• About us
  • Contact us
  • Disclaimer
Tuesday, January 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

BMW ಕಾರು ಡಿವೈಡರ್ ಹತ್ತಿ ಸ್ಕೂಟರ್ , ಕಾರುಗಳಿಗೆ ಸರಣಿ ಡಿಕ್ಕಿ , ಕಾರು ಚಾಲಕನಿಗೆ ಹೊರಕ್ಕೆಳೆದು ಥಳಿಸಿದ ಸಾರ್ವಜನಿಕರು ! ಮಹಿಳೆ ಸ್ಥಿತಿ ಗಂಭೀರ

Coastal Times by Coastal Times
April 9, 2022
in ಕರಾವಳಿ
BMW ಕಾರು ಡಿವೈಡರ್ ಹತ್ತಿ ಸ್ಕೂಟರ್ , ಕಾರುಗಳಿಗೆ ಸರಣಿ ಡಿಕ್ಕಿ , ಕಾರು ಚಾಲಕನಿಗೆ ಹೊರಕ್ಕೆಳೆದು ಥಳಿಸಿದ ಸಾರ್ವಜನಿಕರು ! ಮಹಿಳೆ ಸ್ಥಿತಿ ಗಂಭೀರ
502
VIEWS
WhatsappTelegramShare on FacebookShare on Twitter

ಮಂಗಳೂರು, ಎ.9: ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಯಿಂದಾಗಿ ನಗರದ ಬಲ್ಲಾಳ್ ಬಾಗ್ ನಲ್ಲಿ ದುರಂತವೇ ನಡೆದುಹೋಗಿದೆ. ಬಿಎಂಡಬ್ಲ್ಯು ಕಾರನ್ನು ಅತಿ ವೇಗದಿಂದ ಚಲಾಯಿಸಿಕೊಂಡು ಬಂದ ಸವಾರ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟರ್, ಕಾರುಗಳಿಗೆ ಡಿಕ್ಕಿಯಾಗಿದ್ದು, ಸ್ಕೂಟರಿನಲ್ಲಿ ತೆರಳುತ್ತಿದ್ದ ಅಮಾಯಕಿ ಮಹಿಳೆಯೊಬ್ಬರು ಕಾರಿನಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.

ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ಬಿಎಂಡಬ್ಲ್ಯು ಚಾಲಕ ಶ್ರವಣ್ ದೇವಾಡಿಗನನ್ನು ಕಾರಿನಿಂದ ಹೊರಕ್ಕೆಳೆದು ಆಕ್ರೋಶಿತ ಸ್ಥಳೀಯರು ಯದ್ವಾತದ್ವಾ ಥಳಿಸಿದ್ದಾರೆ. ಕಾರು ಚಾಲಕ ಪಿವಿಎಸ್ ಕಡೆಯಿಂದ ಲಾಲ್ ಬಾಗ್ ನತ್ತ ತೆರಳುತ್ತಿದ್ದು ಕಾರನ್ನು ಅತಿ ವೇಗದಿಂದ ಚಲಾಯಿಸಿದ್ದರಿಂದ ಡಿವೈಡರ್ ಮೇಲಕ್ಕೆ ಹತ್ತಿ ಹೋಗಿದೆ. ಅಲ್ಲದೆ, ವಿರುದ್ಧ ದಿಕ್ಕಿನಲ್ಲಿ ಸ್ಕೂಟರಿನಲ್ಲಿ ಬರುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟಿದ್ದಲ್ಲದೆ, ಮತ್ತೆ ಎರಡು ಕಾರುಗಳಿಗೂ ಡಿಕ್ಕಿಯಾಗಿ ನಿಂತಿದೆ.

