• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

Coastal Times by Coastal Times
March 9, 2026
in ಕ್ರೀಡಾ ಸುದ್ದಿ
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
24
VIEWS
WhatsappTelegramShare on FacebookShare on Twitter

ಅಹ್ಮದಾಬಾದ್, ಮಾರ್ಚ್ 8: ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ಭಾರತೀಯ ಕ್ರಿಕೆಟ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಮೂರನೇ ಬಾರಿಗೆ ಟ್ವಿ 20 ವಿಶ್ವಕಪ್ ಗೆದ್ದು ನಾವೇ ಟ್ವಿ-ಟ್ವೆಂಟಿ ಮಾಂತ್ರಿಕರು ಎನ್ನುವುದನ್ನು ಭಾರತೀಯ ಕ್ರಿಕೆಟಿಗರು ಸಾಬೀತುಪಡಿಸಿದ್ದಾರೆ. ಭಾನುವಾರ ಅಹ್ಮದಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಿಕ್ಕಿರಿದು ತುಂಬಿದ್ದ 1.3 ಲಕ್ಷ ಕ್ರಿಕೆಟ್ ಅಭಿಮಾನಿಗಳ ನಡುವೆ ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಬಳಗ ಟಿ-20 ವರ್ಲ್ಡ್ ಕಪ್ ಗೆದ್ದು ಬೀಗಿದೆ.

ಲೀಗ್​ ಹಂತದಲ್ಲಿ ಆಡಿದ ನಾಲ್ಕು ಪಂದ್ಯ ಗೆದ್ದಿದ್ದ ಭಾರತ ಸೂಪರ್​-8 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲೇ ಸೋಲನ್ನು ಕಂಡಿತು. ಇಲ್ಲಿಂದ ಪಾಠ ಕಲಿತುಕೊಂಡು ಮುನ್ನುಗ್ಗಿದ ಭಾರತ ಮುಂದಿನ ಪಂದ್ಯಗಳಲ್ಲಿ ಯಾವುದೇ ತಪ್ಪುಗಳನ್ನು ಮಾಡದೇ ಗೆಲುವು ಸಾಧಿಸಿ ಸೆಮಿಸ್​ಗೆ ತಲುಪಿತು. ಸೆಮಿಫೈನಲ್​ನಲ್ಲಿ ಇಂಗ್ಲೆಂಡ್​ ಮಣಿಸಿ ಫೈನಲ್​ ತಲುಪಿತ್ತು. ಇದೀಗ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ್ದ ಭಾರತ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 255 ರನ್ ಕಲೆಹಾಕಿತು. ಆರಂಭಿಕ ಮೂವರು ಬ್ಯಾಟರ್​ಗಳು ಅರ್ಧಶತಕ ಸಿಡಿಸಿದರು. ಕಳಪೆ ಫಾರ್ಮ್​​ನಿಂದ ಕಂಗೆಟ್ಟಿದ್ದ ಅಭಿಷೇಕ್​ ಶರ್ಮಾ ಫೈನಲ್​ ಪಂದ್ಯದಲ್ಲಿ ಅತ್ಯುತ್ತಮ ಕಮ್​ಬ್ಯಾಕ್​ ಮಾಡಿದರು. ಅವರು ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಇದರೊಂದಿಗೆ ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದರು. 21 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್​ ಸಹಾಯದಿಂದ 52 ರನ್​ಗಳನ್ನು ಕಲೆಹಾಕಿ ನಿರ್ಗಮಿಸಿದರು.

ಬಳಿಕ ಬಂದ ಇಶಾನ್​ ಕಿಶನ್​, ಸಂಜು ಸ್ಯಾಮ್ಸನ್​ ಅವರೊಂದಿಗೆ ಸೇರಿ ಭರ್ಜರಿ ಪ್ರದರ್ಶನ ನೀಡಿದರು. ಈ ಇಬ್ಬರು 2ನೇ ವಿಕೆಟ್​ಗೆ 48 ಎಸೆತಗಳಲ್ಲಿ 105 ರನ್​ಗಳನ್ನು ಕಲೆಹಾಕಿದರು. ಸಂಜು ಸ್ಯಾಮ್ಸನ್​ (89) ಕೇವಲ 11 ರನ್​ಗಳಿಂದ ಶತಕ ವಂಚಿತರಾದರು. ಅವರು ನಿಶಾಮ್​ ಎಸೆತದಲ್ಲಿ ಕ್ಯಾಚೌಟ್​ ಆಗಿ ನಿರ್ಗಮಿಸಿದರು. ನಂತರ ಇಶಾನ್​ ಕಿಶನ್​ (54) ಸಹ ಅರ್ಧಶತಕ ಸಿಡಿಸಿದರು. ಈ ಮೂವರ ಬ್ಯಾಟಿಂಗ್​ ಆರ್ಭಟದಿಂದ 16 ಓವರ್​ಗಳಲ್ಲಿ ಭಾರತ 204 ರನ್​ಗಳನ್ನು ಕಲೆಹಾಕಿತು. ಈ ಮೂವರ ನಿರ್ಗಮನದ ಬೆನ್ನಲ್ಲೆ ಬಂದ ಬ್ಯಾಟರ್​ಗಳಲ್ಲಿ ಹಾರ್ದಿಕ್​ ಪಾಂಡ್ಯ (18), ಸೂರ್ಯಕುಮಾರ್​​ ಯಾದವ್​ ಡಕೌಟ್​ ಆದರು. ಕೊನೆಯಲ್ಲಿ ಶಿವಂ ದುಬೆ 8 ಎಸೆತಗಳಲ್ಲಿ 26 ರನ್​ ಬಾರಿಸಿ ತಂಡದ ಸ್ಕೋರ್​ 250ರ ಗಡಿ ದಾಟಿಸುವಲ್ಲಿ ಯಶಸ್ವಿ ಆದರು. ನ್ಯೂಜಿಲೆಂಡ್​ ಪರ ನಿಶಾಮ್​ 3 ವಿಕೆಟ್​ ಪಡೆದರು.

