಇಲ್ಲಿ, ತೆಂಗಿನಕಾಯಿಯ ಪ್ರಯೋಜನಗಳ ಹೊರತಾಗಿ, ಅದರ ದುಷ್ಪರಿಣಾಮಗಳು ಮತ್ತು ಬಳಕೆಯ ವಿಧಾನದ ಬಗ್ಗೆಯೂ ಮಾಹಿತಿಯನ್ನು ಇಲ್ಲಿ ನಿಮಗೆ ಸಿಗಲಿದೆ.

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ಎಳನೀರಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಪ್ರತೀನಿತ್ಯ ಒಂದೊಂದು ಎಳನೀರು ಕುಡಿಯುವ ಅಭ್ಯಾಸವಿಟ್ಟುಕೊಂಡರೆ, ದೇಹಕ್ಕೆ ಎದುರಾಗುವ ಸಾಕಷ್ಟು ರೋಗಗಳಿಂದ ದೂರ ಇರಬಹುದು. ನವಿರಾದ ಸಿಹಿ, ನೀರಿನಷ್ಟೇ ಗಾಢವಾದ ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಎಳನೀರಿನಿಂದ ಸಿಗುವ ಪೋಷಕಾಂಶಗಳಿಂದ ದೇಹ ಶೀಘ್ರ ತನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತದೆ.

ಏಳನೀರಿನ ಲಾಭಗಳು :

ನಿಶಕ್ತಿಗೆ ಎಳನೀರು ಅತ್ಯುತ್ತಮ ಆಯ್ಕೆ, ಪ್ರತಿದಿನ ಎಳನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದಲ್ಲದೆ, ನವ ಚೈತನ್ಯ ಇರುತ್ತದೆ.

ಅಜೀರ್ಣ ಮತ್ತು ಹೊಟ್ಟೆನೋವು ಸಂಬಂದಿತ ಸಮಸ್ಯೆಗಳಿಗೆ ಎಳನೀರು ಒಳ್ಳೆಯ ಆರೋಗ್ಯ ಪರಿಣಾಮ ನೀಡುತ್ತದೆ. ಪ್ರತಿದಿನ ಎಳನೀರು ಸೇವಿಸಿದರೆ ಅಜೀರ್ಣ ಸಮಸ್ಯೆ ಮತ್ತು ಹೊಟ್ಟೆ ನೋವು ನಿವಾರಣೆ ಆಗುತ್ತದೆ.

ಎಳನೀರು ಕೇವಲ ಆರೋಗ್ಯ ಪ್ರಯೋಜನೆಗಳನ್ನು ಮಾತ್ರ ಹೊಂದಿಲ್ಲ, ಇದು ಚರ್ಮಕ್ಕೂ ಅಷ್ಟೇ ಉತ್ತಮ ಪರಿಹಾರಗಳನ್ನು ನೀಡುತ್ತದೆ, ಸುಕ್ಕುಗಟ್ಟಿದ ಚರ್ಮವನ್ನು ಎಳನೀರಿನಿಂದ ತೊಳೆದರೆ ಚರ್ಮದ ಸುಕ್ಕು ನಿವಾರಣೆಯಾಗುತ್ತದೆ.

ಎಳನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮತ್ತು ಮಧುಮೇಹ ರೋಗಲಕ್ಷಣಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ಎಳನೀರಿನಲ್ಲಿರುವ ವಿವಿಧ ವಿಟಮಿನ್ ಮತ್ತು ವಿಶೇಷವಾಗಿ ವಿಟಮಿನ್ ಕೆ ಮತ್ತು ಕಬ್ಬಿಣದ ಅಂಶ ಕೂದಲಿಗೆ ಸಹಕಾರಿಯಾಗಿದೆ. ಕೂದಲನ್ನು ಕೊಂಚ ಎಳನೀರಿನಿಂದ ಮಸಾಜ್ ಮಾಡುವುದರಿಂದ ತಲೆಯ ಚರ್ಮದಲ್ಲಿ ರಕ್ತಸಂಚಾರ ಹೆಚ್ಚುತ್ತದೆ. ಇದರ ಪರಿಣಾಮ ಕೂದಲ ಬುಡ ಹೆಚ್ಚು ಶಕ್ತಿಯುತವಾಗುತ್ತವೆ. ಕೂದಲು ಉದುರುವುದು ಕಡಿಮೆಯಾಗಿ ಕೂದಲ ಹೊಳಪು ಹೆಚ್ಚುತ್ತದೆ. ಕೂದಲು ಮೃದುವಾಗಿಸುವಲ್ಲಿ ಕೂಡಾ ಸಹಾಯ ಮಾಡುತ್ತದೆ.

