• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸುವುದು ರಾಜಕೀಯ ಪಕ್ಷಗಳ ಆದ್ಯತೆಯಾಗಲಿ: ಎಸ್.ಐ.ಓ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ

Coastal Times by Coastal Times
March 8, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸುವುದು ರಾಜಕೀಯ ಪಕ್ಷಗಳ ಆದ್ಯತೆಯಾಗಲಿ: ಎಸ್.ಐ.ಓ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ
19
VIEWS
WhatsappTelegramShare on FacebookShare on Twitter

ಮಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ, ಯುವಜನರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾದ (ಎಸ್‌ಐಒ) ಜಿಲ್ಲಾ ಘಟಕವು ವಿದ್ಯಾರ್ಥಿ ಪ್ರಣಾಳಿಕೆ ತಯಾರಿಸಿದೆ. ಇವನ್ನು ಎಲ್ಲ ರಾಜಕೀಯ ಪಕ್ಷಗಳಿಗೆ ನೀಡಲಿದೆ ಎಂದು ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಮಹಮ್ಮದ್ ನಾಸೀರ್ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಂಗಳೂರು: 2023ರ ಈ ಬಾರಿಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ವಕ್ತಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ-ಯುವಜನರ ಬೇಡಿಕೆಯ ವಿಚಾರಗಳನ್ನು ಸೇರಿಸಲು ಮತ್ತು ಈ ಹಕ್ಕೊತ್ತಾಯಗಳ ಯುವಜನರ ಮತಗಳನ್ನು ನಿರ್ಣಯಿಸುವಂತೆ ಜನಾಭಿಪ್ರಾಯ ಮೂಡಿಸಲು ಎಸ್.ಐ.ಓ ಕರ್ನಾಟಕವು ಶಿಕ್ಷಣದ ಮೂಲಭಾಗಿದಾರರೊಂದಿಗೆ ಸಮಾಲೋಚಿಸಿ ವಿದ್ಯಾರ್ಥಿ ಪ್ರಣಾಳಿಕೆಯನ್ನು ತಯಾರುಗೊಳಿಸಿದ್ದು, ಪಕ್ಷಗಳು ಈ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮತ್ತು ಬದ್ಧತೆಯನ್ನು ಖಚಿತಪಡಿಸಬೇಕು ಎಂದು ಎಸ್.ಐ.ಓ ದಕ್ಷಿಣ ಕನ್ನಡ ಆಗ್ರಹಿಸುತ್ತದೆ.

ಶಾಲಾ ಪೂರ್ವ ಶಿಕ್ಷಣದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮತ್ತು ಕಲಿಕಾ ಪ್ರಕ್ರಿಯೆಯತ್ತ ತಯಾರುಗೊಳಿಸುವ ಅಂಗನವಾಡಿ ವ್ಯವಸ್ಥೆಯನ್ನು ಸಶಕ್ತಗೊಳಿಸಿ, ಅಪೌಷ್ಟಿಕತೆ ನಿವಾರಣೆಗೆ ಫಲಿತಾಂಶ ಆಧಾರಿತ ಕಾಲಾತೀತ ಕಾರ್ಯಕ್ರಮ ರೂಪಿಸಬೇಕಾಗಿದೆ. ಗ್ರಾಮೀಣ ಮಕ್ಕಳ ಮತ್ತು ವಲಸ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳ ಶಾಲಾ ಹೊರಗುಳಿಯುವಿಕೆ (ಡ್ರಾಪ್ ಔಟ್) ದರವನ್ನು ತಡೆಗಟ್ಟಲು ಕಡ್ಡಾಯ ಶಿಕ್ಷಣ ಹಕ್ಕನ್ನು ಖಾತರಿಪಡಿಸಬೇಕು. ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಹಕಾರಿಯಾಗುವ ಸ್ಕಾಲರ್ಶಿಪ್ ಮತ್ತು ಶಾಲಾ ಸಮವಸ್ತ್ರ ದಂತಹ ಯೋಜನೆಗಳನ್ನು ಸಕಾಲಕ್ಕೆ ನೀಡಬೇಕು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸರಿಸುಮಾರು 50% ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಶೀಘ್ರವೇ ತುಂಬಬೇಕು ಹಾಗೂ ಸರ್ಕಾರದ ವಾರ್ಷಿಕ ಬಜೆಟ್‌ ಹಂಚಿಕೆಯಲ್ಲಿ ಕೊಠಾರಿ ಆಯೋಗದ ಶಿಫಾರಸ್ಸಿನ ಅನ್ವಯ GDP ಯ 6% ರಷ್ಟು ಅನುದಾನವನ್ನು ಶಿಕ್ಷಣ ವಲಯಕ್ಕೆ ಬಜೆಟ್ ನಲ್ಲಿ ಮೀಸಲಿರಿಸಬೇಕು.

