• About us
  • Contact us
  • Disclaimer
Friday, January 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಶಾರದೋತ್ಸವ ಮೆರವಣಿಗೆಗೆ ಅಡ್ಡಿ; ಪ್ರಕರಣ ಹಿಂಪಡೆಯದಿದ್ದರೆ ಉಗ್ರ ಹೋರಾಟ: ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಕುವೆತ್ತಬೈಲ್

Coastal Times by Coastal Times
October 8, 2025
in ಕರಾವಳಿ
ಉಳ್ಳಾಲ ಶಾರದೋತ್ಸವ ಮೆರವಣಿಗೆಗೆ ಅಡ್ಡಿ; ಪ್ರಕರಣ ಹಿಂಪಡೆಯದಿದ್ದರೆ ಉಗ್ರ ಹೋರಾಟ: ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಕುವೆತ್ತಬೈಲ್
37
VIEWS
WhatsappTelegramShare on FacebookShare on Twitter

ಉಳ್ಳಾಲ: ಇತ್ತೀಚೆಗೆ ನಡೆದ ಶಾರಾದೋತ್ಸವ ಮೆರವಣಿಗೆಗೆ ಪೊಲೀಸರಿಂದಲೇ ಅಡ್ಡಿಯಾಗಿದೆ, ಉಳ್ಳಾಲ ದಲ್ಲಿ ಶಾರಾದೋತ್ಸವ ಮೆರವಣಿಗೆ ತಡೆದು ಮೂವರನ್ನು ‌ ಪೊಲೀಸರು ಬಂಧಿಸಿರುವುದು ಖಂಡನೀಯ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಕುವೆತ್ತಬೈಲ್ ಆರೋಪಿಸಿದ್ದಾರೆ.

ಅವರು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಘಟನೆ ಬಳಿಕ ಶಾರದೋತ್ಸವ ಮೆರವಣಿಗೆ ಅಲ್ಲೇ ಸ್ಥಗಿತಗೊಳಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಯಿತು. ಈ ವೇಳೆ ಬಿಜೆಪಿ ಹಿರಿಯ ಮುಖಂಡರು ಠಾಣೆಯಲ್ಲಿ ಸಭೆ ನಡೆಸಿ ಇಬ್ಬರನ್ನು ಬಿಡುಗಡೆ ಮಾಡಿಸಲಾಯಿತು. ಇದರ ಬಳಿಕ ಶಾರದೋತ್ಸವ ವಿಸರ್ಜನೆ ಮಾಡಲಾಗಿದೆ. ಇದೇ ಘಟನೆಗೆ ಸಂಬಂಧಿಸಿ ಪೊಲೀಸರು 30 ಜನರ ಸಹಿತ ಇತರ 150 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಮಂಡಲ ಪ್ರ.ಕಾ ,ವಕೀಲರಾದ ಮೋಹನ್ ರಾಜ್ ಕೆ.ಆರ್ ಮಾತನಾಡಿ ಉಳ್ಳಾಲ ಶಾರದೋತ್ಸವ ಗಲಾಟೆಯು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಮನಸ್ಥಿತಿಯ ಮುಂದುವರಿದ ಭಾಗವಾಗಿದೆ.ಪೊಲೀಸರ ಷರತ್ತುಗಳನ್ನು ಪಾಲಿಸಿಯೇ ಮೊಸರು ಕುಡಿಕೆ,ಶಾರದೋತ್ಸವಗಳನ್ನು ಆಚರಿಸಲಾಗಿದೆ.ಉಳ್ಳಾಲದ ದಸರಾ ಮೆರವಣಿಗೆಯಲ್ಲಿ ಪೊಲೀಸರು ಅತಿರೇಕ ಪ್ರದರ್ಶಿಸಿದ ಪರಿಣಾಮ ಗೊಂದಲ ಉಂಟಾಗಿದೆ.ಶಾರದಾ ವಿಗ್ರಹವನ್ನ ರಸ್ತೆಯಲ್ಲಿರಿಸಿ ಹಿಂದೂಗಳ ಭಾವನೆಗೆ ಪೊಲೀಸರು ಧಕ್ಕೆ ತಂದಿದ್ದಾರೆ ಎಂದು ಹೇಳಿದರು.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಕ್ಷಿತ್ ಸೇರಿ ಮೂವರು ಯುವಕರನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ರಕ್ಷಿತ್ನ ಮೇಲೆ ಮೋಟಾರು ವಾಹನ ಕಾಯ್ದೆ ಸಂಬಂಧಿ ಪ್ರಕರಣ ಇದ್ದು,ಅದನ್ನೇ ಮುಂದಿಟ್ಟು ಆತನನ್ನ ದೊಡ್ಡ ಕ್ರಿಮಿನಲ್ ತರ ಬಿಂಬಿಸಲಾಗಿದೆ ಎಂದು ಆರೋಪಿಸಿದರು.