ಮುಖದ ಮೇಲೆ ಹೊಳಪನ್ನು ಕಾಪಾಡಿಕೊಳ್ಳಲು ಎಳನೀರು ಸಹಾಯ ಮಾಡುತ್ತದೆ. ನಿರ್ಜಲೀಕರಣವು ಚರ್ಮವನ್ನು ಹಾನಿಯುಂಟು ಮಾಡುತ್ತದೆ. ಜೊತೆಗೆ ನಿಮ್ಮ ಮುಖದಲ್ಲಿ ಮೊಡವೆ ಉಂಟಾಗಲು ಕಾರಣವಾಗುತ್ತದೆ. ಎಳನೀರು ದೇಹಕ್ಕೆ ತೇವಾಂಶವನ್ನು ನೀಡುವುದರಿಂದ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು, ಮೂತ್ರನಾಳದ ಸೋಂಕಿನಿಂದ ನಿಮಗೆ ರಕ್ಷಣೆಯನ್ನು ನೀಡುತ್ತದೆ.

ಏಳನೀರಿನ ದುಷ್ಪರಿಣಾಮಗಳು :

ಕೆಲವೊಮ್ಮೆ, ದೇಹಕ್ಕೆ ಅನುಕೂಲವಾಗುವಂತಹ ಅತಿ ಪ್ರಮಾಣದಲ್ಲಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗಬಹುದು ಮತ್ತು ನೀವು ಏಳನೀರನ್ನು ಬಹಳ ಪ್ರಮಾಣದಲ್ಲಿ ಸೇವಿಸಿದರೆ, ಅದು ಕೆಲವು ಗಂಭೀರ ಅನಾನುಕೂಲಗಳನ್ನು ಸಹ ಹೊಂದಿದೆ. ಉದಾಹರಣೆಗೆ, ಏಳನೀರಿನಿಂದಾಗಿ, ದೇಹದಲ್ಲಿನ ಸಮತೋಲನವು ಕ್ಷೀಣಿಸಬಹುದು, ಈ ಕಾರಣದಿಂದಾಗಿ ಜನರು ಸಾಮಾನ್ಯವಾಗಿ ದೌರ್ಬಲ್ಯ ಮತ್ತು ಆಯಾಸವನ್ನು ಹೊಂದಿರುತ್ತಾರೆ.

ಇದಲ್ಲದೆ, ಪೊಟ್ಯಾಸಿಯಮ್ ಏಳನೀರಿನಲ್ಲಿ ಕಂಡುಬರುತ್ತದೆ, ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ಏಳನೀರನ್ನು ಸೇವಿಸುವುದರಿಂದ, ದೇಹದಲ್ಲಿ ಪೊಟ್ಯಾಸಿಯಮ್ ಮಟ್ಟ ಹೆಚ್ಚಾಗಬಹುದು, ಇದು ಹೃದಯದ ಹಾನಿಯ ಅಪಾಯವನ್ನು ಹೆಚ್ಚಿಸುತ್ತದೆ.

ನಾವು ಮೇಲೆ ಹೇಳಿದಂತೆ, ಏಳನೀರನ್ನು ಕುಡಿಯುವುದರಿಂದ ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಪರಿಹಾರ ಸಿಗುತ್ತದೆ, ಆದರೆ ನೀವು ಈಗಾಗಲೇ ಕಡಿಮೆ ರಕ್ತದೊತ್ತಡದ (Low BP) ರೋಗಿಯಾಗಿದ್ದರೆ, ಏಳನೀರನ್ನು ಎಂದಿಗೂ ಸೇವಿಸಬಾರದು. ನೀವು ಬಯಸಿದರೆ, ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

Next Post

ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!

Related Posts

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
228
ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!
ಆರೋಗ್ಯ

ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!

March 10, 2025
66
Next Post
ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!

ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
27
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d