• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ

Coastal Times by Coastal Times
December 7, 2025
in ರಾಷ್ಟ್ರೀಯ ಸುದ್ದಿ
ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಭಾರೀ ಬೆಂಕಿ, ಸಿಲಿಂಡರ್ ಸ್ಫೋಟಕ್ಕೆ 20 ಪುರುಷರು ಮೂವರು ಮಹಿಳೆಯರು ಸಜೀವ ದಹನ
79
VIEWS
WhatsappTelegramShare on FacebookShare on Twitter

ಪಣಜಿ (ಗೋವಾ): ಉತ್ತರ ಗೋವಾದ ಅರ್ಪೋರಾದಲ್ಲಿನ ನೈಟ್​ಕ್ಲಬ್​ನ ಡ್ಯಾನ್ಸ್​ ಫ್ಲೋರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಆ ಮಹಡಿಯಲ್ಲಿ ನೂರಾರು ಜನರಿದ್ದರು. ಅಲ್ಲಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅವರಲ್ಲಿ ಕೆಲವರು ಸಿಬ್ಬಂದಿ ಜೊತೆಗೆ ಕೆಳಗಡೆ ಇದ್ದ ಅಡುಗೆ ಮನೆಗೆ ಓಡಿ ಹೋದರು. ಅಲ್ಲಿದ್ದ ಸಿಬ್ಬಂದಿ ಜೊತೆ ಅವರೂ ಸಿಲುಕಿಕೊಂಡರು ಎಂದು ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಶನಿವಾರ ಮಧ್ಯರಾತ್ರಿ ನಂತರ ಸಿಲಿಂಡರ್​ ಸ್ಫೋಟದಿಂದಾಗಿ ನೈಟ್​ಕ್ಲಬ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಪೊಲೀಸರು ತಿಳಿಸಿದರೆ, ಪ್ರವಾಸಿಗರು ನೃತ್ಯ ಮಾಡುತ್ತಿದ್ದ ಕ್ಲಬ್​ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲವು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ರಾಜ್ಯ ರಾಜಧಾನಿ ಪಣಜಿಯಿಂದ 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು, ಅದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಮೃತರಲ್ಲಿ ನಾಲ್ವರು ಪ್ರವಾಸಿಗರು ಇದ್ದರು. ರಾಜ್ಯದ ಪ್ರವಾಸಿ ಋತುವಿನ ಪ್ರಮುಖ ಸಂದರ್ಭದಲ್ಲಿಯೇ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ನೈಟ್‌ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ. ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುತ್ತೇವೆ. ಕ್ಲಬ್ ಆಡಳಿತ ಮಂಡಳಿ ಮತ್ತು ಸ್ಥಾಪನೆಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

‘ಬೆಂಕಿಯ ಜ್ವಾಲೆಗಳು ಆವರಿಸುತ್ತಿದ್ದಂತೆ ಕ್ಲಬ್​ನಲ್ಲಿ ಭಾರಿ ಗದ್ದಲ ಉಂಟಾಯಿತು. ನಾವು ಕ್ಲಬ್‌ನಿಂದ ಹೊರಗೆ ಓಡಿಹೋದಾಗ ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದೆವು. ವಾರಾಂತ್ಯ ಆಗಿದ್ದರಿಂದ ನೈಟ್‌ಕ್ಲಬ್​ನಲ್ಲಿ ಹೆಚ್ಚಿನ ಜನರು ಸೇರಿದ್ದರು. ಮತ್ತು ಕನಿಷ್ಠ 100 ಜನರು ಡ್ಯಾನ್ಸ್​ ಫ್ಲೋರ್​ನಲ್ಲಿದ್ದರು’ ಎಂದು ಪ್ರತ್ಯಕ್ಷದರ್ಶಿ ಹೈದರಾಬಾದ್‌ನ ಪ್ರವಾಸಿ ಫಾತಿಮಾ ಶೇಖ್ ಅರ್ಪೋರಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

