ಪುತ್ತೂರು: ಆರೋಪಿಯೊಬ್ಬನಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿ ನಕಲಿ ಪಹಣಿಪತ್ರ ನೀಡಿ ನ್ಯಾಯಾಲಯಕ್ಕೆ ವಂಚನೆ ಎಸಗಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ.
ಈತ ಪುತ್ತೂರು ನಿವಾಸಿಯೊಬ್ಬರ ಮಾಲಕತ್ವದಲ್ಲಿರುವ ಜಮೀನಿನ ಪಹಣಿಪತ್ರ( ಆರ್ಟಿಸಿ)ವನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು.
ತನಿಖೆಯ ನಂತರ, ಪೊಲೀಸರು ನವೆಂಬರ್ 6 ರಂದು ಪುತ್ತೂರಿನ ಪಡುವನ್ನೂರು ಗ್ರಾಮದ ನಿವಾಸಿ ಅಬ್ದುಲ್ ಹಾಶಿಮ್ (34) ಅವರನ್ನು ಬಂಧಿಸಿದರು. ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ಸಹಿಗಳನ್ನು ಸೃಷ್ಟಿಸಿ, ವಂಚಿಸುವ ಉದ್ದೇಶದಿಂದ ನ್ಯಾಯಾಲಯಕ್ಕೆ ಅಮೂಲ್ಯವಾದ ಭದ್ರತಾ ಬಾಂಡ್ ಜೊತೆಗೆ ಸಲ್ಲಿಸಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Discover more from Coastal Times Kannada
Subscribe to get the latest posts sent to your email.








Discussion about this post