ಸ್ಕೂಟರಿನಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೊಬ್ಬ ಮಹಿಳೆ ರಸ್ತೆ ದಾಟಲೆಂದು ಡಿವೈಡರ್ ನಲ್ಲಿ ನಿಂತಿದ್ದು, ಆಕೆಯೂ ಕಾರಿನ ಧಾವಂತಕ್ಕೆ ಮತ್ತೊಂದು ರಸ್ತೆಗೆ ಬಿದ್ದಿದ್ದಾರೆ. ಆಕೆಯ ಕಾಲಿಗೂ ಪೆಟ್ಟಾಗಿದೆ. ಕೂಡಲೇ ಉದ್ರಿಕ್ತಗೊಂಡ ಇತರ ವಾಹನಗಳ ಸವಾರರು ಬಿಎಂಡಬ್ಲ್ಯು ಕಾರು ಚಾಲಕನನ್ನು ಹೊರಕ್ಕೆಳೆದು ಮುಖ ಮೂತಿ ನೋಡದೆ ತದುಕಿದ್ದಾರೆ. ಡಿಕ್ಕಿಯಿಂದಾಗಿ ಒಂದು ಭಾಗಕ್ಕೆ ಪೂರ್ತಿ ಜಖಂ ಆಗಿರುವ ಸ್ವಿಫ್ಟ್ ಕಾರಿನ ಚಾಲಕ, ಆರೋಪಿ ಯುವಕನನ್ನು ರಸ್ತೆಯಲ್ಲಿ ಎಳೆದಾಡಿದ್ದಲ್ಲದೆ, ಬೂಟು ಗಾಲಿನಿಂದ ಒದ್ದು ಆಕ್ರೋಶ ತೀರಿಸಿಕೊಂಡಿದ್ದಾರೆ. ಆತ ಸಾರಿ ಸಾರಿ ಎಂದರೂ ಜನರು ಕೇಳುವ ಸ್ಥಿತಿಯಲ್ಲಿರಲಿಲ್ಲ. ಆಟೋ ಚಾಲಕರು ಸೇರಿ ಯದ್ವಾತದ್ವಾ ಹೊಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಇನ್ನೊಂದು ಕಾರಿನಲ್ಲಿದ್ದ ಒಂದು ಮಗುವಿಗೆ ಗಾಯವಾಗಿದೆ. ಮೂರು ಕಾರುಗಳು ಜಖಂ ಆಗಿವೆ, ಒಂದು ಸ್ಕೂಟರ್ ಪೂರ್ತಿ ಅಪ್ಪಚ್ಚಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣ್ಣಗುಡ್ಡೆ ನಿವಾಸಿ ಶ್ರವಣ್‌ ಕುಮಾರ್‌ ಎಂಬಾತ ಕಾರು ಚಲಾಯಿಸಿ ಅಪಘಾತ ನಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆ ಹಾಗು ಡಿವೈಡರ್‌ ನಲ್ಲಿ ನಿಂತಿದ್ದ ಮಹಿಳೆ ಗಾಯಗೊಂಡಿದ್ದಾರೆ. ಗಾಯಗೊಂಡ ವರನ್ನು ಪ್ರೀತಿ ಮನೋಜ್‌, ಅಮೈ ಜಯದೇವನ್‌ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರವಣ್‌ ಕುಮಾರ್‌ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ತಿಳಿಸಿದ್ದಾರೆ.

BMW ಕಾರು ಡಿವೈಡರ್ ಹತ್ತಿ ಸ್ಕೂಟರ್ , ಕಾರುಗಳಿಗೆ ಸರಣಿ ಡಿಕ್ಕಿ , ಕಾರು ಚಾಲಕನಿಗೆ ಹೊರಕ್ಕೆಳೆದು ಥಳಿಸಿದ ಸಾರ್ವಜನಿಕರು ! ಮಹಿಳೆ ಸ್ಥಿತಿ ಗಂಭೀರ pic.twitter.com/DxRxiy6TY2

— brijeshullal (@brijeshullal) April 9, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾರತದ ವಿರುದ್ಧ ಮಾತನಾಡಲು ಮತ್ತೊಂದು ದೇಶ ಧೈರ್ಯ ಮಾಡಲ್ಲ ; ಇಮ್ರಾನ್ ಖಾನ್

Next Post

ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ನಂಟು

Related Posts

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರಾವಳಿ

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ

January 11, 2026
28
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಕರಾವಳಿ

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

January 10, 2026
5
Next Post
ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ನಂಟು

ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ನಂಟು

Discussion about this post

Recent News

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

January 12, 2026
110
ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

January 12, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಮೇತ ಉಗಾಂಡಾ ಮಹಿಳೆ ಮತ್ತು ಆರು ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ

January 12, 2026
ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ; ನಾಲ್ವರು ಯುವಕರ ಮೇಲೆ ಪ್ರಕರಣ ದಾಖಲು

January 12, 2026
ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

ಮಂಗಳೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

January 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d