• About us
  • Contact us
  • Disclaimer
Saturday, February 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Coastal Times by Coastal Times
September 7, 2024
in ಕರಾವಳಿ
ಮಂಗಳೂರು: ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
33
VIEWS
WhatsappTelegramShare on FacebookShare on Twitter

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು.

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಇಲ್ಲಿನ ಗಣೇಶೋತ್ಸವ ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದರು.

ಸಾಂಕೇತಿಕ ತೆನೆ ವಿತರಿಸಿದ ಮೋಹನ್ ದೇವ ಆಳ್ವ ಅವರು ಮಾತನಾಡಿ, ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಗಣೇಶೋತ್ಸವ ಯಶಸ್ವಿಯಾಗಲಿ ಎಂದು ಹಾರೈಸಿದರು. ಧ್ವಜಾರೋಹಣ ನೆರವೇರಿಸಿದ ಗ್ರೂಪ್ ಕ್ಯಾಪ್ಟನ್ ಪ್ರದೀಪ್ ಎಸ್. ಶೆಟ್ಟಿ ಅವರು ಸಂಘಟಕರನ್ನು ಅಭಿನಂದಿಸಿದರು. ಅಶ್ವಿನಿ ಮಣಿ ಮುಲ್ಲೈ ಮುಗಿಲನ್, ಡಾ. ಶೈಲಜಾ ಮೋಹನ್ ದೇವ್ ಆಳ್ವ ಹಾಗೂ ಜಯಂತಿ ಮೆನನ್ ಮುಖ್ಯ ಅತಿಥಿಗಳಾಗಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರುಗಳಾದ ದಿವಾಕರ ಸಾಮಾನಿ ಚೇಳಾರ್ ಗುತ್ತು, ಅಶ್ವತ್ತಾಮ ಹೆಗ್ಡೆ, ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮೋಹನ್ ದೇವ ಆಳ್ವ ದಂಪತಿಗಳನ್ನು ಸನ್ಮಾನಿಸಲಾಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಪ್ರಸ್ತಾವನೆಗೈದು ಸ್ವಾಗತಿಸಿದರು. ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಹಾಗೂ ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಂಜನಾ ವಸಿಷ್ಠ ಕೊಲೆ ಪ್ರಕರಣ ; ಮಂಗಳೂರಿನಲ್ಲಿ ಜೈಲು ಪಾಲಾಗಿದ್ದ ವಿಜಯಪುರದ ಯುವಕನಿಗೆ ಜೀವಾವಧಿ ಶಿಕ್ಷೆ

Next Post

ಬಂಟ್ವಾಳ: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

Related Posts

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 21, 2026
6
2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು
ಕರಾವಳಿ

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
10
Next Post
ಬಂಟ್ವಾಳ: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

ಬಂಟ್ವಾಳ: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

Discussion about this post

Recent News

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
20
ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 21, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 21, 2026
ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d