ಬೆಂಗಳೂರು, ಫೆ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ ಆದರೆ, ಅದೇ ರೀತಿ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಖೆಡ್ಡಕ್ಕೆ ಕೆಡವಿದ್ದಾರೆ.
ಹೀಗೆ ಪೊಲೀಸರ ಬಲೆಗೆ ಬಿದ್ದವರು ಶಿವು, ಸಮೀರ್, ಮನೋಹರ್, ಗಿರೀಶ್, ಜಗ್ಗೇಶ್ ಹಾಗೂ ಜಸ್ವಂತ್. ಶಿವು ಹೊರತು ಪಡಿಸಿದರೆ ಉಳಿದವರೆಲ್ಲರು ಎಟಿಎಂಗಳಿಗೆ ಹಣ ತುಂಬುವ ಸೆಕ್ಯೂರ್ ವ್ಯಾಲ್ಯೂ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಕ್ಯಾಶ್ ಆಫೀಸರ್ಗಳಾಗಿ ಕೆಲಸ ಮಾಡುತ್ತಿದ್ದವರು. ಎಟಿಎಂನಲ್ಲಿ ಹಣ ತುಂಬುವುದು ಸೇರಿದಂತೆ ದುರಸ್ತಿ ಕೆಲಸ ಕೂಡ ಮಾಡುತ್ತಿದ್ದರು. ಈ ವೇಳೆ ಎಟಿಎಂನಿಂದ ಹಣ ತೆಗೆದು ಸ್ವಂತಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದರು. ಇದನ್ನು ಬೇರೆ ಕಡೆ ಹೂಡಿಕೆ ಮಾಡಿ ಹಣ ಡಬಲ್ ಮಾಡುವ ಪ್ಲಾನ್ ಮಾಡಿಕೊಂಡಿದ್ದರು. ಆಡಿಟಿಂಗ್ ವೇಳೆಯಲ್ಲಿ ಬೇರೆ ಎಟಿಎಂನಿಂದ ಹಣ ತಂದು ಮತ್ತೊಂದರಲ್ಲಿ ಹಾಕುವ ಕೆಲಸ ಮಾಡುತ್ತಿದ್ದರು.
ಹೀಗೆ ಒಟ್ಟು ನಾಲ್ಕೈದು ಎಟಿಎಂನಿಂದ 43.76 ಲಕ್ಷ ರೂ. ಹಣ ಎಗರಿಸಿದ್ದ ಖದೀಮರು ಎಸ್ಯುವಿ ಕಾರಿನಲ್ಲಿಯೇ ಇಟ್ಟುಕೊಂಡು ಹಣ ಹಂಚಿಕೊಳ್ಳುವಾಗ ಕಿರಿಕ್ ಆಗಿದೆ. ಇದು ಮಹಾಲಕ್ಷ್ಮೀ ಲೇಔಟ್ ಪೊಲೀಸರಿಗೆ ಗೊತ್ತಾಗಿದೆ. ದಾಳಿ ಮಾಡಿದ ಪೊಲೀಸರು, ಒಟ್ಟು 52 ಲಕ್ಷ ರೂ. ನಗದು ಹಣ ಹಾಗೂ ಕದ್ದ ಹಣದಲ್ಲಿ ಖರೀದಿಸಿದ್ದ 40 ಲಕ್ಷ ರೂ. ಮೌಲ್ಯದ ಕಾರುಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post