• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌: ಮಷಿನ್​ ಮೂಲಕ ಡೆಪಾಸಿಟ್​ ಆದ ಹಣ ಖಾತೆಗೆ ಬಂದಿಲ್ಲವೆಂದು ಮಹಿಳೆ ರಂಪಾಟ..

Coastal Times by Coastal Times
June 9, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಸುರತ್ಕಲ್‌: ಮಷಿನ್​ ಮೂಲಕ ಡೆಪಾಸಿಟ್​ ಆದ ಹಣ ಖಾತೆಗೆ ಬಂದಿಲ್ಲವೆಂದು ಮಹಿಳೆ ರಂಪಾಟ..
123
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಸುರತ್ಕಲ್‌ನ ಕೆನರಾ ಬ್ಯಾಂಕ್​​ನಲ್ಲಿ ಹಣ ಕಳುಹಿಸುವ ಯಂತ್ರದಿಂದ ಹಾಕಲಾದ ದುಡ್ಡು ಖಾತೆಗೆ ಬರುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಹಣ ಡೆಪಾಸಿಟ್ ಮಾಡುವ ಯಂತ್ರದ ಮೂಲಕ 24 ಸಾವಿರ ರೂ. ಹಣ ಹಾಕಿದ್ದರು. ಮಧ್ಯಾಹ್ನ ಡೆಪಾಸಿಟ್ ಮಾಡಿದ್ದ ಹಣ ಸಂಜೆಯವರೆಗೂ ಬಂದಿರಲಿಲ್ಲ. ಈ ಬಗ್ಗೆ ಬ್ಯಾಂಕ್​ನಲ್ಲಿ ವಿಚಾರಿಸಿದಾಗ ನಾಲ್ಕು ದಿನದ ಬಳಿಕ ಖಾತೆಗೆ ಬರಬಹುದು ಎಂದು ಹೇಳಿದ್ದರು.  ಚಿಕಿತ್ಸೆಗೆ ದಾಖಲಾಗಿದ್ದ ಕುಟುಂಬವೊಂದಕ್ಕೆ ನೆರವಾಗುವ ಸಲುವಾಗಿ ಅವರು ನೀಡಿದ ಹಣವನ್ನು ತನ್ನ ಖಾತೆಯ ಮೂಲಕ ಅವರಿಗೆ ಹಾಕಲು ಸುರತ್ಕಲ್‌ ರಾಷ್ಟ್ರೀಯ ಬ್ಯಾಂಕ್‌ನ ಶಾಖೆಯೊಂದಕ್ಕೆ ಹೋದ ಸಂದರ್ಭ ಸಿಬಂದಿ ಹಣವನ್ನು ಎಟಿಎಂ ಯಂತ್ರದ ಮೂಲಕ ಪಾವತಿಸುವಂತೆ ಸೂಚಿಸಿದರು.

ಮಹಿಳೆ ಎಟಿಎಂ ಬಳಿಯ ಯಂತ್ರದಲ್ಲಿ ಹಣ ಹಾಕಿ ರಶೀದಿಗಾಗಿ ಕಾಯುತ್ತಾ ನಿಂತರೂ ಪ್ರೊಸೆಸ್‌ ಎಂಬುದಷ್ಟೇ ಬಂದಿತ್ತು. ಖಾತೆಗೆ ಹಣ ವರ್ಗಾವಣೆ ಆಗದೆ ಯಂತ್ರ ಕೈಕೊಟ್ಟಿತ್ತು. ಇದನ್ನು ತಿಳಿದು ಗಾಬರಿಯಾದ ಮಹಿಳೆ ಹಣದ ಅಗತ್ಯವಿದ್ದು ತತ್‌ಕ್ಷಣ ಹಣ ಖಾತೆಗೆ ಹಾಕುವಂತೆ ಮನವಿ ಮಾಡಿದರು. ಇದಕ್ಕೆ ಸರಿಯಾಗಿ ಸ್ಪಂದಿಸದ ಸಿಬಂದಿ ಮ್ಯಾನೇಜರ್‌ ಇಲ್ಲ, ಇದರ ಬಗ್ಗೆ ಮುಖ್ಯ ಕಚೇರಿಗೆ ಹೋಗಿ ತಿಳಿಸಿ. ಈ ಸಮಸ್ಯೆ ಬಗೆಹರಿಸಲು ಎರಡು ಮೂರು ದಿನ ತಗಲುತ್ತದೆ ಎಂದಾಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆಗೆ ಹಣ ಕಟ್ಟಲೆಂದು ಬಂದಿದ್ದೆ. ನೇರವಾಗಿ ನಗದು ಪಡೆದುಕೊಂಡು ಖಾತೆಗೆ ಹಾಕಬಹುದಿತ್ತು. ನಿಮ್ಮ ನಿರ್ಲಕ್ಷéದಿಂದ ಸಮಸ್ಯೆ ಆಗಿದೆ. ಹಣ ವರ್ಗಾವಣೆ ಮಾಡಲೇಬೇಕೆಂದು ಪಟ್ಟು ಹಿಡಿದು ಕುಳಿತರು. ಸ್ಥಳೀಯರು ಜಮಾಯಿಸಿ ಮಹಿಳೆಗೆ ಬೆಂಬಲ ಸೂಚಿಸಿ ಈ ಶಾಖೆಯಲ್ಲಿ ಗ್ರಾಹಕರಿಗೆ ಸ್ಪಂದನೆಯೇ ದೊರಕುತ್ತಿಲ್ಲ ಎಂದು ಕಿಡಿಕಾರಿದರು. ಸಿಬಂದಿ ಕಂಪ್ಯೂಟರ್‌ನಲ್ಲಿ ಪರಿಶೀಲಿಸಿದಾಗ ಹಣ ಹಾಕಿರುವುದು ರುಜುವಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬ್ಯಾಂಕ್‌ನಿಂದ ಹಣ ದೊರಕಿಸಿ, ತಾಂತ್ರಿಕವಾಗಿ ಹಣ ವಿಳಂಬವಾಗಿ ಬಂದರೆ ಮರುಕಳಿಸಲಾಗುವುದು ಎಂದು ಮಹಿಳೆಯಿಂದ ಮುಚ್ಚಳಿಕೆ ಪತ್ರ ಕೊಡಿಸಿ ಪ್ರಕರಣ ಸುಖಾಂತ್ಯಗೊಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಪ್ಪಿನಂಗಡಿ: ಹಿಜಾಬ್ ಧರಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು ತರಗತಿಗೆ ಹಾಜರ್​!

Next Post

ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌ ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ

Related Posts

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
144
ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
174
Next Post
ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌  ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ

ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌ ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
31
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d