• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವೆನ್ಲಾಕ್‌ ಆಸ್ಪತ್ರೆಯಲ್ಲಿ 3 ವಾರಗಳಿಂದ ಶಸ್ತ್ರಚಿಕಿತ್ಸೆಗೆ ಕಾಯುತ್ತಿರುವ ಗಾಯಾಳು…

Coastal Times by Coastal Times
September 8, 2022
in ಕರಾವಳಿ
ವೆನ್ಲಾಕ್‌ ಆಸ್ಪತ್ರೆಯಲ್ಲಿ 3 ವಾರಗಳಿಂದ ಶಸ್ತ್ರಚಿಕಿತ್ಸೆಗೆ ಕಾಯುತ್ತಿರುವ ಗಾಯಾಳು…
66
VIEWS
WhatsappTelegramShare on FacebookShare on Twitter

ಮಂಗಳೂರು: ಮೂಡಿಗೆರೆ ತಾಲ್ಲೂಕಿನ ಹೊರನಾಡು ಚಿಕ್ಕಕೂಡಿಗೆ ಗ್ರಾಮದ ಕೃಷಿ ಕೂಲಿ ಕಾರ್ಮಿಕ ಶ್ರೀನಿವಾಸ ಗೌಡ್ಲು ಅವರು ಮರದ ರೆಂಬೆ ಕಡಿಯಲು ಹೋಗಿ ಬೆನ್ನು ಮೂಳೆ ಮುರಿತಕ್ಕೆ ಒಳಗಾಗಿದ್ದು, ಮೂರು ವಾರಗಳಿಂದ ಇಲ್ಲಿನ ವೆನ್ಲಾಕ್‌ ಆಸ್ಪತ್ರೆ ಹಾಸಿಗೆಯಲ್ಲಿ ಮಲಗಿ ಶಸ್ತ್ರಚಿಕಿತ್ಸೆಗಾಗಿ ಕಾಯುತ್ತಿದ್ದಾರೆ. ಅವರ ಕುಟುಂಬವು ಬಿಪಿಎಲ್‌ ಪಡಿತರ ಚೀಟಿಯನ್ನು ಹೊಂದಿದೆಯಾದರೂ ಆಧಾರ್‌ ಜೋಡಣೆಗೆ ಸಂಬಂಧಿಸಿದ ತಾಂತ್ರಿಕ ಅಡಚಣೆಯಿಂದಾಗಿ ಶ್ರೀನಿವಾಸ ಅವರ ಹೆಸರು ಕೈತಪ್ಪಿತ್ತು. ಬಿಪಿಎಲ್‌ ಕಾರ್ಡ್‌ನಲ್ಲಿ ಹೆಸರಿಲ್ಲದ ಕಾರಣಕ್ಕೆ ವೆನ್ಲಾಕ್ ಆಸ್ಪತ್ರೆಯ ವೈದ್ಯರು ಉಚಿತ ಶಸ್ತ್ರಚಿಕಿತ್ಸೆಗೆ ನಿರಾಕರಿಸಿದ್ದರು. ಮುರಿದ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ₹ 72 ಸಾವಿರ ವೆಚ್ಚವಾಗುತ್ತದೆ. ಆದರೆ, ಎಪಿಎಲ್‌ ಕಾರ್ಡ್‌ ಆಧಾರದಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಒಟ್ಟು ಮೊತ್ತದ ಶೇ 70ರಷ್ಟು ವೆಚ್ಚ ಭರಿಸಬೇಕು ಎಂದು ಆಸ್ಪತ್ರೆ ವೈದ್ಯರು ಸೂಚಿಸಿದ್ದರು. ಅಷ್ಟು ಹಣ ಇಲ್ಲದೇ ಕುಟುಂಬ ಕಂಗಾಲಾಗಿತ್ತು. ಡಿವೈಎಫ್‌ಐ ಸಂಘಟನೆಯವರು ಒತ್ತಾಯಿಸಿದರೂ ಆಸ್ಪತ್ರೆಯವರು ಉಚಿತ ಶಸ್ತ್ರಚಿಕಿತ್ಸೆ ನಡೆಸಲು ನಿರಾಕರಿಸಿದ್ದರು.

