• About us
  • Contact us
  • Disclaimer
Tuesday, March 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

Coastal Times by Coastal Times
May 8, 2025
in ರಾಷ್ಟ್ರೀಯ ಸುದ್ದಿ
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು
113
VIEWS
WhatsappTelegramShare on FacebookShare on Twitter

ನವದೆಹಲಿ: ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನ ಹಾಗೂ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಸ್ಥಳೀಯರು ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನದ ಮುರಿದ್ಕೆಯಿಂದ ಮೊದಲ ಪ್ರತಿಕ್ರಿಯೆ ನೀಡಿದ ಸ್ಥಳೀಯರೊಬ್ಬರು ಭಾರತ ನಡೆಸಿದ ದಾಳಿ ಭಯಾನಕವಾಗಿತ್ತು ಎಂದು ವಿವರಿಸಿದ್ದಾರೆ.

ANI ನ್ಯೂಸ್‌ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಪ್ರತ್ಯಕ್ಷದರ್ಶಿಯೊಬ್ಬರು, “ಮಧ್ಯರಾತ್ರಿ 12.45ರ ಸುಮಾರಿಗೆ ಒಂದು ಡ್ರೋನ್ ಬಂತು. ಅದರ ನಂತರ ಮತ್ತೆ ಮೂರು ಡ್ರೋನ್‌ಗಳು ಬಂದವು. ಅವುಗಳು ಮಸೀದಿಯ ಮೇಲೆ ದಾಳಿ ಮಾಡಿದವು. ಎಲ್ಲವೂ ನಾಶವಾಯ್ತು. ಮಾತ್ರವಲ್ಲ ಎಲ್ಲೆಡೆ ಭಯದ ವಾತಾವರಣ ಸೃಷ್ಟಿಯಾಯಿತು” ಎಂದು ಹೇಳಿದರು.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ನಿಖರವಾದ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಹೊರಬಂದಿದೆ.

ಲಷ್ಕರ್-ಎ-ತೈಬಾ ತರಬೇತಿ ಕೇಂದ್ರ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಮುರಿದ್ಕೆ, ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ತರಬೇತಿ ಮತ್ತು ಸೈದ್ಧಾಂತಿಕ ಕೇಂದ್ರ ಮತ್ತು ಮರ್ಕಜ್ ತೈಬಾದ ನೆಲೆಯಾಗಿದೆ. 2000 ರಲ್ಲಿ ನಂಗಲ್ ಸಹದಾನ್‌ನಲ್ಲಿ ಸ್ಥಾಪನೆಯಾದ ಈ ನೆಲೆ ಭಯೋತ್ಪಾದಕ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಅಲ್ಲಿ ಪ್ರತಿ ವರ್ಷ ಸುಮಾರು 1,000 ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗೆ ದಾಖಲಾಗುತ್ತಾರೆ ಎಂದು ವರದಿಯಾಗಿದೆ.

ಅಜ್ಮಲ್ ಕಸಬ್ ತರಬೇತಿ ಪಡೆದಿದ್ದ ಇದೇ ಸ್ಥಳದಲ್ಲಿ: ಇದು ಅಟ್ಟಾರಿ-ವಾಘಾ ಗಡಿಯಿಂದ ಕೇವಲ 25-30 ಕಿಲೋಮೀಟರ್ ದೂರದಲ್ಲಿದೆ. ಅಜ್ಮಲ್ ಕಸಬ್ ಸೇರಿದಂತೆ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲಾ ಭಯೋತ್ಪಾದಕರು ಈ ನೆಲೆಯಲ್ಲಿ ಗುಪ್ತಚರ ತರಬೇತಿ ಪಡೆದಿದ್ದರು. ದಾಳಿಯ ಪ್ರಮುಖ ಸಂಚುಕೋರರಾದ ​​ಡೇವಿಡ್ ಕೋಲ್ಮನ್ ಹೆಡ್ಲಿ ಮತ್ತು ತಹಾವುರ್ ಹುಸೇನ್ ರಾಣಾ ಕೂಡ ಲಷ್ಕರ್ ಕಮಾಂಡರ್ ಝಕಿ-ಉರ್-ರೆಹಮಾನ್ ಲಖ್ವಿಯ ಸೂಚನೆಯ ಮೇರೆಗೆ ಮುರಿದ್ಕೆಗೆ ಬಂದಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

Next Post

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

Related Posts

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
59
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
13
Next Post
ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

Discussion about this post

Recent News

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
30
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

March 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d