ಮಂಗಳೂರು, ಫೆ.7: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೂ. 53 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಇಬ್ಬರು ಸೇರಿ ಗಾಂಜಾ ಪೂರೈಕೆ ಮಾಡಿದ ಒರಿಸ್ಸಾ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಹಣ ಮತ್ತು ವಾಹನ ವ್ಯವಸ್ಥೆ ಮಾಡಿದ್ದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳಿಗೆ ಮಾದಕ ವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದೆ. ಈ ವೇಳೆ ಆತನಿಂದ ರೂ. 80,000/- ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೇನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ಅವರನ್ನು ಒಳಗೊಂಡ ತಂಡ ಭಾಗಿಯಾಗಿರುತ್ತದೆ.
Discover more from Coastal Times Kannada
Subscribe to get the latest posts sent to your email.







Discussion about this post