ಸಂವಿಧಾನದ ಆಶಯವಾದ ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ, ಶಾಲಾ-ಕಾಲೇಜು ಕ್ಯಾಂಪಸ್ ಗಳು ದೇಶದ ಭವಿಷ್ಯ ರೂಪಿಸುವ ತಾಣಗಳಾಗಿವೆ, ಕ್ಯಾಂಪಸ್ ಗಳಲ್ಲಿ ಜಾತಿ ಮತ್ತು ಧರ್ಮದ ನಿಂದನೆ ಹಾಗೂ ತಾರತಮ್ಯದಂತಹ ಅನೇಕ ಘಟನೆಗಳು ಇತ್ತಿಚೆಗೆ ವರದಿಯಾಗುತ್ತಿರುವುದು ಅಘಾತಕಾರಿ, ಇದನ್ನು ತಡೆಹಿಡಿಯಲು ಮತ್ತು ಪರಸ್ಪರರ ನಡುವೆ ಸಹೋದರತೆ ಹಾಗೂ ಸಾಮರಸ್ಯವನ್ನು ಖಾಯಂಗೊಳಿಸಬೇಕಾಗಿದೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳನ್ನು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಪ್ರಾರಂಭಿಸಿ, ಆ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕು. ಉನ್ನತ ಶಿಕ್ಷಣದಲ್ಲಿನ ಸಾಮಾನ್ಯ ದಾಖಲಾತಿ ಅನುಪಾತ (ಜಿಇಆರ್-GER) 2019-20 ರಲ್ಲಿ 32% ಇದ್ದು, ಅದನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಅಗತ್ಯ “ವಿದ್ಯಾರ್ಥಿ ವೇತನ” ನೀಡಬೇಕು

ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಮತ್ತು ಕಲಿಕೆ ಮುಗಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡುವ ವಿದ್ಯಾರ್ಥಿ-ಯುವಜನರಿಗೆ ಉದ್ಯೋಗ ಖಾತರಿ ಪಡಿಸಲು ಸರ್ಕಾರ ಸೂಕ್ತ ಯೋಜನೆಯನ್ನು ರೂಪಿಸಬೇಕು. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತ್ವರಿತ ಮತ್ತು ಪಾರದರ್ಶಕ ನೇಮಕಾತಿ ಮಾಡಬೇಕಾಗಿದೆ, ಮತ್ತು ವಿವಿಧ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕಂಪನಿಗಳ ಹುದ್ದೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಿ, ಇಲ್ಲಿನ ಜನತೆಗೆ ನ್ಯಾಯ ಒದಗಿಸಬೇಕು.

1969ರಿಂದ ಮೀನುಗಾರಿಕಾ ಕಾಲೇಜುಗಳು ಮಂಗಳೂರಿನ ಅವಿಭಜೀತ ಅಂಗವಾಗಿದೆ. ಹಲವು ವರ್ಷಗಳ ಸೇವೆಯ ನಂತರವೂ ವಿಶ್ವವಿದ್ಯಾನಿಲಯಗಳೆಂದು ಗುರುತಿಸಲಾಗಿಲ್ಲ. ಕೆಲವು ಕೋರ್ಸ್‌ಗಳನ್ನು ಪಡೆಯಲು ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಈ ಕಾಲೇಜಿಗೆ ಬರುತ್ತಾರೆ. ಮೀನುಗಾರಿಕಾ ಕಾಲೇಜಿಗೆ ವಿಶ್ವವಿದ್ಯಾನಿಲಯ ಸ್ಥಾನಮಾನ ನೀಡಬೇಕು ಎಂದು ಎಸ್‌ಐಒ ದಕ್ಷಿಣ ಕನ್ನಡ ಸಮೀತಿ ಆಗ್ರಹಿಸುತ್ತದೆ.

ಪ್ರತಿ ವರ್ಷ ಮಂಗಳೂರಿನ ಸರಿಸುಮಾರು 5000 ವಿದ್ಯಾರ್ಥಿಗಳು ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಾರೆ. ಶಿಕ್ಷಣ ಕೇಂದ್ರ ಎಂದು ಕರೆದರೂ ಮಂಗಳೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಮಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬುದು ಎಸ್‌ಐಓ ದಕ್ಷಿಣ ಕನ್ನಡ ಸಮೀತಿ ಆಗ್ರಹಿಸುತ್ತದೆ.

