• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಕೀಲನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

Coastal Times by Coastal Times
December 8, 2023
in ಕ್ರೈಮ್ ನ್ಯೂಸ್
ವಕೀಲನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು
67
VIEWS
WhatsappTelegramShare on FacebookShare on Twitter

ಕಲಬುರಗಿ, ಡಿ.07: ಕಲಬುರಗಿ ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ದಾಖಲಾಗಿದೆ. ಬೆಳಗ್ಗೆ ಗಂಗಾವಿಹಾರ್‌ ಅಪಾರ್ಟ್‌ಮೆಂಟ್‌ನಲ್ಲಿ ವಕೀಲನ ಕೊಲೆ ಆಗಿತ್ತು. ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಈರಣ್ಣ ಗೌಡರನ್ನು ಹತ್ಯೆಗೈದಿದ್ದರು.

ಕಲಬುರಗಿ ನಗರದ ಸಾಯಿ ಮಂದಿರ ಬಳಿಯ ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್‌ನಲ್ಲಿ‌‌. ವೃತ್ತಿಯಲ್ಲಿ ವಕೀಲರು ಆಗಿರುವ 40 ವರ್ಷದ ಈರಣ್ಣಗೌಡ ಎಂಬುವವರು ನೂರಾರು ಎಕರೆ ಜಮೀನಿನ ಜೊತೆಗೆ ರಿಯಲ್ ಎಸ್ಟೇಟ್​ ಬಿಸ್​ನೆಸ್ ಮಾಡುವುದರ ಜೊತೆಗೆ ವಕೀಲ ವೃತ್ತಿಯನ್ನು ಸಹ ಮಾಡಿಕೊಂಡು ಹೋಗುತ್ತಿದ್ದರು. ಇದರ ಮಧ್ಯೆ ಸಂಬಂಧಿಗಳ ಮಧ್ಯೆ ಜಮೀನು, ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆಯುತ್ತಾಯಿತ್ತು. ಪ್ರಕರಣ ಕೋರ್ಟ್‌ನಲ್ಲಿದ್ದರು ಸಹ, ಎರಡು ಕುಟುಂಬಸ್ಥರ ಮಧ್ಯೆ ದೊಡ್ಡಮಟ್ಟದ ವೈಷಮ್ಯ ಬೆಳೆದಿತ್ತು. ಹೀಗಾಗಿ ಇಂದು ಬೆಳಗ್ಗೆ 10.30 ಗಂಟೆಗೆ ಅಪಾರ್ಟ್ಮೆಂಟ್‌ನಿಂದ ಕೋರ್ಟ್‌ಗೆ ತೆರಳು ಈರಣ್ಣಗೌಡ ಬೈಕ್ ಮೇಲೆ ಹೊರಟಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹೊಡೆಯಲು ಮುಂದಾದಾಗ ಅವರಿಂದ ತಪ್ಪಿಸಿಕೊಂಡು ಅಪಾರ್ಟ್ಮೆಂಟ್‌ನ ಬೆಸ್‌ಮೆಂಟ್‌ಗೆ ಬಂದಾಗ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ..

ಇನ್ನು ಹತ್ಯೆಯಾದ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ್ ತಂದೆ ಹಾಗೂ ಸಹೋದರರ ಮಧ್ಯೆ ಉದನೂರು ಗ್ರಾಮದಲ್ಲಿ 70 ಎಕರೆ ಜಮೀನು ವಿವಾದದಿಂದ ವೈಷಮ್ಯ ಏರ್ಪಟ್ಟಿತ್ತು. ಮೂವರು ಸಹೋದರರ ಮಧ್ಯೆ ಈರಣ್ಣಗೌಡ ಒಬ್ಬನೇ ಗಂಡು ಮಗನಾಗಿದ್ದ. ಹೀಗಾಗಿ 70 ಎಕರೆ ಆಸ್ತಿ ಎಲ್ಲಿ ಕೈತಪ್ಪಿ‌ ಹೋಗುತ್ತೋ ಎಂದು ಈರಣ್ಣಗೌಡನನ್ನ ಕೊಲೆ ಮಾಡಲು ಸ್ಕೇಚ್ ಹಾಕಿದ್ದಾರೆ. ಅದರಂತೆ ಇಂದು ಸಹೋದರ ಸಂಬಂಧಿಕರ ಮಕ್ಕಳಾದ ಕಂಟೆಪ್ಪಣ ಅವ್ವಣ್ಣ ಮತ್ತು ಭಾಗೇಶ್ ಎಂಬಾತರು ಸೇರಿಕೊಂಡು ಈರಣ್ಣಗೌಡನನ್ನ ಅಟ್ಟಿಸಿಕೊಂಡು ಭೀಕರ ಹತ್ಯೆ ಮಾಡಿದ್ದಾರೆ ಎಂದು ಆರೋಪಸಿದ್ದಾರೆ.

