ಮಂಗಳೂರು, ಆಗಸ್ಟ್ 7: ಮಂಗಳೂರಿನಿಂದ ಮುಂಬೈ ಹೊರಟಿದ್ದ ಮಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ರೈಲಿನಲ್ಲಿ ಸುಲಿಗೆ ಮಾಡಿರುವ ಘಟನೆ ಗೋವಾ- ರತ್ನಗಿರಿ ನಡುವೆ ನಡೆದಿದೆ. ಆಗಸ್ಟ್ 4ರಂದು ಮಂಗಳೂರು- ಗೋವಾ ಮೂಲಕ ಕೇರಳದ ಕೊಚುವೆಲಿಯಿಂದ ಋಷಿಕೇಶ ತೆರಳುತ್ತಿದ್ದ ರೈಲಿನ ಎಸಿ ಕೋಚ್ ಕಂಪಾರ್ಟ್ಮೆಂಟಿನಲ್ಲಿ ಸುಲಿಗೆ ಮಾಡಲಾಗಿದೆ.
ಮೂಲತಃ ಮುಂಬೈಯ ಪ್ರಸ್ತುತ ನಗರದ ಶಕ್ತಿನಗರ ಎಂಬಲ್ಲಿ ವಾಸವಾಗಿದ್ದ ಎಲಿಝಬೆತ್ಗೆ ಸೇರಿದ ಬ್ಯಾಗ್ ಇದಾಗಿದ್ದು, ಇದರಲ್ಲಿ 15 ಸಾವಿರ ರೂ., ಎಟಿಎಂ, ಆಧಾರ್, ಪ್ಯಾನ್ ಕಾರ್ಡ್ ಮತ್ತಿತರ ದಾಖಲೆಪತ್ರಗಳಿದ್ದವು ಎನ್ನಲಾಗಿದೆ. ಆರೋಪಿಗಳು ಇವೆಲ್ಲವನ್ನು ಪಡೆದು ಬಳಿಕ ಬ್ಯಾಗ್ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಕಂಕನಾಡಿಯಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಮುಂಬೈಗೆ ತೆರಳುವ ರೈಲಿಗೆ ಆ.4ರಂದು ಸಂಜೆ 5:30ಕ್ಕೆ ಎಲಿಝಬೆತ್ ಮತ್ತವರ ಸಹೋದರ ಹತ್ತಿದ್ದರು. ರಾತ್ರಿ ಸುಮಾರು 10ಕ್ಕೆ ಇಬ್ಬರು ನಿದ್ದೆಗೆ ಜಾರಿದ್ದು, ಬೆಳಗ್ಗೆ ಎದ್ದು ನೋಡಿದಾಗ ಬ್ಯಾಗ್ ಕಳವಾಗಿತ್ತು. ಹುಡುಕಾಡಿದಾಗ ಬ್ಯಾಗ್ ರೈಲಿನ ಬೋಗಿಯೊಂದರ ಟಾಯ್ಲೆಟ್ನಲ್ಲಿ ಕಂಡು ಬಂದಿತ್ತು. ಗೋವಾ-ರತ್ನಗಿರಿ ಮಧ್ಯೆ ಈ ಕೃತ್ಯ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೆ, ರೈಲಿನಲ್ಲಿ ಏಸಿ ಕಂಪಾರ್ಟ್ಮೆಂಟ್ ಅದರ ಬಾಗಿಲು ತೆರೆದುಕೊಂಡಿತ್ತು. ಅದರಿಂದಲೇ ಕಳ್ಳರು ನುಗ್ಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸಾಮಾನ್ಯವಾಗಿ ಎಸಿ ಬೋಗಿಯಲ್ಲಿ ಫುಲ್ ಆಗಿದ್ದರೆ, ಹೊರಗಿನಿಂದ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಎಲಿಜಬೆತ್ ಮುಂಬೈ ನಿವಾಸಿಗಳಾಗಿದ್ದು, ಮೂರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನೆಲೆಸಿದ್ದರು. ಇವರ ಮಗ ಮುಂಬೈನಲ್ಲಿದ್ದು, ತಂಗಿಯ ಜೊತೆಗೆ ಅಲ್ಲಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಈ ಕೃತ್ಯದ ಬಗ್ಗೆ ಎಲಿಝಬೆತ್ ಟಿಟಿಗೆ ಮಾಹಿತಿ ನೀಡಿದ್ದು, ಅದರಂತೆ ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
Discussion about this post