ಕಾಲೇಜುಗಳಲ್ಲಿ ಗುಂಪು ಹಲ್ಲೆ ಮತ್ತು ನೈತಿಕ ಪೊಲೀಸ್‌ಗಿರಿ ಹೆಚ್ಚುತ್ತಿದೆ; ದಕ್ಷಿಣ ಕನ್ನಡದ ವೃತ್ತಿಪರ ಸಂಸ್ಥೆಗಳಲ್ಲಿ, ವಿವಿಧ ಹೆಸರುಗಳಲ್ಲಿ ಅಥವಾ ನಿರ್ದಿಷ್ಟ ವಿಷಯಗಳಲ್ಲಿ ಮತ್ತು ಅಸಂವಿಧಾನಿಕ ಪದಗಳ ಮೂಲಕ ದ್ವೇಷ ಭಾಷಣ ಮತ್ತು ಕೋಮು ಹಿಂಸಾಚಾರವನ್ನು ಪ್ರಚೋದಿಸುವವರ ಸಂಖ್ಯೆಯು ಸಂವಿಧಾನದ ಮೌಲ್ಯಗಳನ್ನು ಒಂದೊಂದಾಗಿ ನಿರ್ಲಕ್ಷಿಸುತ್ತಿರುವ ಸಂಕೇತವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಆಡಳಿತ ನಡೆಸುವವರು ವೈಯಕ್ತಿಕ ಘನತೆ ಗೌರವದ ಬದುಕಿಗೆ ಧಕ್ಕೆಯಾಗದಂತೆ ವಿಶೇಷ ಕಾಳಜಿ ವಹಿಸಿ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡಬೇಕು.

ಮಂಗಳೂರು ವಿಶ್ವವಿದ್ಯಾನಿಲಯವು ರಾಜ್ಯದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಶಿಕ್ಷಣದಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಮತ್ತು ಅಂತಿಮ ಅಂಕಗಳ ಕಾರ್ಡ್‌ಗಳಲ್ಲಿ ಹೆಸರುಗಳ ತಪ್ಪುಗಳಂತಹ ಅಂಕಗಳನ್ನು ಪ್ರಕಟಿಸುವಲ್ಲಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸುಧಾರಣೆಯ ಗಂಭೀರ ಅವಶ್ಯಕತೆಯಿದೆ ಎಂದು ಎಸ್‌ಐಒ ದಕ್ಷಿಣ ಕನ್ನಡ ಸಮೀತಿ ಆಗ್ರಹಿಸುತ್ತದೆ.

ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ನಾಸೀರ್, ರಾಜ್ಯ ಕಾರ್ಯದರ್ಶಿ ಎಸ್.ಐ.ಓ ಕರ್ನಾಟಕ, ಮಹಮ್ಮದ್ ಆಸಿಫ್ ಡಿ ಕೆ, ಜಿಲ್ಲಾಧ್ಯಕ್ಷರು ದಕ್ಷಿಣ ಕನ್ನಡ, ಮಹಮ್ಮದ್ ಹಯಾನ್, ಜಿಲ್ಲಾ ಕಾರ್ಯದರ್ಶಿ ದಕ್ಷಿಣ ಕನ್ನಡ, ಹಿಬಾ ಫಾತೀಮಾ, ರಾಜ್ಯ ಕಾರ್ಯದರ್ಶಿ ಜಿ.ಐ.ಓ ಕರ್ನಾಟಕ, ಅಸ್ಮಿನಾ, ಜಿಲ್ಲಾ ಸಂಚಾಲಕರು, ಜಿ.ಐ.ಓ ದಕ್ಷಿಣ ಕನ್ನಡ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಲ್ಮಠ ಸಿಎಸ್ಐ ಬಿಷಪ್ ಹೌಸ್ ಸೆಕ್ರೆಟರಿ ಮಹಿಳೆಗೆ ಕಿರುಕುಳ ; ಸಿಎಸ್‌ಐ, ಕೆಎಸ್‌ಡಿ ಸಭಾಪ್ರಾಂತದ ಖಜಾಂಚಿ ಸೇರಿ 6 ಮಂದಿಯ ವಿರುದ್ಧ ದೂರು

Next Post

ತೊಕ್ಕೊಟ್ಟಿನ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ, ಎಸಿಪಿ ನೇತೃತ್ವದಲ್ಲಿ ದಾಳಿ ಮಹಿಳೆ ಬಂಧನ

Related Posts

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
167
ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ
ಕೋಸ್ಟಾಲ್ ಟೈಮ್ಸ್ ವಿಶೇಷ

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

March 15, 2025
73
Next Post
ತೊಕ್ಕೊಟ್ಟಿನ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ, ಎಸಿಪಿ ನೇತೃತ್ವದಲ್ಲಿ ದಾಳಿ ಮಹಿಳೆ ಬಂಧನ

ತೊಕ್ಕೊಟ್ಟಿನ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ, ಎಸಿಪಿ ನೇತೃತ್ವದಲ್ಲಿ ದಾಳಿ ಮಹಿಳೆ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d