• About us
  • Contact us
  • Disclaimer
Sunday, August 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್

Coastal Times by Coastal Times
May 8, 2023
in ಕ್ರೈಮ್ ನ್ಯೂಸ್
ಉಳ್ಳಾಲ: ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್
51
VIEWS
WhatsappTelegramShare on FacebookShare on Twitter

ಉಳ್ಳಾಲ, ಮೇ 7 : ಬೈಕ್ ಮತ್ತು ಆಟೋ ರ‍್ಯಾಲಿ ನಡೆಯುತ್ತಿದ್ದಾಗ ಎಸ್​ಡಿಪಿಐ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಉಳ್ಳಾಲದ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆಯವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ಆಟೋ ರಿಕ್ಷಾ ಹಾಗೂ ಬೈಕ್ ರ‍್ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಘಟನೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾಗಿದ್ದಾರೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಪ್ರಚಾರದ ವಾಹನ ಎಸ್​ಡಿಪಿಐ ರ‍್ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು. ಎಸ್​ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ‍್ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಕಾಂಗ್ರೆಸ್ ಪರ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು. ಇದಕ್ಕೆ ಎಸ್‍ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿ, ನಿಲ್ಲಿಸುವಂತೆ ಸೂಚಿಸಿದ್ದರು. ಗಣನೆಗೆ ತೆಗೆದುಕೊಳ್ಳದ ಚಾಲಕ ವಾಹನಕ್ಕೆ ಅಡ್ಡ ಇಟ್ಟವರಿಗೆ ಹಾರ್ನ್ ಹಾಕಲು ಆರಂಭಿಸಿದ್ದಾರೆ. ಇದರಿಂದ ಕೆರಳಿದ ಎಸ್‌ಡಿಪಿಐ ಕಾರ್ಯಕರ್ತರು ಚಾಲಕ ನೌಫಾಲ್ ಕಾಲರ್ ಪಟ್ಟಿ ಹಿಡಿದೆಳೆದು ಹಲ್ಲೆ ನಡೆಸಿದ್ದಾರೆ. ಐಫೋನ್ ಕಸಿದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಗಾಯಾಳು ನೌಫಾಲ್​ನನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ದೇರಳಕಟ್ಟೆ ಸಮೀಪ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು. ತದನಂತರ ಎಸ್‌ಡಿಪಿಐ ಕಾರ್ಯಕರ್ತನೊಬ್ಬನನ್ನು ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇರಳಕಟ್ಟೆಯಲ್ಲಿ ನಡೆಯುತ್ತಿದ್ದ ಎಸ್​ಡಿಪಿಐ ಸಾರ್ವಜನಿಕ ಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಘಟನಾ ಸ್ಥಳಕ್ಕೆ ಉಪ ಪೊಲೀಸ್ ಆಯುಕ್ತರುಗಳಾದ ಅಂಶು ಕುಮಾರ್ ಐಪಿಎಸ್, ಬಿ.ಪಿ ದಿನೇಶ್ ಕುಮಾರ್, ಸಹಾಯಕ ಪೊಲೀಸ್ ಆಯುಕ್ತೆ ಧನ್ಯ ಎನ್. ನಾಯಕ್ ಹಾಗೂ ಉಳ್ಳಾಲ ಮತ್ತು ಕೊಣಾಜೆ ಠಾಣಾ ಪೊಲೀಸರನ್ನು ಬಂದೋಬಸ್ತ್​ಗಾಗಿ ನಿಯೋಜಿಸಲಾಗಿತ್ತು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬಿಜೆಪಿ ಹಿರಿಯ ಮುಖಂಡ ಸತೀಶ್‌ ಪ್ರಭು ಕಾಂಗ್ರೆಸ್‌ ಸೇರ್ಪಡೆ

Next Post

ಕೇರಳ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ : ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ

Related Posts

ಯೂಟ್ಯೂಬ್‌ ನೋಡಿ ಗಂಡನ ಕಿವಿಗೆ ವಿಷ ಸುರಿದು ಕೊಂದ ಹೆಂಡತಿ!
ಕ್ರೈಮ್ ನ್ಯೂಸ್

ಯೂಟ್ಯೂಬ್‌ ನೋಡಿ ಗಂಡನ ಕಿವಿಗೆ ವಿಷ ಸುರಿದು ಕೊಂದ ಹೆಂಡತಿ!

August 8, 2025
47
ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್
ಕ್ರೈಮ್ ನ್ಯೂಸ್

ರೋಶನ್‌ ಸಲ್ದಾನ ಪ್ರಕರಣ ಇ.ಡಿ. ತನಿಖೆ; ಆರೋಪಿಗಳ ಬ್ಯಾಂಕ್ ಖಾತೆಗಳು ಸ್ಥಗಿತ

August 8, 2025
54
Next Post
ಕೇರಳ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ : ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ

ಕೇರಳ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ : ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ

Discussion about this post

Recent News

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
18
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
ಮಂಗಳೂರು: ಮಸಾಜ್ ಪಾರ್ಲರ್ ಮಾಲೀಕನಿಂದ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ, ಅರೆನಗ್ನ ಫೋಟೋ ತೆಗೆದು ಬ್ಲಾಕ್ಮೇಲ್

ಮಂಗಳೂರು: ಮಸಾಜ್ ಪಾರ್ಲರ್ ಮಾಲೀಕನಿಂದ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ, ಅರೆನಗ್ನ ಫೋಟೋ ತೆಗೆದು ಬ್ಲಾಕ್ಮೇಲ್

August 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d