• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮೇಯರ್‌ ಮತ್ತು ಉಪ ಮೇಯರ್‌ ಕುರ್ಚಿಯ ಮೇಲೆ ಹಲವರ ಕಣ್ಣು

Coastal Times by Coastal Times
September 8, 2022
in ರಾಜಕೀಯ
ಮಂಗಳೂರು ಮೇಯರ್‌ ಮತ್ತು ಉಪ ಮೇಯರ್‌ ಕುರ್ಚಿಯ ಮೇಲೆ ಹಲವರ ಕಣ್ಣು
104
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆ ಸೆ.9ರಂದು ನಡೆಯಲಿದ್ದು, ಬಿಜೆಪಿ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. 23ನೇ ಅವಧಿಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ವರ್ಗದ ಮೀಸಲಾತಿ ನಿಗದಿಯಾಗಿರುವುದರಿಂದ ಹಲವರು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು ಎಸ್‌ಡಿಪಿಐ ಇಬ್ಬರು ಸದಸ್ಯರ ಬಲ ಹೊಂದಿವೆ. ಹಾಲಿ ಮೇಯರ್ ಪ್ರೇಮಾನಂದ ಶೆಟ್ಟಿ ಅವಧಿ ಮಾರ್ಚ್‌ 2ಕ್ಕೆ ಕೊನೆಗೊಂಡಿತ್ತು. ಆದರೆ, ಸುಪ್ರೀಂ ಕೋರ್ಟ್ ಆದೇಶವೊಂದರ ಗೊಂದಲದಿಂದ, ಪ್ರೇಮಾನಂದ ಶೆಟ್ಟಿ ಅವರಿಗೆ ಹೆಚ್ಚುವರಿಯಾಗಿ ಆರು ತಿಂ‌ಗಳು ಅಧಿಕಾರದಲ್ಲಿರಲು ಸಾಧ್ಯವಾಯಿತು.

ಸೆ.9ರಂದು ನಡೆಯಲಿರುವ ಮೇಯರ್ ಚುನಾವಣೆಗೆ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಾರ್ಡ್ ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದೆ. ಉತ್ತರ ಕ್ಷೇತ್ರದಿಂದ ಪದವು ವಾರ್ಡ್‌ನ ಜಯಾನಂದ ಹಾಗೂ ಕುಂಜತ್ತಬೈಲ್ ವಾರ್ಡ್‌ನ ಶರತ್‌ ಅವರ ಹೆಸರು ವಿಶೇಷವಾಗಿ ಕೇಳಿ ಬರುತ್ತಿವೆ. ಜತೆಗೆ, ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ ವೇಳೆ ಸಕ್ರಿಯವಾಗಿ ಕೆಲಸ ಮಾಡಿದ, ಶಾಸಕ ಡಾ. ಭರತ್ ಶೆಟ್ಟಿ ಅವರ ಸಹಾಯಕರಾಗಿ ಕೆಲಸ ಮಾಡಿದ್ದ ಬಂಗ್ರಕುಳೂರು ವಾರ್ಡ್‌ನ ಕಿರಣ್ ಕೋಡಿಕಲ್ ಅವರ ಹೆಸರು ಕೂಡ ಚಾಲ್ತಿಯಲ್ಲಿದೆ. ಮೂರನೇ ಬಾರಿ ಸದಸ್ಯರಾಗಿರುವ ದಕ್ಷಿಣ ಕ್ಷೇತ್ರದ ಕೊಡಿಯಾಲ್‌ಬೈಲ್ ವಾರ್ಡ್‌ನ ಸುಧೀರ್ ಶೆಟ್ಟಿ ಕಣ್ಣೂರು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಇವರು ಸಂಸದರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ‘ಜಾತಿ ಲೆಕ್ಕಾಚಾರ ಪರಿಗಣಿಸಿದಾಗ ಹಾಲಿ ಇರುವ ಮೇಯರ್ ಬಂಟ ಸಮುದಾಯದವರಾಗಿದ್ದು, ಇನ್ನೊಂದು ಪ್ರಬಲ ಬಿಲ್ಲವ ಸಮುದಾಯಕ್ಕೂ ಪ್ರಾತಿನಿಧ್ಯ ನೀಡುವ ಚರ್ಚೆ ಶುರುವಾಗಿದೆ. ಚುನಾವಣೆ ವರ್ಷ ಆಗಿರುವುದರಿಂದ ಸಮರ್ಥ ಅಭ್ಯರ್ಥಿ ಆಯ್ಕೆ, ಎಲ್ಲರಿಗೂ ಒಪ್ಪಿತವಾಗುವ ಮೇಯರ್ ಅಭ್ಯರ್ಥಿ ಆಯ್ಕೆ ಸವಾಲಾಗಿದೆ’ ಎಂಬುದು ಬಿಜೆಪಿ ಮೂಲಗಳ ಮಾಹಿತಿ. ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ‘ಎ’ ಮಹಿಳೆಗೆ ಮೀಸಲಾಗಿದ್ದು, ಪೂರ್ಣಿಮಾ, ಶಕೀಲ ಕಾವ, ವೀಣಾ ಮಹಾಬಲ, ಜಯಶ್ರೀ ಕುಡ್ವ, ಹೇಮಲತಾ, ಶ್ವೇತಾ, ಲಕ್ಷ್ಮಿ ಅವರ ಹೆಸರು ಚಾಲ್ತಿಯಲ್ಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಎನ್ಐಎ ವಿಚಾರಣೆ ಬಳಿಕ ರಿಯಾಝ್ ಫರಂಗಿಪೇಟೆ ಪ್ರತಿಕ್ರಿಯೆ, ನಿಷ್ಪಕ್ಷಪಾತ ತನಿಖೆ ಆಗಬೇಕು, ವಿಚಾರಣೆ ಸಂಬಂಧ ಸಂಪೂರ್ಣ ಸಹಕಾರದ ಮಾತು

Next Post

ನಿವೃತ್ತ ಸೈನಿಕ ಶತಾಯುಷಿ 108 ವಯಸ್ಸಿನ ಮೈಕಲ್‌ ಡಿ’ಸೋಜಾ ಇನ್ನಿಲ್ಲ

Related Posts

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ
ರಾಜಕೀಯ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
50
Next Post
ನಿವೃತ್ತ ಸೈನಿಕ ಶತಾಯುಷಿ 108 ವಯಸ್ಸಿನ ಮೈಕಲ್‌ ಡಿ’ಸೋಜಾ ಇನ್ನಿಲ್ಲ

ನಿವೃತ್ತ ಸೈನಿಕ ಶತಾಯುಷಿ 108 ವಯಸ್ಸಿನ ಮೈಕಲ್‌ ಡಿ’ಸೋಜಾ ಇನ್ನಿಲ್ಲ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
62
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d