ಸುಪ್ರೀಮ್ ಕೋರ್ಟ್ ನಿರ್ದೇಶನದ ಪ್ರಕಾರ ಆರೋಪಿಗೆ ನೋಟೀಸು ಕೊಟ್ಟು,ವಶಕ್ಕೆ ಪಡೆದು ವಿಚಾರಣೆ ನಡೆಸಿ ಕೇಸು ದಾಖಲಿಸಬೇಕು.ಆದರೆ ರಕ್ಷಿತ್ ನನ್ನ ಮುಂಜಾನೆ ಎರಡು ಗಂಟೆಗೆ ಏಕಾಏಕಿ ಬಂಧಿಸಿ, ಏಳು ಗಂಟೆಗೆ ತರಾತುರಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.ಮತ್ತಿಬ್ಬರು ಯುವಕರನ್ನು ಮಧ್ಯರಾತ್ರಿಯೇ ಬಿಟ್ಟು ಕಳುಹಿಸಿದ್ದು, ಘಟನೆ ಖಂಡಿಸಿ ಠಾಣೆ ಮುಂದೆ ಜಮಾಯಿಸಿದ್ದ ಮೂವತ್ತು ಮಂದಿ ಮತ್ತು ಇತರರ ಮೇಲೆ ಕೇಸು ದಾಖಲಿಸಲಾಗಿದೆ. ವಾರದೊಳಗೆ ಈ ಎಲ್ಲಾ ಕೇಸುಗಳನ್ನ ಹಿಂಪಡೆಯಬೇಕು.ಇಲ್ಲವಾದಲ್ಲಿ ಬಿಜೆಪಿ ಇದರ ವಿರುದ್ಧ ಗಂಭೀರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.

ಉಳ್ಳಾಲ ಶಾರದೋತ್ಸವ ಘಟನೆ ಕುರಿತಂತೆ ಆಯಿಷಾ ಮೊಹಮ್ಮದ್ ಎಂಬ ಹೆಸರಲ್ಲಿ ಹಿಂದೂಗಳನ್ನ ಅಣಕಿಸಿರುವ ಉದ್ರೇಕಕಾರಿ ಪೋಸ್ಟ್ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ ಪೊಲೀಸರು ಇದರ ವಿರುದ್ಧ ಕ್ರಮ ಕೈಗೊಂಡಿಲ್ಲ. ಹಿಂದೂಗಳು ಮಾತ್ರ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಕೂಡಲೆ ಪೊಲೀಸರು ಸುಮೊಟೊ ಕೇಸು ಹಾಕುತ್ತಾ ರೆಂದು ಮೋಹನ್ ರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ ಆಳ್ವ ಕುವೆತ್ತಬೈಲ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಉಳ್ಳಾಲ ಮೊಗವೀರ ಸಮಾಜದ ಮುಖಂಡರಾದ ಬಾಬು ಬಂಗೇರ,ಬಿಜೆಪಿ ಯುವಮೋರ್ಚದ ಜಿಲ್ಲಾ ಉಪಾಧ್ಯಕ್ಷರಾದ ನಿಶಾಂತ್ ಪೂಜಾರಿ, ಯಶವಂತ ಅಮೀನ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಲಾಲ್‌ಬಾಗ್ ಅಂಗಡಿಯಲ್ಲಿ ಅಕ್ರಮ ಇ-ಸಿಗರೇಟ್ ಮಾರಾಟ – 9.72 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ

Next Post

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

Related Posts

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ
ಕರಾವಳಿ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
10
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ
ಕರಾವಳಿ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
22
Next Post
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
10
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d