• About us
  • Contact us
  • Disclaimer
Saturday, July 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸರಕಾರದ ಸಾಧನೆಗೆ ಜನಮೆಚ್ಚುಗೆ; ಬಿಜೆಪಿ ಬಹುಮತ ಖಚಿತ: ಕೃಷ್ಣ ಜೆ. ಪಾಲೆಮಾರ್

Coastal Times by Coastal Times
May 8, 2023
in ಕರಾವಳಿ
ಸರಕಾರದ ಸಾಧನೆಗೆ ಜನಮೆಚ್ಚುಗೆ; ಬಿಜೆಪಿ ಬಹುಮತ ಖಚಿತ: ಕೃಷ್ಣ ಜೆ. ಪಾಲೆಮಾರ್
18
VIEWS
WhatsappTelegramShare on FacebookShare on Twitter

ಮಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಈ ಬಾರಿ ರಾಜ್ಯದ ಜನತೆ ಪಕ್ಷವನ್ನು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರಲಿದ್ದಾರೆ ಎಂದು ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜೆ. ಕೃಷ್ಣ ಪಾಲೆಮಾರ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಎಲ್ಲರಿಗೂ ಉಪಯುಕ್ತವಾಗಿವೆ. ನಮ್ಮ ಶಾಸಕರು ಅತಿ ಹೆಚ್ಚಿನ ಪ್ರಮಾಣದ ಅನುದಾನಗಳನ್ನು ತಂದು ಪ್ರಾಮಾಣಿಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅನುದಾನಗಳ ಸಮರ್ಪಕ ಬಳಕೆಯಾಗಿದ್ದು, ಅದರ ಲಾಭಗಳು ಜನಸಾಮಾನ್ಯರಿಗೆ ಸಿಗುವಂತಾಗಿದೆ. ಹೀಗಾಗಿ ಮನೆ ಮನೆಗೆ ತೆರಳಿ ಜನರ ಬೆಂಬಲ ಯಾಚಿಸಲು ನಮಗೆ ಯಾವುದೇ ಅಳುಕು, ಹಿಂಜರಿಕೆ ಇಲ್ಲ. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು ಮತಯಾಚಿಸಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಸವಲತ್ತುಗಳನ್ನು ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಜನತೆಗೆ ತಲುಪಿಸಲು ಪುನರಾಯ್ಕೆಯನ್ನು ಬಯಸುತ್ತಿದ್ದೇವೆ. ಜನರು ಬಿಜೆಪಿಗೆ ಸಂಪೂರ್ಣ ಆಶೀರ್ವಾದ ಮಾಡುವ ಭರವಸೆ ನಮಗಿದೆ ಎಂದು ಪಾಲೆಮಾರ್ ನುಡಿದರು.

ಹಿಂದೆ ನಾನು ಸಚಿವನಾಗಿದ್ದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಂಗಳೂರು ನಗರಕ್ಕೆ ನೀಡಿದ 200 ಕೋಟಿ ರೂ ಅನುದಾನದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ಆರಂಭಿಸಲಾಯಿತು. ನಂತರದ ಅವಧಿಯಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಹಾಗೂ ಡಾ. ಭರತ್‌ ಶೆಟ್ಟಿ ಅವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದರು. ಸ್ಮಾರ್ಟ್‌ ಸಿಟಿ ಯೋಜನೆಯಡಿ ಬಂದಿರುವ ಸಾವಿರಾರು ಕೋಟಿ ರೂ,.ಗಳ ಅನುದಾನಗಳು ಸಮರ್ಪಕ ಬಳಕೆಯಾಗಿವೆ. ಅವರ ಒಳ್ಳೆಯ ಕೆಲಸಗಳಿಗೆ ಜನತೆ ಬೆಂಬಲಿಸುತ್ತಾರೆ ಎಂದು ಕೃಷ್ಣ ಪಾಲೆಮಾರ್ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಪ್ರಾಮಾಣಿಕತೆಗೆ, ಬೆಲೆ ಕೊಟ್ಟು ಎಲ್ಲ ಎಂಟೂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಪಾಲೆಮಾರ್ ವಿನಂತಿಸಿದರು. ಪಕ್ಷದಲ್ಲಿ ನಿಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನವೇನಾದರೂ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ಹಾಗೇನಾದರೂ ಇದ್ದರೆ ನಾನು ನಿಮ್ಮ ಮುಂದೆ ಈ ರೀತಿ ಬಂದು ಕುಳಿತುಕೊಳ್ಳಲು ಸಾಧ್ಯವಿತ್ತೆ? ಎಂದು ಕೃಷ್ಣ ಪಾಲೆಮಾರ್ ನಗುವಿನೊಂದಿಗೆ ಮರುಪ್ರಶ್ನೆ ಹಾಕಿದರು.

