• About us
  • Contact us
  • Disclaimer
Wednesday, February 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುಡ್ಡ ಕುಸಿತ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು‌ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Coastal Times by Coastal Times
July 8, 2023
in ಕರಾವಳಿ
ಗುಡ್ಡ ಕುಸಿತ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು‌ ಸಚಿವ ದಿನೇಶ್ ಗುಂಡೂರಾವ್ ಸೂಚನೆ
77
VIEWS
WhatsappTelegramShare on FacebookShare on Twitter

ಮಂಗಳೂರು: ದ.ಕ.ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಮತ್ತು ನದಿ ತೀರದಲ್ಲಿ ಮಳೆಯಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಮನ್ವಯತೆಯಿಂದ ಕೆಲಸ ಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರಾತ್ರಿ ಮಂಗಳೂರು ಮಹಾನಗರ ಪಾಲಿಕೆಯ ಕಮಾಂಡ್‌ ಕಂಟ್ರೋಲ್ ರೂಂ ನಲ್ಲಿ ವ್ಯಾಪಕ ಮಳೆ, ಪ್ರವಾಹ ಹಾಗೂ ಕೈಗೊಂಡಿ ರುವ ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು ಅಥವಾ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಿದೆ, ಆದರೆ ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳಿವೆ, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಬೀಳುವ ಸ್ಥಿತಿ, ಬಿರುಕು ಬಿಟ್ಟ ಸ್ಥಿತಿಗಳಲ್ಲಿರುವ ಸೇತುವೆಗಳನ್ನೊಮ್ಮೆ ಪರಿಶೀಲಿಸುವಂತೆ ಲೋಕೋಪಯೋಗಿ ಇಲಾಖೆಯ‌ ಕಾರ್ಯನಿರ್ವಹಕ ಎಂಜಿನಿಯರ್ ಯಶವಂತ್ ಅವರಿಗೆ ಸೂಚನೆ ನೀಡಿದ ಅವರು, ಪ್ರಾಕೃತಿಕ ವಿಕೋಪ‌ ನಿರ್ವಹಣೆಯಲ್ಲಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಬಾರದು, ಆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಯಾವುದೇ ರೀತಿಯ ಪ್ರಾಕೃತಿಕ ಅನಾಹುತಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗೆ ಸಿದ್ಧವಿರಬೇಕು ಎಂದು ಹೇಳಿದರು.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿ ನೀಡಿರಬೇಕು, ಅಧಿಕ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದು ಸೇರಿದಂತೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಸೂಕ್ತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ವಿಕೋಪಗಳನ್ನು ಸೂಕ್ತವಾಗಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು ಹಾಗೂ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದರು.

ವಿಧಾನ ಪರಿಷತ್ ಶಾಸಕ ಹರಿಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ‌ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಸೇರಿದಂತೆ ಲೋಕೋಪಯೋಗಿ, ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶಿಕ್ಷಕಿಯ ಪಿಂಚಣಿ ದಾಖಲೆಗೆ 5 ಲಕ್ಷ ಬೇಡಿಕೆ ; ಶಾಲೆ ಸಂಚಾಲಕಿ ಲೋಕಾಯುಕ್ತ ಬಲೆಗೆ

Next Post

ಮಕ್ಕಳಿಬ್ಬರಿಗೆ ಗುಣಪಡಿಸಲಾಗದ ರೋಗ ಪತ್ತೆ ; SBI ಬ್ಯಾಂಕ್ ಮ್ಯಾನೇಜರ್ ಸಹಿತ ಇಡೀ ಕುಟುಂಬ ಸಾವಿಗೆ ಶರಣು !

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
19
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
23
Next Post
ಮಕ್ಕಳಿಬ್ಬರಿಗೆ ಗುಣಪಡಿಸಲಾಗದ ರೋಗ ಪತ್ತೆ ; SBI ಬ್ಯಾಂಕ್ ಮ್ಯಾನೇಜರ್ ಸಹಿತ ಇಡೀ ಕುಟುಂಬ ಸಾವಿಗೆ ಶರಣು !

ಮಕ್ಕಳಿಬ್ಬರಿಗೆ ಗುಣಪಡಿಸಲಾಗದ ರೋಗ ಪತ್ತೆ ; SBI ಬ್ಯಾಂಕ್ ಮ್ಯಾನೇಜರ್ ಸಹಿತ ಇಡೀ ಕುಟುಂಬ ಸಾವಿಗೆ ಶರಣು !

Discussion about this post

Recent News

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
39
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d