ಅಟ್ಟಿಸಿಕೊಂಡು ಹತ್ಯೆ: ಸಿಸಿ ಕ್ಯಾಮರಾದಲ್ಲಿ ಸೆರೆ : ಅಟ್ಟಿಸಿಕೊಂಡು ಹತ್ಯೆ ಮಾಡುವ ದೃಶ್ಯಗಳು ಅಪಾರ್ಟ್ಮೆಂಟ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಈ ಹಿಂದೆ ಸಹ ಈರಣ್ಣಗೌಡ ಮತ್ತು ಕುಟುಂಬಸ್ಥರ ಮೇಲೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಅಟ್ಯಾಕ್ ನಡೆದಿತ್ತು. ತನ್ನ ಜೀವಕ್ಕೆ ಅಪಾಯವಿದೆಯೆಂದು ತಿಳಿದ ಈರಣ್ಣಗೌಡ, ಮನೆ ಹಾಗೂ ತನ್ನ ಜಮೀನಿನಲ್ಲಿ ಸಹ ಸಿಸಿ ಕ್ಯಾಮರಾ ಅಳವಡಿಸಿಕೊಂಡಿದ್ದನು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್, ‘ಕೋರ್ಟ್‌ಗೆ ಹೋಗುವಾಗ ಹಂತಕರು ಅಟ್ಯಾಕ್ ಮಾಡಿದ್ದಾರೆ. ಹಂತಕರ ಬಂಧನಕ್ಕೆ ವಿವಿ ಠಾಣೆ ಪೊಲೀಸರ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿದ್ದು, ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ಮತ್ತು ಸ್ಥಳದಲ್ಲಿ ಸಿಕ್ಕ ಕೆಲ ವಸ್ತುಗಳ ಜಾಡು ಹಿಡಿದು ಹಂತಕರನ್ನ ಶೀಘ್ರವೇ ಬಂಧಿಸಲಾಗುವುದೆಂದು ಹೇಳಿದ್ದರು. ಅದೆನೇ ಇರಲಿ ಕಲಬುರಗಿಯಲ್ಲಿ ಮಳೆ ನಿಂತರು ಮಳೆ ಹನಿ ನಿಲ್ಲಲ್ಲ ಎಂಬಂತೆ ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಇದೀಗ ಹಾಡುಹಗಲೇ ವಕೀಲನ ಹತ್ಯೆಯಿಂದ ತೊಗರಿಯ ಕಣಜ ಅಕ್ಷರಶಃ ಬೆಚ್ಚಿಬಿದ್ದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್, ಕೋರ್ಟ್‌ಗೆ ಹೋಗುವಾಗ ಸಮಯದಲ್ಲಿ ಹಂತಕರು ಅಟ್ಯಾಕ್ ಮಾಡಿದ್ದಾರೆ. ಹಂತಕರ ಬಂಧನಕ್ಕೆ ವಿವಿ ಠಾಣೆ ಪೊಲೀಸರ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿದ್ದು ಹಂತಕರನ್ನು ಶೀಘ್ರವೇ ಬಂಧಿಸಲಾಗುವುದೆಂದು ಹೇಳಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ರೂ.3.70 ಲಕ್ಷ ಮೌಲ್ಯದ ಮಾದಕ ವಸ್ತು ಸಾಗಿಸುತ್ತಿದ್ದವರ ಬಂಧನ, ಮಾರಕಾಯುಧಗಳು ವಶಕ್ಕೆ

Next Post

ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
53
Next Post
ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d