‘ಬೆಂಕಿ ಹೊತ್ತಿಕೊಂಡ ನಂತರ, ಕೆಲವು ಪ್ರವಾಸಿಗರು ಕೆಳಗೆ ಓಡಲು ಪ್ರಾರಂಭಿಸಿದರು. ಗಲಿಬಿಲಿಯಲ್ಲಿ, ನೆಲ ಮಹಡಿಯಲ್ಲಿರುವ ಅಡುಗೆಮನೆಗೆ ಹೋದರು. ಅಲ್ಲಿಗೆ ಓಡಿದ ಪ್ರವಾಸಿಗರು ಇತರ ಸಿಬ್ಬಂದಿಯೊಂದಿಗೆ ಅಲ್ಲಿ ಸಿಕ್ಕಿಹಾಕಿಕೊಂಡರು. ಅನೇಕರು ಕ್ಲಬ್‌ನಿಂದ ಹೊರಗೆ ಓಡಿಹೋಗಿ ಬಚಾವಾದರು’ ಎಂದು ಫಾತಿಮಾ ಹೇಳಿದರು.

‘ಸ್ವಲ್ಪ ಹೊತ್ತಿನಲ್ಲೇ, ಇಡೀ ಕ್ಲಬ್​ಗೆ ಬೆಂಕಿ ಆವರಿಸಿಕೊಂಡಿತು. ಅಲ್ಲಿ ತಾಳೆ ಗರಿಗಳಿಂದ ಮಾಡಲ್ಪಟ್ಟ ತಾತ್ಕಾಲಿಕ ಹಟ್​ಗಳಿದ್ದವು. ನೋಡನೋಡುತ್ತಿದ್ದಂತೆ ಅವುಗಳಿಗೂ ಬೆಂಕಿ ಹೊತ್ತಿಕೊಂಡಿತು. ಈ ನೈಟ್ ಕ್ಲಬ್ ಅರ್ಪೋರಾ ನದಿಯ ಹಿನ್ನೀರಿನಲ್ಲಿದ್ದು, ಪ್ರವೇಶ ಮತ್ತು ನಿರ್ಗಮನದ ದಾರಿಗಳು ತುಂಬಾ ಕಿರಿದಾಗಿವೆ. ಕಿರಿದಾದ ಲೇನ್‌ಗಳಿಂದಾಗಿ ಕ್ಲಬ್‌ಗೆ ಅಗ್ನಿಶಾಮಕ ದಳದವರು ಬರುವುದು ಸಾಧ್ಯವಾಗಿಲ್ಲ. ಅಗ್ನಿಶಾಮಕದಳದ ಟ್ಯಾಂಕರ್‌ಗಳನ್ನು ಸ್ಥಳದಿಂದ ಸುಮಾರು 400 ಮೀಟರ್ ದೂರದಲ್ಲಿ ನಿಲ್ಲಿಸಬೇಕಾಗಿತ್ತು’ ಎಂದು ಅವರು ಘಟನೆಯನ್ನು ವಿವರಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿ, ‘ಸ್ಥಳಕ್ಕಾಗಮಿಸಲು ದಾರಿ ಕಿರಿದಾಗಿತ್ತು. ಬೆಂಕಿಯನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿತ್ತು. ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರು ನೆಲಮಹಡಿಯಲ್ಲಿ ಸಿಲುಕಿಕೊಂಡಿದ್ದರು’ ಎಂದು ಹೇಳಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲ; ಮಹಿಳೆ ಸೇರಿ ಐವರು ಆರೋಪಿಗಳಿಗೆ 13-14 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

Next Post

ಸುರತ್ಕಲ್ ಚಾಕೊಲೇಟ್ ಖರೀದಿಸಲು ಬಂದಿದ್ದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ಆರೋಪಿ ಮೇಲೆ ಪೋಕ್ಸೋ ಕೇಸು ದಾಖಲು

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
41
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
180
Next Post
ಸುರತ್ಕಲ್ ಚಾಕೊಲೇಟ್ ಖರೀದಿಸಲು ಬಂದಿದ್ದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ಆರೋಪಿ ಮೇಲೆ ಪೋಕ್ಸೋ ಕೇಸು ದಾಖಲು

ಸುರತ್ಕಲ್ ಚಾಕೊಲೇಟ್ ಖರೀದಿಸಲು ಬಂದಿದ್ದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ಆರೋಪಿ ಮೇಲೆ ಪೋಕ್ಸೋ ಕೇಸು ದಾಖಲು

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
96
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d