ತಾಂತ್ರಿಕ ದೋಷ ಸರಿಪಡಿಸಿ ಕುಟುಂಬದವರು ಬಿಪಿಎಲ್‌ ಕಾರ್ಡ್‌ ಅನ್ನು ಸೋಮವಾರ ಆಸ್ಪತ್ರೆಗೆ ನೀಡಿದ್ದರು. ‘ಈಗಾಗಲೇ ಆಯುಷ್ಮಾನ್‌ ಪೋರ್ಟಲ್‌ನಲ್ಲಿ ರೋಗಿಯ ವಿವರ ಅಪ್‌ಲೊಡ್‌ ಮಾಡಿರುವುದರಿಂದ ಅದನ್ನು ಬಿಪಿಎಲ್‌ಗೆ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಕೈಚೆಲ್ಲಿದ್ದರು’ ಎಂದು ಶ್ರೀನಿವಾಸ ಗೌಡ್ಲು ಕುಟುಂಬದವರು ತಿಳಿಸಿದರು. ‘ಶ್ರೀನಿವಾಸ್‌ ಅವರೇ ಕುಟುಂಬಕ್ಕೆ ಆಧಾರವಾಗಿದ್ದರು. ಅವರೇ ಈಗ ಸ್ನಾನ, ಶೌಚ ಸಹಿತ ನಿತ್ಯ ವಿಧಿಗಳನ್ನು ಹಾಸಿಗೆಯಲ್ಲೆ‌ ಮುಗಿಸಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ. ಅವರ ತಂದೆ ಮಂಜಪ್ಪ ಗೌಡ ಅವರಿಗೆ ವಯಸ್ಸಾಗಿದೆ. ಅಣ್ಣ ಅನಂತ ಅವರೂ ಅಂಗವಿಕಲ. ತಾಯಿ ಯಶೋದಾ ಅವರೂ ಮಾನಸಿಕ ಸಮಸ್ಯೆಯನ್ನು ಹೊಂದಿದ್ದಾರೆ. ಹಾಗಾಗಿ ನೆರೆಕರೆಯವರು ಹಾಗೂ ಬಂಧುಗಳು ದೂರದ ಮಂಗಳೂರಿಗೆ ಬಂದು ಗಾಯಾಳುವನ್ನು ನೊಡಿಕೊಳ್ಳಬೇಕಾದ ಸ್ಥಿತಿ ಇದೆ’ ಎಂದು ಶ್ರೀನಿವಾಸ ಗೌಡ್ಲು ಅವರ ಭಾವ ಮಣಿಶೇಖರ್‌ ತಿಳಿಸಿದರು.  ‘ಶ್ರೀನಿವಾಸ್ ಅವರು ವೆನ್ಲಾಕ್‌ನಲ್ಲಿ ಮಲಗಿ ಮೂರು ವಾರ ಕಳೆದರೂ ಅವರ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿಲ್ಲ. ಆರೋಗ್ಯದ ವ್ಯಾಪಾರೀಕರಣದಿಂದಾಗಿ ಎಲ್ಲಾ ಬಡವರು ಇಂತಹ ದುಃಸ್ಥಿತಿ ಎದುರಿಸಬೇಕಾಗುತ್ತಿದೆ’ ಎಂದು ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ದೂರಿದರು. ಶಸ್ತ್ರಚಿಕಿತ್ಸೆ ಬಗ್ಗೆ  ಪ್ರತಿಕ್ರಿಯಿಸಿದ ವೆನ್ಲಾಕ್‌ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಸದಾಶಿವ ಶ್ಯಾನುಭಾಗ್‌, ‘ಶ್ರೀನಿವಾಸ ಕುಟುಂಬದವರು ಮಂಗಳವಾರವಷ್ಟೇ ಬಿಪಿಎಲ್‌ ಪಡಿತರ ಚೀಟಿ ಹಾಜರುಪಡಿಸಿದ್ದಾರೆ. ಹಾಗಾಗಿ ಅವರಿಗೆ ಶನಿವಾರ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತೇವೆ’ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ, ಗಣ್ಯರ ಕಂಬನಿ

Next Post

ಮಾಲಿನ್ಯ ಉಂಟು ಮಾಡುವ ಬೃಹತ್ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ, ಮಾಲಿನ್ಯ ನಿಯಂತ್ರಣ ಮಂಡಳಿ ಅಣಕು ಶವಯಾತ್ರೆ

Related Posts

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
36
ಮೂರು ವರ್ಷದ ಹಿಂದೆ ಪಿಕಪ್ ಡ್ರೈವರ್ ಆಗಿದ್ದ ವಹಾಬ್ ಕುಲಾಯಿ ಇವತ್ತು ವಫಾ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ ನಿಂದ ಕೋಟ್ಯಾದಿಪತಿಯಾದ ಸ್ಟೊರಿ
ಕರಾವಳಿ

ಮೂರು ವರ್ಷದ ಹಿಂದೆ ಪಿಕಪ್ ಡ್ರೈವರ್ ಆಗಿದ್ದ ವಹಾಬ್ ಕುಲಾಯಿ ಇವತ್ತು ವಫಾ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ ನಿಂದ ಕೋಟ್ಯಾದಿಪತಿಯಾದ ಸ್ಟೊರಿ

August 23, 2025
240
Next Post
ಮಾಲಿನ್ಯ ಉಂಟು ಮಾಡುವ ಬೃಹತ್ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ, ಮಾಲಿನ್ಯ ನಿಯಂತ್ರಣ ಮಂಡಳಿ ಅಣಕು ಶವಯಾತ್ರೆ

ಮಾಲಿನ್ಯ ಉಂಟು ಮಾಡುವ ಬೃಹತ್ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ, ಮಾಲಿನ್ಯ ನಿಯಂತ್ರಣ ಮಂಡಳಿ ಅಣಕು ಶವಯಾತ್ರೆ

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
42
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d