• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಕಳ್ಳಸಾಗಣೆ: 70 ಕಿಂಗ್ ಕೋಬ್ರಾ ಮತ್ತು ಹೆಬ್ಬಾವುಗಳ ರಕ್ಷಣೆ, 6 ಮಂಗಗಳ ಸಾವು , ಬೆಚ್ಚಿಬಿದ್ದ ಅಧಿಕಾರಿಗಳು

Coastal Times by Coastal Times
September 9, 2023
in ರಾಷ್ಟ್ರೀಯ ಸುದ್ದಿ
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಕಳ್ಳಸಾಗಣೆ: 70 ಕಿಂಗ್ ಕೋಬ್ರಾ ಮತ್ತು ಹೆಬ್ಬಾವುಗಳ ರಕ್ಷಣೆ, 6 ಮಂಗಗಳ ಸಾವು , ಬೆಚ್ಚಿಬಿದ್ದ ಅಧಿಕಾರಿಗಳು
165
VIEWS
WhatsappTelegramShare on FacebookShare on Twitter

ಬೆಂಗಳೂರು: ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್‌ನಿಂದ ಬಂದ ಏರ್ ಏಷ್ಯಾ ವಿಮಾನದಲ್ಲಿ ಲಗೇಜ್ ಅನ್ನು ತಡೆದ ಅಧಿಕಾರಿಗಳು 78 ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳಲ್ಲಿ ಆರು ಕಪುಚಿನ್ ಮಂಗಗಳು ಸತ್ತಿದ್ದು, ಎಲ್ಲಾ ಹೆಬ್ಬಾವುಗಳು ಮತ್ತು ಕಿಂಗ್ ಕೋಬ್ರಾಗಳನ್ನು ಜೀವಂತವಾಗಿ ರಕ್ಷಿಸಲಾಗಿದೆ. ಹದಿನೈದು ದಿನಗಳಲ್ಲಿ ಇದೇ ಏರ್ ಏಷ್ಯಾ ರಾತ್ರಿ ವಿಮಾನದಲ್ಲಿ ಥಾಯ್ಲೆಂಡ್‌ನಿಂದ ಕಳ್ಳಸಾಗಣೆಯಾಗುತ್ತಿರುವ ಕಾಡು ಪ್ರಾಣಿಗಳ ಎರಡನೇ ಪ್ರಕರಣ ಇದಾಗಿದೆ.
ಲಗೇಜ್ ಪಡೆಯಲು ಯಾರೂ ಮುಂದೆ ಬಂದಿಲ್ಲ ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೆಪ್ಟೆಂಬರ್ 6ರಂದು ರಾತ್ರಿ 10.30ಕ್ಕೆ ಆಗಮಿಸಿದ ವಿಮಾನದಲ್ಲಿ (ಎಫ್‌ಡಿ 137) ಹಕ್ಕು ಪಡೆಯದ ಸಾಮಾನು ಸರಂಜಾಮುಗಳಲ್ಲಿ ಪ್ರಾಣಿಗಳು ಕಂಡುಬಂದಿವೆ. ವಿಮಾನದಲ್ಲಿ ಆಗಮಿಸಿದ್ದ ಯುವತಿ ಮತ್ತು ಆಕೆಯ ಸಹಚರನ ವಿರುದ್ಧ ಶಂಕೆ ವ್ಯಕ್ತವಾಗಿದ್ದು ಇಬ್ಬರೂ ಭಾರತೀಯ ಪ್ರಜೆಗಳಾಗಿದ್ದಾರೆ. ಪ್ರಸ್ತುತ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಾವು ಸಿಸಿಟಿವಿ ಸ್ಕ್ಯಾನ್ ಮಾಡುತ್ತಿದ್ದೇವೆ. ಪ್ರಯಾಣಿಕರ ಹಿನ್ನೆಲೆಯನ್ನು ಗುರುತಿಸಲು ವಿಮಾನಯಾನ ಸಂಸ್ಥೆಗಳ ಸಹಾಯವನ್ನು ಕೋರಿದ್ದೇವೆ ಎಂದರು.

ಅಧಿಕೃತ ಪ್ರಕಟಣೆಯ ಪ್ರಕಾರ, ವಿವಿಧ ಬಣ್ಣಗಳ 55 ಬಾಲ್ ಹೆಬ್ಬಾವುಗಳನ್ನು ಒಳಗೊಂಡಿರುವ ಒಟ್ಟು 78 ಪ್ರಾಣಿಗಳು ಮತ್ತು 17 ಕಿಂಗ್ ಕೋಬ್ರಾಗಳು ಜೀವಂತವಾಗಿ ಮತ್ತು ಸಕ್ರಿಯ ಸ್ಥಿತಿಯಲ್ಲಿ ಕಂಡುಬಂದಿವೆ. ಆರು ಕಪುಚಿನ್ ಕೋತಿಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕಸ್ಟಮ್ಸ್ ಆಕ್ಟ್, 1962ರ ಸೆಕ್ಷನ್ 110ರ ಅಡಿಯಲ್ಲಿ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

 

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು |ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

Next Post

ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ – ಶ್ಯಾಮಲಾ ಮಾಧವ

Related Posts

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!
ರಾಷ್ಟ್ರೀಯ ಸುದ್ದಿ

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

December 18, 2025
35
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
33
Next Post
ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ – ಶ್ಯಾಮಲಾ ಮಾಧವ

ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ - ಶ್ಯಾಮಲಾ ಮಾಧವ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
16
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d