• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ, ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ

Coastal Times by Coastal Times
August 9, 2023
in ರಾಜ್ಯ
ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ, ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ
66
VIEWS
WhatsappTelegramShare on FacebookShare on Twitter

ಬೆಂಗಳೂರು: ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ.

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಿದ್ದು, ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತರಲಾದ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 30 ನಿಮಿಷಗಳ ಕಸ್ಟಮ್ಸ್‌ ಕ್ಲಿಯರೆನ್ಸ್‌ ಪ್ರಕ್ರಿಯೆ ಮುಗಿಸಿದ ಬಳಿಕ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಸ್ಪಂದನಾ ಅವರ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ, ನಟ ಶ್ರೀಮುರಳಿ, ಸ್ಪಂದನಾ ಸಹೋದರ ರಕ್ಷಿತ್ ಸೇರಿದಂತೆ ಹಲವರು ಸ್ಥಳದಲ್ಲಿದ್ದು ಮೃತದೇಹವನ್ನು ಪಡೆದುಕೊಂಡು ವಿಜಯ್ ರಾಘವೇಂದ್ರ ಅವರನ್ನು ಕಾರಿನಲ್ಲಿ ಮನೆಗೆ ಕರೆದೊಯ್ದರು. ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆ ಮುಗಿಸಿ ಮಲ್ಲೇಶ್ವರಂಗೆ ಮೃತದೇಹ ರವಾನೆ ಮಾಡಲಾಯಿತು. ಸ್ಪಂದನಾ ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರಂ ನಲ್ಲಿರುವ ಬಿಕೆ ಶಿವರಾಂ ಅವರ ಮನೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ.

ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಬುಧವಾರ ಅಂದರೆ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ. ಶಿವರಾಮ್‌ ಹಾಗೂ ಸೋದರ ರಕ್ಷಿತ್‌ ಶಿವರಾಮ್‌ ಆಗಮನದ ಬಳಿಕ ಮುಂದೆ ನಡೆಸಬೇಕಾದ ಕ್ರಮಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮಂಗಳವಾರ ರಾತ್ರಿಯಿಂದಲೇ ವಿಜಯ ರಾಘವೇಂದ್ರ ಹಾಗೂ ಶಿವರಾಮ್‌ ಕುಟುಂಬದ ಸದಸ್ಯರು, ಸ್ನೇಹಿತರು, ಆಪ್ತರು, ಗಣ್ಯರು ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸುತ್ತಿದ್ದಾರೆ. ಬುಧವಾರ ಸಾರ್ವಜನಿಕ ದರ್ಶನ ಮುಗಿದ ಬಳಿಕ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ.

ವಾರದ ಹಿಂದೆ ಸ್ನೇಹಿತರ ಜತೆಗೆ ಥಾಯ್ಲೆಂಡ್‌ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಪ್ರವಾಸದುದ್ದಕ್ಕೂ ಆರೋಗ್ಯವಾಗಿದ್ದರು. ಬ್ಯಾಂಕಾಕ್‌ನ ಹಾಲಿಡೇ ಇನ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸ್ಪಂದನಾ ಭಾನುವಾರ ತಡರಾತ್ರಿ ಮಲಗಿದವರು ಬೆಳಗ್ಗೆ ಎದ್ದಿಲ್ಲ. ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಲೋ ಬಿಪಿ ಜತೆಗೆ ತೀವ್ರ ಹೃದಯಾಘಾತ ಆಗಿದ್ದರಿಂದ ಮಲಗಿದಲ್ಲೇ ಕೊನೆಯುಸಿರೆಳೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು| ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯಿಂದ ಸರ ಕಳ್ಳತನ

Next Post

ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
39
Next Post
ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ

ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ

Discussion about this post

Recent News

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
25
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
77
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d