ಮಂಗಳೂರು, ಮಾರ್ಚ್ 7: 2013-18ರ ನಮ್ಮ ಸರ್ಕಾರದ ಅವಧಿಯನ್ನು ಸುವರ್ಣ ಯುಗವೆಂದು ರಮಾನಾಥ ರೈಯವರು ಕರೆದಿದ್ದಾರೆ. ಯಾಕಂದ್ರೆ, ಬಂಟ್ವಾಳ ಕ್ಷೇತ್ರಕ್ಕೆ ಈ ಅವಧಿಯಲ್ಲಿ ಐದು ಸಾವಿರ ಕೋಟಿ ಅನುದಾನ ತಂದಿದ್ದಾರೆ. ಆದರೂ ಅವರನ್ನು ಇಲ್ಲಿನ ಜನ ಯಾಕೆ ಸೋಲಿಸಿದ್ರಿ ಅಂತ ಗೊತ್ತಾಗಲ್ಲ. 2028ರಲ್ಲಿ ರಮಾನಾಥ ರೈ ಮತ್ತೊಮ್ಮೆ ಚುನಾವಣೆಗೆ ನಿಲ್ತಾರೆ. ಆಗ ನೀವು ಹೆಚ್ಚು ಮತಗಳಿಂದ ರಮಾನಾಥ್ ರೈ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಟ್ವಾಳದ 15ನೇ ವರ್ಷದ ಮೂಡೂರು ಪಡೂರು ಜೋಡುಕರೆ ಕಂಬಳದಲ್ಲಿ ಭಾಗವಹಿಸಿದ ಸಿಎಂ ಸಿದ್ಧರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. 2013-18ರಲ್ಲಿ ಮುಖ್ಯಮಂತ್ರಿ ಆದ ಸಮಯದಲ್ಲಿ ಸರ್ಕಾರ ಹಣಕಾಸಿನ ಬಿಕ್ಕಟ್ಟನ್ನು ಎದುರಿಸಿರಲಿಲ್ಲ. ಆ ಸಂದರ್ಭದಲ್ಲಿ ರಮಾನಾಥ ರೈ ಮಂತ್ರಿಯಾಗಿದ್ದರು. ಆ ಕಾಲವನ್ನು ರಮಾನಾಥ ರೈ ಸುವರ್ಣ ಯುಗ ಅಂತಾ ಕರೆದಿದ್ದಾರೆ.

2028ಕ್ಕೆ ರೈ ಅವರೇ ಅಭ್ಯರ್ಥಿ: “ರಮಾನಾಥ ರೈ ಅವರು ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ರಮಾನಾಥ ರೈ ಕ್ಷೇತ್ರಕ್ಕೆ ಐದು ಸಾವಿರ ಕೋಟಿ ರೂಪಾಯಿಯನ್ನು ಕಳೆದ ಅವಧಿಯಲ್ಲಿ ತರಿಸಿ ಅಭಿವೃದ್ಧಿ ಮಾಡಲಾಗಿತ್ತು. ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದರು. ಇದು ನೋವಿನ ಸಂಗತಿ ಅಲ್ವಾ? ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ, ಪ್ರಾಮಾಣಿಕ ಸಚಿವರಲ್ಲಿ ರಮಾನಾಥ ರೈ ಕೂಡ ಒಬ್ಬರಾಗಿದ್ದರು. ಹೀಗಾಗಿ ಅವರು ಮತ್ತೆ ಗೆಲ್ಲಬೇಕು” ಎಂದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ “ಕಂಬಳ ಅತ್ಯಂತ ಜನಪ್ರಿಯ ಕ್ರೀಡೆ. ಇದಕ್ಕೆ ಎಲ್ಲ ಜಾತಿ, ಧರ್ಮೀಯರು ಸೇರುತ್ತಾರೆ. ಈ ಕ್ರೀಡೆಯನ್ನು ಉಳಿಸಿ, ಬೆಳೆಸುವುದು ನಮ್ಮ ಜವಾಬ್ದಾರಿ. ದಕ್ಷಿಣ ಕನ್ನಡದಲ್ಲಿ ಎಲ್ಲರೂ ಭಾಗವಹಿಸುವ ಕ್ರೀಡೆ. ಮಂಗಳೂರಿನ ಜನರು ಸಾಹಸಪ್ರವೃತ್ತಿ ಇರುವ ಕ್ರೀಡೆಯಾಗಿದ್ದು, ಇಲ್ಲಿ ಕೋಣಗಳನ್ನು ಮಕ್ಕಳ ಥರ ಸಾಕುತ್ತಾರೆ. 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡುತ್ತೇವೆ” ಎಂದು ತಿಳಿಸಿದರು.
ಬಳಿಕ ಕನೆಹಲಗೆಯ ಕೋಣಗಳ ಓಟವನ್ನು ಸಿಎಂ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಕಂಬಳಕ್ಕೆ ರಾಜ್ಯಮಟ್ಟದಲ್ಲಿ ಮಾನ್ಯತೆ ಇದೆ ಎಂದ ಸಿಎಂ ಮುಂದಿನ ವರ್ಷ ಬೆಂಜನಪದವು ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಮನವಿಗೆ ಸ್ಪಂದಿಸಿ ಅವರು ಘೋಷಿಸಿದರು. ಕಂಬಳ ಅತ್ಯಂತ ಜನಪ್ರಿಯವಾದ ಕ್ರೀಡೆ, ಎಲ್ಲಾ ಜನರು ಭಾಗವಹಿಸುವ ಕ್ರೀಡೆ. ಕಂಬಳದ ಕೋಣಗಳನ್ನು ತಮ್ಮ ಮಕ್ಕಳ ರೀತಿ ಸಾಕುತ್ತಾರೆ. ವಯಸ್ಸಾದ ಬಳಿಕವೂ ಬಿಟ್ಟು ಕೊಡದೆ ಸಾಯುವ ವರೆಗೂ ಸಾಕುತ್ತಾರೆ. ಇದು ಕಂಬಳದಲ್ಲಿ ಕೋಣಗಳನ್ನು ಇಲ್ಲಿನ ಜನ ಎಷ್ಟು ಪ್ರೀತಿಸುತ್ತಾರೆಂಬುದನ್ಜು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
Discover more from Coastal Times Kannada
Subscribe to get the latest posts sent to your email.








Discussion about this post