ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ವಿಚಾರ ಕೇರಳದಲ್ಲಿ ಯ್ಯೂಟ್ಯೂಬ್ ಮೂಲಕ ಸುದ್ದಿ ಹಂಚಿದ ವಿಚಾರವಾಗಿ ಮನಾಫ್ ಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಸೆ.8 ರಂದು ಮಧ್ಯಾಹ್ನ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಮಾಧ್ಯಮಗಳ ಕಣ್ಣು ತಪ್ಪಿಸಲು ಒಳ ದಾರಿಯ ಮೂಲಕ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಮನಾಫ್ ತನ್ನ ಯುಟ್ಯೂಬ್ ಚಾನಲ್ನಲ್ಲಿ ಧರ್ಮಸ್ಥಳದಲ್ಲಿ ತಲೆಬುರುಡೆಯನ್ನು ತೆಗೆಯುತ್ತಿರುವ ವಿಡಿಯೋ ಸಹಿತ ಇನ್ನೂ ಹಲವು ವಿಡಿಯೋಗಳನ್ನು ಇವರು ಹಾಕಿದ್ದಾರೆ ಎನ್ನಲಾಗಿದ್ದು, ಮನಾಫ್ ಜತೆಗೆ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ನೋಟಿಸ್ ನೀಡಿದಂತೆ ಹಾಜರಾಗಲಿದ್ದೇವೆ. ಸತ್ಯಾಸತ್ಯೆ ಬಗ್ಗೆ ಎಸ್ಐಟಿ ತನಿಖೆ ನಡೆಸಿಲಿದೆ. ಅವರ ಯಾವುದೇ ಪ್ರಶ್ನೆಗೆ ನಾವು ಉತ್ತರ ನೀಡಲಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಮನಾಫ್ ಜತೆಗೆ ಕೇರಳ ಮಾನವ ಹಕ್ಕುಗಳ ಆಯೋಗದ ಸದಸ್ಯರು ಜತೆಗಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post