40% ಕಮಿಷನ್‌ ಸರಕಾರ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ಪ್ರಶ್ನಿಸಿದಾಗ, ಆರೋಪಗಳನ್ನು ಯಾರ ಮೇಲೆ ಯಾರು ಬೇಕಾದರೂ ಮಾಡಬಹುದು. ಆದರೆ ಸಾಕ್ಷ್ಯಾಧಾರಗಳ ಸಮೇತ ಸಾಬೀತುಪಡಿಸಬೇಕು ಅಷ್ಟೆ. ಸುಮ್ಮನೆ ಆರೋಪ ಮಾಡುವುದರಲ್ಲಿ ಹುರುಳಿಲ್ಲ ಎಂದು ಪಾಲೆಮಾರ್ ಉತ್ತರಿಸಿದರು.

ವಾಸ್ತವದಲ್ಲಿ ಯಾವುದೇ ಕಾಮಗಾರಿ ಗುತ್ತಿಗೆಯಾದರೂ ಶೇ 18ರಷ್ಟು ಜಿಎಸ್‌ಟಿ ಮತ್ತು ಇತರ ತೆರಿಗೆಗಳು ಸೇರಿ ಶೇ 24ರಷ್ಟು ಮೊತ್ತವನ್ನು ಸರಕಾರಕ್ಕೇ ಮರಳಿಸಬೇಕಾಗುತ್ತದೆ. ಇದು ಲಂಚವಲ್ಲ. ಇದನ್ನು ಲಂಚ, ಭ್ರಷ್ಟಾಚಾರವೆಂದು ಕಾಂಗ್ರೆಸ್‌ನವರು ಕರೆದರೆ ಅದು ಮೂರ್ಖತನ. ಶೇ 85ರ ಕಮಿಷನ್ ನುಂಗುತ್ತಿದ್ದ ಕಾಂಗ್ರೆಸ್‌ಗೆ ಸರಕಾರದ ತೆರಿಗೆ ಕೂಡ ಲಂಚದಂತೆ ಕಾಣುತ್ತದೆ. ಆದ್ದರಿಂದ ಕಾಂಗ್ರೆಸ್‌ ಆರೋಪಗಳು ಸಂಪೂರ್ಣ ನಿರಾಧಾರ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಜಗದೀಶ್ ಶೇಣವ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ ಮತ್ತು ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಪೂರ್ಣ ಬಹುಮತದ ಬಿಜೆಪಿ ಸರಕಾರಕ್ಕೆ ಮತ್ತೆ ಅಧಿಕಾರ: ನಳಿನ್ ಕುಮಾರ್ ಕಟೀಲ್

Next Post

ಮಂಗಳೂರು ಮಹಾನಗರದ ಜನರನ್ನು ಸಂಕಷ್ಟಕ್ಕೆ ದೂಡಿದ ಬಿಜೆಪಿ : ಜೆ.ಆರ್.ಲೋಬೊ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
249
Next Post
ಮಂಗಳೂರು ಮಹಾನಗರದ ಜನರನ್ನು ಸಂಕಷ್ಟಕ್ಕೆ ದೂಡಿದ ಬಿಜೆಪಿ : ಜೆ.ಆರ್.ಲೋಬೊ

ಮಂಗಳೂರು ಮಹಾನಗರದ ಜನರನ್ನು ಸಂಕಷ್ಟಕ್ಕೆ ದೂಡಿದ ಬಿಜೆಪಿ : ಜೆ.ಆರ್.ಲೋಬೊ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
57
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d