• About us
  • Contact us
  • Disclaimer
Wednesday, May 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

Coastal Times by Coastal Times
September 8, 2023
in ಸಿನಿಮಾ
ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ
19
VIEWS
WhatsappTelegramShare on FacebookShare on Twitter

ಮಂಗಳೂರು : ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಸಿನೆಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ ಅಸ್ಮಿತಾಯ್ ಚಲನಚಿತ್ರವನ್ನು ನಿರ್ಮಿಸಿದ್ದು ಈ ಸಿನೆಮಾವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ.

ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆಯು ಗೋವಾದಿಂದ ವಲಸೆ, ಕೊಂಕಣಿಯ ಶ್ರೀಮಂತ ಜನಪದ ಪರಂಪರೆಯ ದೃಶ್ಯ ವೈಭವವನ್ನು ನವಿರಾದ ಪ್ರೇಮಕತೆಯೊಂದಿಗೆ ತೋರಿಸುತ್ತದೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆ ರಚಿಸಿದ್ದು ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸುಂದರವಾಗಿ ಸೆರೆ ಹಿಡಿದ ಕರಾವಳಿ, ಮಲೆನಾಡು ಮತ್ತು ಗೋವಾದ ದೃಶ್ಯಗಳನ್ನು ಮೇವಿನ್ ಜೊಯೆಲ್ ಪಿಂಟೊ ಉತ್ತಮವಾಗಿ ಸಂಕಲನ ಮಾಡಿದ್ದಾರೆ.

ಆರು ಹಾಡುಗಳಿಗೆ ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ ಹಾಗೂ ಎರಿಕ್ ಒಝೇರಿಯೊ ಮುದಗೊಳಿಸುವ ಸಂಗೀತ ರಚಿಸಿದ್ದು, ಪ್ರಸಿದ್ಧ ಗಾಯಕ ನಿಹಾಲ್ ತಾವ್ರೊ ಹಾಗೂ ಇತರೆ ಗಾಯಕರು ದನಿಗೂಡಿಸಿದ್ದಾರೆ. ಡೆನಿಸ್ ಮೊಂತೇರೊ, ಅಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಪ್ರಿನ್ಸ್ ಜೇಕಬ್, ಸಾಯಿಶ್ ಪನಂದಿಕರ್, ಗೌರೀಶ್ ವೆರ್ಣೆಕರ್, ಸ್ಟ್ಯಾನಿ ಆಲ್ವಾರಿಸ್, ನೆಲ್ಲು ಪೆರ್ಮನ್ನೂರ್, ಸುನೀಲ್ ಸಿದ್ದಿ, ಲುಲು ಫೊರ್ಟೆಸ್, ನವೀನ್ ಲೋಬೊ ಹೀಗೆ ಗೋವಾ ಮತ್ತು ಮಂಗಳೂರಿನ ಖ್ಯಾತ ಕಲಾವಿದರು ಪ್ರಮುಖ ಭೂಮಿಕೆಯಲ್ಲಿದ್ದಾರೆ. ಇತರ ಸುಮಾರು 500 ಕ್ಕೂ ಮಿಕ್ಕಿ ಕಲಾವಿದರು ಪ್ರಥಮ ಬಾರಿಗೆ ಕ್ಯಾಮರಾದ ಮುಂದೆ ಕಾಣಿಸಲಿದ್ದಾರೆ.

