• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟಿಸಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ

Coastal Times by Coastal Times
August 9, 2024
in ಕರಾವಳಿ
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟಿಸಿದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ
22
VIEWS
WhatsappTelegramShare on FacebookShare on Twitter

ಉಡುಪಿ: ನಾವು ಊಟ ಮಾಡುವುದು ಮುಖ್ಯವಲ್ಲ, ಊಟ ಮಾಡಿದ್ದನ್ನು ಜೀರ್ಣಿಸಿಕೊಳ್ಳುವುದು ಮುಖ್ಯ. ತಿನ್ನುವಿಕೆ ಅಜೀರ್ಣ ಆಗದ ರೀತಿಯಲ್ಲಿ ಇರಬೇಕು. ಹಿರಿಯರು ಸಾಕಷ್ಟು ಸಂದೇಶಗಳನ್ನು ನೀಡಿದ್ದಾರೆ. ಭಾರತೀಯ ಸಿಹಿ ಮನೆ ಉಡುಪಿಯಲ್ಲಿ ಆರಂಭವಾಗಿದೆ. ತಿನ್ನುವ ಹಬ್ಬ ಶುರುವಾಗಿರುವುದು ಕೃಷ್ಣನೂರಿನಲ್ಲಿ ಸಂಭ್ರಕ್ಕೆ ಕಾರಣವಾಗಿದೆ ಎಂದು ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಸಿಹಿತಿಂಡಿ ಮಳಿಗೆ ಎಂಬ ಹೆಗ್ಗಳಿಕೆಗೆ ಇಂಡಿಯಾ ಸ್ವೀಟ್ ಹೌಸ್ ಮಳಿಗೆ ಪಾತ್ರ ಆಗಿದೆ. ಕೇವಲ ಮೂರು ವರ್ಷಗಳಲ್ಲಿ ಇಂಡಿಯಾ ಸ್ವೀಟ್ ಹೌಸ್ನ 31 ನೇ ಮಳಿಗೆ ಉದ್ಘಾಟನೆ ಆಗಿರುವುದು ಇದರ ಅಭಿವೃದ್ಧಿಗೆ ಸಾಕ್ಷಿ ಆಗಿದೆ. ಅಧಿಕೃತ ಭಾರತೀಯ ಸಿಹಿ ತಿಂಡಿಗಳು ಮತ್ತು ಖಾರಗಳನ್ನು ಒದಗಿಸುವ ಸಂಸ್ಥೆಯ ಬದ್ಧತೆಗೆ ಈ ಬೆಳವಣಿಗೆ ಸಾಕ್ಷಿ ಆಗಿದೆ ಎಂದರು.

ಆರೋಗ್ಯಕ ಹಾಗೂ ಅನಾರೋಗ್ಯಕ್ಕೆ ಆಹಾರ ಮುಖ್ಯ ಆಗಿರುತ್ತದೆ. ಅದರಂತೆ ಈ ಬದ್ಧತೆಯಲ್ಲಿ ಇಂಡಿಯಾ ಸ್ವೀಟ್ ಹೌಸ್ ಗ್ರಾಹಕರಿಗೆ ಜೀರ್ಣ ಆಗುವಂತಹ ಖಾದ್ಯಗಳನ್ನು ತಯಾರು ಮಾಡುವ ಮೂಲಕ 31ನೇ ಮಳಿಗೆ ಆರಂಭಿಸುತ್ತಿದ್ದಾರೆ. ಸಿಹಿ ಪ್ರಿಯ ಕೃಷ್ಣ, ಹಾಗಾಗೀ ಉಡುಪಿಯಲ್ಲಿ ಆರಂಭ ಆಗಿರುವ ಭಾರತೀಯ ಸಿಹಿ ಮನೆ ಮತ್ತಷ್ಟು ಸಂಸ್ಥೆಗಳನ್ನು ದೇಶದಾದ್ಯಂತ ವಿಸ್ತರಣೆ ಮಾಡುವಂತೆ ಆಗಲಿ ಎಂದರು.