ಭಾರತ ನೀಡಿದ್ದ 256 ರನ್​ಗಳ ಬೃಹತ್​ ಗುರಿಯನ್ನು ಬೆನ್ನತಿದ ನ್ಯೂಜಿಲೆಂಡ್​ ಉತ್ತಮ ಆರಂಭ ಪಡೆದುಕೊಂಡಿತ್ತು. ಪಿನ್​ ಅಲೆನ್​ ಮತ್ತು ಟಿಮ್​ ಸೈಫರ್ಟ್ ಕೇವಲ 2.4 ಓವರ್​ಗಳಲ್ಲಿ ​ 31 ರನ್​ಗಳನ್ನು ಕಲೆಹಾಕಿದರು. ಈ ವೇಳೆ ಅಕ್ಷರ್​ ಪಟೇಲ್​ ಬ್ರೇಕ್​ ನೀಡಿದರು. ಫಿನ್​ ಅಲೆನ್ (9) ವಿಕೆಟ್​ ಉರುಳಿಸಿದರು. ಇಲ್ಲಿಂದ ಭಾರತ ಸತತ ವಿಕೆಟ್​ಗಳುನ್ನು ಪಡೆಯುತ್ತಾ ಸಾಗಿತು. ಇದರ ಬೆನ್ನಲ್ಲೇ ರಚಿನ್​ ರವೀಂದ್ರ (1) ವಿಕೆಟ್​ ಪಡೆದರು.

ನಂತರ ಗ್ಲೆನ್​ ಫಿಲಿಪ್ಸ್​ (5), ಮಾರ್ಕ್​ ಚಾಪ್ಮಾನ್​ (3) ವಿಕೆಟ್​ ನಿರಂತರ ವಿಕೆಟ್​ ಕಳೆದುಕೊಂಡರು. ಕೇವಲ 72 ರನ್​ಗಳಿಗೆ ತಂಡದ ಅರ್ಧದಷ್ಟು ವಿಕೆಟ್​ಗಳು ಉರುಳಿದವು. ನಂತರ ಬಂದವರಲ್ಲಿ ಮಿಚೆಲ್​ (17) ನಿಶಾಮ್ (8), ಹೆನ್ರಿ ಡಕೌಟ್​ ಆದರು. ತಂಡದ ಪರ ಟಿಮ್​ ಸೈಫರ್ಟ್​ ಮಾತ್ರ (52) ಅರ್ಧಶತಕ ಸಿಡಿಸಿದರೇ, ಸ್ಯಾಂಟ್ನರ್​ (43) ಎರಡನೇ ಹೈಸ್ಕೋರರ್​ ಎನಿಸಿಕೊಂಡರು. ಭಾರತದ ಪರ ಬುಮ್ರಾ 4 ವಿಕೆಟ್​ ಕಿತ್ತರೇ, ಅಕ್ಷರ್​ ಪಟೇಲ್​ 3 ವಿಕೆಟ್​ ಉರುಳಿಸಿದರು. ಬುಮ್ರಾ ಅತ್ಯುತ್ತಮ ಪ್ರದರ್ಶನಕ್ಕಾಗಿ ಪ್ಲೇಯರ್​​ ಆಫ್​ ದಿ ಮ್ಯಾಚ್​ ಪ್ರಶಸ್ತಿ ಪಡೆದುಕೊಂಡರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

Next Post

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
20
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ
ಕ್ರೀಡಾ ಸುದ್ದಿ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
19
Next Post
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Discussion about this post

Recent News

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
27
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d