ಈ ಚಿತ್ರವು ಸೆಪ್ಟೆಂಬರ್ 15 ರಿಂದ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ 2 ದೇಖಾವೆಗಳು ಹಾಗೂ ಸಿನೆ ಗ್ಯಾಲಕ್ಸಿ ಸುರತ್ಕಲ್, ಭಾರತ್ ಸಿನೆಮಾಸ್ ಪಡುಬಿದ್ರಿ, ಭಾರತ್ ಸಿನೆಮಾಸ್ ಮಣಿಪಾಲ, ಭಾರತ್ ಸಿನೆಮಾಸ್ ಪುತ್ತೂರು, ಭಾರತ್ ಟಾಕೀಸ್ ಬೆಳ್ತಂಗಡಿ ಮತ್ತು ಪ್ಲಾನೆಟ್ ಕಾರ್ಕಳ ಇಲ್ಲಿ ತಲಾ ಒಂದು ದೇಖಾವೆ ಮತ್ತು ಕಲ್ಪನಾ ಟಾಕೀಸ್ ಉಡುಪಿ ಹಾಗೂ ಪದ್ಮಾಂಜಲಿ ಟಾಕೀಸ್ ಹೊನ್ನಾವರದಲ್ಲಿ ತಲಾ ನಾಲ್ಕು ದೇಖಾವೆಗಳು ಪ್ರದರ್ಶನಗೊಳ್ಳಲಿವೆ. ನಂತರ ಬೆಂಗಳೂರು, ಮುಂಬಯಿ, ಗೋವಾ ಹಾಗೂ ಯುಎಇ, ಕುವೇಯ್ಟ್, ಖತಾರ್, ಬಾಹ್ರೇಯ್ನ್, ಓಮನ್, ಇಸ್ರಾಯೆಲ್, ಜರ್ಮನಿ, ಆಸ್ಟ್ರೇಲಿಯಾ, ಆಯರ್ಲೆಂಡ್, ಅಮೇರಿಕಾ ಮತ್ತಿತರ ದೇಶಗಳಲ್ಲಿ ಪ್ರದರ್ಶನಕ್ಕೆ ಸ್ಥಳೀಯ ಸಹಕಾರದಲ್ಲಿ ಏರ್ಪಾಡು ಮಾಡಲಾಗುವುದು. ಜನರ ಕೋರಿಕೆ ಮೇರೆಗೆ ಇತರ ಕಡೆಗಳಲ್ಲೂ ಪ್ರದರ್ಶನಕ್ಕೆ ಅವಕಾಶವಿರಲಿದೆ.
ಸೆಪ್ಟೆಂಬರ್ 10 ರಂದು ಮಂಗಳೂರಿನ ಬಿಜಯ್, ಪುತ್ತೂರು ಹಾಗೂ ಮಣಿಪಾಲದ ಭಾರತ್ ಸಿನೆಮಾದಲ್ಲಿ ಸಂಜೆ 4.00 ಗಂಟೆಗೆ ಏಕ ಕಾಲದಲ್ಲಿ ಮೂರು ಕಡೆ ಪ್ರೀಮಿಯರ್ ಪ್ರದರ್ಶನ ನಡೆಯಲಿದೆ. ಮಂಗಳೂರಿನ ಪ್ರದರ್ಶನವನ್ನು ಗೋವಾದ ಶಾಸಕ ದಂಪತಿ ಮೈಕಲ್ ಲೋಬೊ, ಡಿಲಾಯ್ಲಾ ಲೋಬೊ ಉದ್ಘಾಟಿಸಲಿದ್ದಾರೆ.
`ಚಲನಚಿತ್ರದಿಂದ ಚಳುವಳಿ’ ಎಂಬ ಧ್ಯೇಯದೊಡನೆ ಮಾಂಡ್ ಸೊಭಾಣ್ ಈ ಚಿತ್ರವನ್ನು ಜನರ, ದಾನಿಗಳ ಸಹಕಾರದಿಂದ ನಿರ್ಮಿಸಿದ್ದು ಅಧ್ಯಕ್ಷ ಲುವಿ ಜೆ ಪಿಂಟೊ ನಿರ್ಮಾಣದ ಉಸ್ತುವಾರಿ ವಹಿಸಿದ್ದಾರೆ.

ಪತ್ರಿಕಾ ಗೋಷ್ಟಿಯಲ್ಲಿ : • ಎರಿಕ್ ಒಝೆರಿಯೊ – (ಕತೆ – ಅಸ್ಮಿತಾಯ್) • ಲುವಿಸ್ ಜೆ. ಪಿಂಟೊ – (ನಿರ್ಮಾಪಕ – ಅಸ್ಮಿತಾಯ್) • ಜೊಯೆಲ್ ಪಿರೇರಾ – ( ಚಿತ್ರಕತೆ, ಸಂಭಾಷಣೆ – ಅಸ್ಮಿತಾಯ್)
• ಡೆನಿಸ್ ಮೊಂತೇರೊ, ಅಶ್ವಿನ್ ಡಿಕೋಸ್ತಾ, ವೆನ್ಸಿಟಾ ಡಾಯಸ್, ಸ್ಟ್ಯಾನಿ ಆಲ್ವಾರಿಸ್, ನೆಲ್ಲು ಪೆರ್ಮನ್ನೂರ್, (ಪಾತ್ರವರ್ಗ)

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದ ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ..!

Next Post

ಮಂಗಳೂರು |ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

Related Posts

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ
ಸಿನಿಮಾ

ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ

January 31, 2025
64
Next Post
ಮಂಗಳೂರು |ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

ಮಂಗಳೂರು |ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

Discussion about this post

Recent News

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
132
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d