ನಟ ಸಿಹಿಕಹಿ ಚಂದ್ರು ಅವರು ಮಾತನಾಡಿ, ಇಂಡಿಯಾ ಸ್ವೀಟ್ ಹೌಸ್ ಪ್ರಾರಂಭ ಮಾಡಿರುವುದರ ಹಿಂದೇ ಸಾಕಷ್ಟು ಶ್ರಮ ಇದೆ. ಮೂರು ವರ್ಷಗಳ ಹಿಂದೆ ಆರಂಭಗೊಂಡಿರುವ ಇಂಡಿಯಾ ಸ್ವೀಟ್ ಹೌಸ್ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದ್ದೆ. ಈ ಸಂಸ್ಥೆಯಲ್ಲಿ ದುಡಿಯುವ ಎಲ್ಲ ವರ್ಗ ನಮ್ಮದೇ ಸಹಿ ಸಂಸ್ಥೆ ಎನ್ನುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಶ್ವನಾಥ್ ಮೂರ್ತಿ ಅವರು ಮಾತನಾಡಿ, ಇಂಡಿಯಾ ಸ್ವೀಟ್ ಹೌಸ್ ಭಾರತೀಯ ಸಿಹಿ ತಿಂಡಿಗಳ ವೈವಿಧ್ಯಮಯ ಶ್ರೇಣಿ ಹೊಂದಿದೆ. ಗ್ರಾಹಕರು ಅಭಿರುಚಿಗೆ ತಕ್ಕಂತೆ ಖಾದ್ಯಗಳನ್ನು ತಯಾರಿಸಲಾಗಿದೆ. ಮೈಸೂರು ಪಾಕ್ ಜತೆಗೆ ಬೆಂಗಾಲಿ ಸಿಹಿ ತಿಂಡಿಗಳಾದ ಕ್ಷೀರ್ ಮೋಹನ್ ಮತ್ತು ರಸ್ಮಂಜೂರಿ ಕೂಡ ಸವಿಯಬಹುದು. ಉತ್ತರ ಭಾರತದ ನೆಚ್ಚಿನ ತಿಂಡಿಗಳಾದ ಗುಲಾಬ್ ಜಾಮೂನ್ ಮತ್ತು ಜಲೇಬಿಯಿಂದ ಹಿಡಿದು ರಾಜಸ್ಥಾನದ ಡ್ರೈಫ್ರೂಟ್ ಪೇಡಾಗಳವರೆಗೆ ಇಂಡಿಯಾ ಸ್ವೀಟ್ ಹೌಸ್ ಎಲ್ಲ ತರಹದ ಸಿಹಿ ತಿಂಡಿಗಳನ್ನು ಗ್ರಾಹಕರಿಗೆ ನೀಡುವ ಕೆಲಸ ಮಾಡಿದೆ. ಇನ್ನು ಘಮಘಮಿಸುವ ಲೈವ್ ಚಾಟ್ ಕೌಂಟರ್ ಅನ್ನು ಒಳಗೊಂಡಿದೆ. ಸ್ಟಫ್ಡ್ ಚಿಲ್ಲಿ ಬಜ್ಜಿ, ಆಲೂ ಮತ್ತು ಈರುಳ್ಳಿ ಸಮೋಸಾ ಮತ್ತು ತುಪ್ಪದ ಜಲೇಬಿ ಸೇರಿದಂತೆ ಹಲವಾರು ತಿಂಡಿಗಳು ಲಭ್ಯ ಇವೆ ಎಂದರು.

ಇಂಡಿಯಾ ಸ್ವೀಟ್ ಹೌಸ್ ಮಳಿಗೆಯಲ್ಲಿ 300 ಕ್ಕೂ ಹೆಚ್ಚು ಬಗೆ ಸಿಹಿ ತಿಂಡಿಗಳು, ಖಾರಗಳು ಮತ್ತು ಚಾಟ್‌ ಉತ್ಪನ್ನಗಳ ಶ್ರೇಣಿ ಲಭ್ಯವಿದೆ. ಈ ಮಳಿಗೆಯಲ್ಲಿ ಗ್ರಾಹಕರಿಗೆ ಆರಾಮದಾಯಕವಾಗಿ ಕುಳಿತು ಸಿಹಿ ತಿಂಡಿ ಸವಿಯಲು ವಿಶಾಲ ಜಾಗವಿದ್ದು, ಆಸನ ವ್ಯವಸ್ಥೆ ಮಾಡಲಾಗಿದೆ. ಸ್ನೇಹಿತರು ಮತ್ತು ಕುಟುಂಬದ ಜತೆ ತಮ್ಮ ಇಷ್ಟದ, ರುಚಿಕರ ಸಿಹಿ ತಿಂಡಿಗಳನ್ನು ಸೇವನೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಸ್ವೀಟ್ ಹೌಸ್‌ನ ಸಹ-ಸಂಸ್ಥಾಪಕ ಶ್ವೇತಾ ರಾಜಶೇಖರ್ ಸೇರಿದಂತೆ ಹಲವರು ಇದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

Paris Olympics 2024: ಜಾವಲಿನ್‌ ಥ್ರೋನಲ್ಲಿ ಕೈ ಜಾರಿದ ಚಿನ್ನ , ಬೆಳ್ಳಿಗೆ ತೃಪ್ತಿ ಪಟ್ಟುಕೊಂಡ ನೀರಜ್‌ ಚೋಪ್ರಾ

Next Post

ಉಪ್ಪಿನಂಗಡಿ: ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

Related Posts

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ
ಕರಾವಳಿ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
135
ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ
ಕರಾವಳಿ

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ

July 5, 2025
69
Next Post
ಉಪ್ಪಿನಂಗಡಿ: ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಉಪ್ಪಿನಂಗಡಿ: ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
135
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d